ಕಾರ್ಮಿಕರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ

165 ಕೋಟಿ ರೂ. ಅನುದಾನ ಬಿಡುಗಡೆ; ಅರ್ಜಿ ಸಲ್ಲಿಕೆ ಅವಧಿ ಆ.15ರವರೆಗೆ ವಿಸ್ತರಣೆ: ಶಿವರಾಮ್‌ ಹೆಬ್ಟಾರ್‌

Team Udayavani, Jul 31, 2020, 7:15 AM IST

ಕಾರ್ಮಿಕರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ

ರಾಯಚೂರು: ನಗರದ ಇಎಸ್‌ಐ ಆಸ್ಪತ್ರೆಗೆ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌ ಭೇಟಿ ನೀಡಿದರು.

ರಾಯಚೂರು: ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಕಾರ್ಮಿಕರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್‌ ಹೆಬ್ಟಾರ್‌ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಕ್‌ಡೌನ್‌ ವೇಳೆ  ಅಸಂಘಟಿತ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದರು. ಅಗಸರು, ಕ್ಷೌರಿಕರಿಗೆ ಒಂದು ಬಾರಿ ಐದು ಸಾವಿರ ರೂ.
ಪರಿಹಾರ ನೀಡಲು ನಿರ್ಧರಿಸಲಾಯಿತು. ಇದಕ್ಕಾಗಿ 165 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ರಾಜ್ಯದಲ್ಲಿ 48,500 ಜನ ಫಲಾನುಭವಿಗಳಿಗೆ ಕೋಟ್ಯಂತರ ರೂ. ಪ್ರೋತ್ಸಾಹಧನ ನೀಡಲಾಗಿದೆ. 2.25 ಲಕ್ಷ ಕ್ಷೌರಿಕರು ಹಾಗೂ 70 ಸಾವಿರ ಅಗಸರಿಗೆ ಪರಿಹಾರ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರಿಕ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಆಯಾ ಪಿಡಿಒ ಅಧಿ ಕಾರಿಗಳು ದೃಢೀಕರಣ ಪತ್ರ ನೀಡಬೇಕು. ತಂತ್ರಾಂಶದಲ್ಲಿ ಅರ್ಜಿಗಳು ಬೇಗನೇ ಅಪ್‌ಲೋಡ್‌ ಆಗದ ಕಾರಣ ಅರ್ಜಿ ಸಲ್ಲಿಕೆ ಅವಧಿ ಆ.15ರವರೆಗೆ ವಿಸ್ತರಿಸಲಾಗಿದೆ ಎಂದರು.

ಸಾಕಷ್ಟು ಔಷಧ ಲಭ್ಯವಿದೆ. ವರ್ಷಕ್ಕೆ ಐದೂವರೆ ಕೋಟಿ ರೂ. ಔಷಧವನ್ನು ದಾಸ್ತಾನು ಮಾಡ ಲಾಗುತ್ತಿದೆ. ಜಿಲ್ಲೆ ಹಿಂದುಳಿದ ಪ್ರದೇಶವಾಗಿದ್ದು, ಇಎಸ್‌ಐ ಆಸ್ಪತ್ರೆಯ ಎಲ್ಲ ವೈದ್ಯರನ್ನು ಭರ್ತಿ ಮಾಡಲಾಗಿದೆ. ಆದರೆ, ದಿನಕ್ಕೆ 25 ರಿಂದ 30 ರೋಗಿಗಳು ಮಾತ್ರ ಚಿಕಿತ್ಸೆಗೆ ಬರುತ್ತಿದ್ದಾರೆ. ಇಎಸ್‌ಐ ಕಾರ್ಡ್‌ ಪಡೆದವರೊಂದಿಗೆ ಬಡ ರೋಗಿಗಳು ಅಲ್ಲಿ ಚಿಕಿತ್ಸೆ ಪಡೆಯಬಹುದು. ಈ ಬಗ್ಗೆ ಅಲ್ಲಿಯ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿಲ್ಲಾ ಧಿಕಾರಿಗೆ ನಿರ್ದೇಶನ ನೀಡಿದರು.

ಬಾಯ್ಲರ್‌ ಹಾಗೂ ಕಾರ್ಖಾನೆಗಳಲ್ಲಿ ಕೆಲವೊಮ್ಮೆ ಅವಘಡಗಳು ಸಂಭವಿಸದಾಗ ಮಾನವೀಯ ದೃಷ್ಟಿಯಿಂದ ಕೂಡಲೇ ನೆರವು ಕಲ್ಪಿಸುವಂತೆ ಸೂಚಿಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಕಾರ್ಖಾನೆಗಳನ್ನು ಕಡ್ಡಾಯವಾಗಿ ತೆರೆಯಲೇಬೇಕು ಎನ್ನುವ ಒತ್ತಡ ಹಾಕಬಾರದು. ಕಾರ್ಮಿಕ ಇಲಾಖೆ  ಹಾಗೂ ಕಾರ್ಖಾನೆಗಳ ಮಾಲೀಕರು ಕಾರ್ಮಿಕರಿಗೆ ಸೇತುವೆ ಇದ್ದಹಾಗೆ. ಅವರಿಗೆ
ಕಿರುಕುಳ ಆಗದಂತೆ ನೋಡಿಕೊಳ್ಳಿ ಎಂದರು.

ಈ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು. ಅದಕ್ಕೂ ಮುನ್ನ ಸಚಿವರು ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸಿದರು. ಸಭೆಯ ನಂತರದಲ್ಲಿ ವಿವಿಧ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಬಾಂಡ್‌ಗಳು ಹಾಗೂ ಚೆಕ್‌ಗಳನ್ನು ವಿತರಿಸಲಾಯಿತು.

ಇನ್ನೂ ಮೂರು ವರ್ಷ ಸಿಎಂ ಬದಲಾವಣೆ ಇಲ್ಲ
ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ. ಮೂರು ವರ್ಷಗಳ ಕಾಲ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಪ್ರಶ್ನೆ ಎಲ್ಲೂ ಉದ್ಭವವಾಗಿಲ್ಲ. ಸಚಿವ ಸಂಪುಟದ ವಿಸ್ತರಣೆ ಬಿಎಸ್‌ವೈ ಪರಮಾಧಿಕಾರ. ಯಾವಾಗ
ಮಾಡಬೇಕು ಎಂಬುದು ಕೂಡ ಅವರ ವಿವೇಚನೆಗೆ ಬಿಟ್ಟ ವಿಚಾರ. ಹೈಕಮಾಂಡ್‌ ಮತ್ತು ಸಿಎಂ ಈ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷ ಕೂಡ ಇದನ್ನು ನಿಭಾಯಿಸಲು ಸಮರ್ಥವಾಗಿದೆ. ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಪಕ್ಷದ ಸಂಪೂರ್ಣ ಸಹಕಾರವಿದೆ. ಎಚ್‌.ವಿಶ್ವನಾಥ ಅವರಿಗೆ ಎಂಎಲ್‌ಸಿ ಸ್ಥಾನ ನೀಡುವ ವಿಚಾರದ ಬಗ್ಗೆ ಸಿಎಂಗೆ ಎಲ್ಲರೂ ಮನವಿ ಮಾಡಿದ್ದೇವು. ಅದರಂತೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟ ವಿಚಾರ. ಆದರೆ, ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಶಕ್ತಿ ಮುಖ್ಯಮಂತ್ರಿಗಳಿಗಿದೆ ಎಂದರು.

ಡಿಸಿ ತರಾಟೆಗೆ
ಸಚಿವರು ಡಿಸಿ ಕಚೇರಿ ಸಭಾಂಗಣಕ್ಕೆ ಆಗಮಿಸಿದಾಗ ಅಲ್ಲಿ ಡಿಸಿ ಇಲ್ಲದ್ದನ್ನು ಗಮನಿಸಿದ ಸಚಿವ ಶಿವರಾಮ್‌ ಹೆಬ್ಟಾರ್‌ ಗರಂ ಆದರು. ನಾವು ನೂರಾರು ಕಿಮೀ ಯಾಕೆ ಬರಬೇಕು. ಎಲ್ಲಿ ಜಿಲ್ಲಾ ಧಿಕಾರಿ ಬರಲು ಹೇಳಿ ಎಂದು ಖಡಕ್‌ ಆಗಿಯೇ ಸೂಚಿಸಿದರು. ಇದರಿಂದ ಸಭೆಗೆ ಡಿಸಿ ಸೇರಿದಂತೆ ಇತರೆ ಅ ಧಿಕಾರಿಗಳು ದೌಡಾಯಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.