ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಪ್ರಸ್ತಾವನೆಗೆ ಒಪ್ಪಿಗೆ
ರಾಜ್ಯಪಾಲ ಬಿಶ್ವಭೂಷಣ್ ಹರಿಚಂದನ್ ಅನುಮೋದನೆ; ರಾಜಧಾನಿ ಹೆಸರಲ್ಲಿ ದಾಖಲೆ ಬರೆದ ಆಂಧ್ರ
Team Udayavani, Aug 2, 2020, 6:30 AM IST
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಲವು ವಿರೋಧಗಳ ನಡುವೆಯೂ ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದ್ದಾರೆ.
ಆಂಧ್ರ ಪ್ರದೇಶದಲ್ಲಿ 3 ರಾಜಧಾನಿ ಹೊಂದುವ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
3 ರಾಜಧಾನಿಗಳನ್ನು ಹೊಂದಬೇಕು ಎಂದು ಪಟ್ಟು ಹಿಡಿದಿದ್ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಲವು ವಿರೋಧಗಳ ನಡುವೆಯೂ ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದ್ದಾರೆ.
ಕಾರ್ಯಾಂಯಾಂಗ ರಾಜಧಾನಿಯಾಗಿ ವಿಶಾಖಪಟ್ಟಣ, ಶಾಸಕಾಂಗ ರಾಜಧಾನಿಯಾಗಿ ಅಮರಾವತಿ, ನ್ಯಾಯಾಂಗ ರಾಜಧಾನಿಯಾಗಿ ಕರ್ನೂಲು ಆಯ್ಕೆಯಾಗಿದೆ. ಈ ಮೂಲಕ, ಭಾರತದಲ್ಲಿ 3 ರಾಜಧಾನಿಗಳನ್ನು ಹೊಂದಿರುವ ಏಕೈಕ ರಾಜ್ಯವಾಗಿ ಆಂಧ್ರ ಹೊರಹೊಮ್ಮಿದೆ.
ಅಮರಾವತಿ ಬದಲಾವಣೆ ಏಕೆ? ತೆಲಂಗಾಣದಿಂದ ಪ್ರತ್ಯೇಕಗೊಂಡ ಆಂಧ್ರಪ್ರದೇಶಕ್ಕೆ ಅಮರಾವತಿಯೇ ರಾಜಧಾನಿ ಎಂದು ಬಹುತೇಕವಾಗಿ ನಿರ್ಧಾರವಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಚಂದ್ರಬಾಬು ನಾಯ್ದು ಅಮರಾವತಿಯನ್ನು ‘ಗ್ರೀನ್ ಕ್ಯಾಪಿಟಲ್’ ಮಾಡಲು 30 ಸಾವಿರಕ್ಕೂ ಅಧಿಕ ಎಕರೆ ಜಮೀನನ್ನು ಖರೀದಿಸಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು, ನೆರವನ್ನೂ ಪಡೆಯಲಾಗಿತ್ತು.
ಇನ್ನೇನು ಅಂತಿಮ ಹಂತ ತಲುಪಬೇಕು ಎನ್ನುವಷ್ಟರಲ್ಲಿ ಚಂದ್ರಬಾಬು ನಾಯ್ಡು ಅಧಿಕಾರ ಕಳೆದುಕೊಂಡರು. ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಅಮರಾವತಿ ರಾಜಧಾನಿ ಯೋಜನೆ ರದ್ದುಪಡಿಸಿ, 3 ರಾಜಧಾನಿಗಳ ಪ್ರಸ್ತಾವ ಮಾಡಿದರು. ಹೆಚ್ಚು ರಾಜಧಾನಿಗಳಿರುವ ರಾಜ್ಯಗಳು ಹಿಮಾಚಲ ಪ್ರದೇಶ – ಶಿಮ್ಲಾ ಹಾಗೂ ಧರ್ಮಶಾಲಾ, ಮಹಾರಾಷ್ಟ್ರ – ಮುಂಬಯಿ ಹಾಗೂ ನಾಗ್ಪುರ.
ಮೂರು ನಗರಗಳಿಗೆ ರಾಜಧಾನಿ ಪಟ್ಟ
ಕಾರ್ಯಾಂಗ ರಾಜಧಾನಿಯಾಗಿರುವ ವಿಶಾಖಪಟ್ಟಣದಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಕಚೇರಿಗಳು ಇರಲಿವೆ. ಅಮರಾವತಿಯಿಂದ ವಿವಿಧ ಸಚಿವಾಲಯಗಳು, ಇಲಾಖೆಗಳ ಕಚೇರಿಗಳು ವಿಶಾಖಪಟ್ಟಣಕ್ಕೆ ಸ್ಥಳಾಂತರವಾಗಲಿವೆ.
ಅಮರಾವತಿ: ಶಾಸಕಾಂಗ ರಾಜಧಾನಿಯಾಗಿರುವ ಅಮರಾವತಿಯಲ್ಲಿ ಈಗಾಗಲೇ ಸಹಸ್ರಾರು ಕೋಟಿ ರೂ. ವ್ಯಯಿಸಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈ ನಗರದಲ್ಲಿ ವಿಧಾನಸಭಾ ಕಲಾಪಗಳು ನಡೆಯಲಿವೆ.
ಕರ್ನೂಲು: ನ್ಯಾಯಾಂಗ ರಾಜಧಾನಿಯಾಗಿ ರುವ ಕರ್ನೂಲಿಗೆ ಹೈಕೋರ್ಟ್ ಸ್ಥಳಾಂತರ ಗೊಳ್ಳಲಿದೆ. ಹೈಕೋರ್ಟ್ ಹಾಗೂ ನ್ಯಾಯಾಂಗಕ್ಕೆ ಸಂಬಂಧಿಸಿದ ಕಚೇರಿಗಳು ಈ ನಗರದಲ್ಲಿ ಇರಲಿವೆ.
ಕಾನೂನು ಸವಾಲು
ಜಗನ್ಮೋಹನ್ ರೆಡ್ಡಿ ಸರಕಾರ ರೂಪಿಸಿರುವ ಮೂರು ರಾಜಧಾನಿಗಳ ಕಾಯ್ದೆಯನ್ನು ವಿರೋಧಿಸಿ ರೈತರು ಈಗಾಗಲೇ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ, ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಅಮರಾವತಿಯನ್ನು ರಾಜಧಾನಿಯನ್ನಾಗಿಸಲು ರೈತರಿಂದ 30 ಸಾವಿರಕ್ಕೂ ಅಧಿಕ ಭೂಮಿಯನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಅಮರಾವತಿಯನ್ನು ಕೈಬಿಟ್ಟಿರುವುದರಿಂದ ಈ ವಿವಾದಗಳು ಇತ್ಯರ್ಥವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ