ಕುವೈತ್‌ನಲ್ಲಿ 200 ಕನ್ನಡಿಗರು ಅತಂತ್ರ; ಉದ್ಯೋಗವೂ ಇಲ್ಲ, ಸಂಬಳವೂ ಇಲ್ಲ; ನೆರವಿಗೆ ಮೊರೆ


Team Udayavani, Jul 31, 2020, 7:26 AM IST

ಕುವೈತ್‌ನಲ್ಲಿ 200 ಕನ್ನಡಿಗರು ಅತಂತ್ರ; ಉದ್ಯೋಗವೂ ಇಲ್ಲ, ಸಂಬಳವೂ ಇಲ್ಲ; ನೆರವಿಗೆ ಮೊರೆ

ಬೀದರ: ಕುವೈತ್‌ನಲ್ಲಿ ಸಿಲುಕಿಕೊಂಡಿರುವ ಬೀದರ ಮತ್ತು ಕಲಬುರಗಿ ಜಿಲ್ಲೆಯ ಯುವಕರು.

ಬೀದರ: ಹೆಮ್ಮಾರಿ ಕೋವಿಡ್ ಅಟ್ಟಹಾಸದಿಂದಾಗಿ ಗಲ್ಫ್ ರಾಷ್ಟ್ರದಲ್ಲಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಯಲ್ಲಿ ಉದ್ಯೋಗವೂ ಇಲ್ಲದೆ, ಖರ್ಚಿಗೆ ಹಣವೂ ಇಲ್ಲದೆ
ಪರಿತಪಿಸುತ್ತಿರುವ ಬೀದರ ಮತ್ತು ಕಲಬುರಗಿ ಜಿಲ್ಲೆಯ ಕನ್ನಡಿಗರು ತಾಯ್ನಾಡಿಗೆ ಕರೆಸಿಕೊಳ್ಳುವಂತೆ ಕಣ್ಣೀರು ಹಾಕುತ್ತಿದ್ದಾರೆ.

ಕೋವಿಡ್‌-19 ವಿಶ್ವದಾದ್ಯಂತ ಹಬ್ಬುತ್ತಲೇ ಇದ್ದು ಬಹುತೇಕ ರಾಷ್ಟ್ರಗಳು ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಅರಬ್‌ ದೇಶದ ಕುವೈತ್‌ನಲ್ಲಿ ನೆಲೆಸಿರುವ
ನೂರಾರು ಕನ್ನಡಿಗರು ಈಗ ಕೊರೊನಾ ಸಂಕಷ್ಟದಿಂದ ಕೆಲಸ ಕಳೆದುಕೊಂಡಿದ್ದಾರೆ. ಈ ಪೈಕಿ ಬೀದರ ಜಿಲ್ಲೆಯ ಸುಮಾರು 150 ಮತ್ತು ಕಲಬುರಗಿ ಜಿಲ್ಲೆಯ 50ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಅವರೆಲ್ಲರೂ ಈಗ ತವರಿಗೆ ಮರಳಲು ಹವಣಿಸುತ್ತಿದ್ದು, “ದಯವಿಟ್ಟು ನಮ್ಮ ನೆರವಿಗೆ ಬನ್ನಿ’ ಎಂದು ವಿಡಿಯೋ ಸಂದೇಶಗಳ ಮೂಲಕ ಸರ್ಕಾರಕ್ಕೆ
ಮನವಿ ಮಾಡುತ್ತಿದ್ದಾರೆ.

ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಹಾಗೂ ಹೈದ್ರಾಬಾದ್‌ ಮೂಲದ ಮೇಘಾ ಕಂಪನಿಯ ಅವಾಂತರದಿಂದ ಈ ಕನ್ನಡಿಗರು ಕುವೈತ್‌ ನಲ್ಲಿ ಉಳಿದುಕೊಂಡು ಪರಿತಪಿಸುತ್ತಿದ್ದಾರೆ. ಸಣ್ಣ ಕಟ್ಟಡವೊಂದರಲ್ಲೇ ನೆಲೆಸಿರುವ ನೂರಾರು ಜನ ಜೀವ ಭಯದಲ್ಲೇ ಕಾಲ ಕಳೆಯುತ್ತಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ತಮ್ಮನ್ನು ಕರೆದೊಯ್ಯಲು ಕ್ರಮ ವಹಿಸುವಂತೆ ಅಂಗಲಾಗುತ್ತಿದ್ದಾರೆ.

ಮೇಘಾ ಮೋಸ: ಹೈದ್ರಾಬಾದ್‌ನ ಮೇಘಾ ಇನ್ಫ್ರಾಸ್ಟ್ರಕ್ಚರ್‌ ಕಂಪನಿ ಕಳೆದ ಮೂರು ವರ್ಷಗಳ ಹಿಂದೆ ಈ ಕನ್ನಡಿಗರನ್ನು ದುಡಿಮೆಗಾಗಿ ಕುವೈತ್‌ ದೇಶಕ್ಕೆ ಕರೆದೊಯ್ದಿದ್ದು, ಅದರಲ್ಲಿ
ಬೀದರ ಜಿಲ್ಲೆಯ ಹುಮನಾಬಾದ, ಭಾಲ್ಕಿ ಮತ್ತು ಬಸವಕಲ್ಯಾಣ ತಾಲೂಕಿನವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ಮೇಘಾ ಕಂಪನಿ ಈ ನೌಕರರನ್ನು ಅರ್ಧದಲ್ಲೇ ಕೈಬಿಟ್ಟಿದೆ. ಆರು ತಿಂಗಳಿಂದ ವೇತನವೂ ಇಲ್ಲ, ಇರಲು ಮನೆಯೂ ಕಲ್ಪಿಸಿಲ್ಲ. ಅಷ್ಟೇ ಅಲ್ಲ ಭಾರತಕ್ಕೆ ತೆರಳಲು ವಿಮಾನ ಟಿಕೆಟ್‌ ಮಾಡಿಸಿರುವುದಾಗಿ ಸುಳ್ಳು ಹೇಳುತ್ತಾ ಬಂದಿದ್ದು, ನಕಲಿ ಟಿಕೆಟ್‌ ಗಳನ್ನು ತೋರಿಸಿ ಮೋಸ ಮಾಡಿದೆ ಎಂದು ಕನ್ನಡಿಗ ನೌಕರರು ಅಳಲು ತೋಡಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿಂದ ಮೇಘಾ ಕಂಪನಿ ಕುವೈತ್‌ನಲ್ಲಿ ತನ್ನ ಕಚೇರಿ ಬಂದ್‌ ಮಾಡಿಕೊಂಡಿದೆ. ಈಗ ನಮ್ಮನ್ನು ರಕ್ಷಿಸುವವರೇ ಇಲ್ಲದಂತಾಗಿ ಅತಂತ್ರಕ್ಕೆ ಸಿಲುಕಿದ್ದೇವೆ. ಬೇರೆ ರಾಷ್ಟ್ರಗಳಲ್ಲಿದ್ದ ಕನ್ನಡಿಗರನ್ನು ವಂದೇ ಭಾರತ್‌ ಮಿಷನ್‌ ನಲ್ಲಿ ಕರೆದುಕೊಂಡು ಬಂದಂತೆ, ನಮ್ಮನ್ನು ಸಹ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಬೀದರನ ಶಿವಕುಮಾರ,
ಬಸವಕಲ್ಯಾಣದ ರಾಜಕುಮಾರ ಇನ್ನಿತರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕುವೈತ್‌ನಲ್ಲಿ ಬೀದರ ಮತ್ತು ಕಲಬುರಗಿ ಯುವಕರು ಸಿಲುಕಿಕೊಂಡಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವರ ಮಾಹಿತಿ ಪಡೆಯುತ್ತಿದ್ದೇನೆ. ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆಯಿಸಿಕೊಳ್ಳಲು ಪ್ರಯತ್ನ ಮಾಡುತ್ತೇನೆ. ಈಶ್ವರ ಖಂಡ್ರೆ, ಭಾಲ್ಕಿ ಶಾಸಕರು, ಮತ್ತು ಕಾರ್ಯಾಧ್ಯಕ್ಷರು, ಕೆಪಿಸಿಸಿ

ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.