ಉದ್ಯೋಗ ಭದ್ರತೆಗೆ ಆಗ್ರಹಿಸಿ ಮನವಿ
Team Udayavani, Aug 1, 2020, 5:22 PM IST
ಬೀದರ: ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮನವಿ ಮಾಡಿದೆ.
ಈ ಕುರಿತು ಸಂಘದ ಜಿಲ್ಲಾಧ್ಯಕ್ಷ ಗೌತಮ್ ಕಸ್ತೂರೆ, ಉಪಾಧ್ಯಕ್ಷ ಉತ್ತಮ ದಂಡೆ ಮತ್ತು ಕಾರ್ಯದರ್ಶಿ ಪರಮೇಶ್ವರ ದುಬಲಗುಂಡೆ ನೇತೃತ್ವದಲ್ಲಿ ಮತ್ತಿತರರು ಡಿಸಿ ಅವರನ್ನು ಭೇಟಿ ಮಾಡಿ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸರ್ಕಾರಕ್ಕೆ ತಗಲುವ ಖರ್ಚಿನಿಂದ ತಪ್ಪಿಸಿಕೊಳ್ಳಲು ನಮ್ಮನ್ನು “ಅರೆಕಾಲಿಕ’, “ಅತಿಥಿ’ ಉಪನ್ಯಾಸಕರು ಎಂದು ಕರೆಯುವ ಅಸಹ್ಯಕರ ಪದ್ಧತಿಚಾಲ್ತಿಯಲ್ಲಿರುವುದು ದುರಂತ. ಸರ್ಕಾರಗಳ ನೀತಿಯಿಂದಾಗಿ “ಸಮಾನ ಕೆಲಸಕ್ಕೆ ಸಮಾನ ವೇತನ’ ಪಡೆಯುವ ನಮ್ಮ ಸಂವಿಧಾನದ ಹಕ್ಕಿನ ಹರಣವಾಗಿದೆ. ಸರ್ಕಾರಗಳೇ ಈ ನೆಲದ ಕಾನೂನನ್ನು ಗಾಳಿಗೆ ತೂರಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ