COVID ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಿದ ಮಹಿಳೆ: ಯಾರು ಈ ಬಿಜೆಪಿ ನಾಯಕಿ?

ಕೋವಿಡ್‌ 19 ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆ ನಡೆಸಿ ಎಲ್ಲರಿಗೂ ಮಾದರಿಯಾದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್

Team Udayavani, Aug 2, 2020, 9:07 PM IST

COVID ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಿದ ಮಹಿಳೆ: ಯಾರು ಈ ಬಿಜೆಪಿ ನಾಯಕಿ?

ಚಾಮರಾಜನಗರ: ಕೋವಿಡ್ 19 ಸೋಂಕಿನ ಕುರಿತಾಗಿ ಈಗಾಗಲೇ ಜನಸಮುದಾಯದಲ್ಲಿ ಹಲವಾರು ತಪ್ಪು ಕಲ್ಪನೆಗಳು ಹಾಗೂ ಅತಿರಂಜಿತ ಮಾಹಿತಿಗಳು ಹರಿದಾಡುತ್ತಿವೆ.

ಅದರಲ್ಲೂ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಕುರಿತಾಗಿಯೂ ಜನರಲ್ಲಿ ಹಲವಾರು ತಪ್ಪು ಕಲ್ಪನೆಗಳು ಮತ್ತು ಭೀತಿಯ ವಿಚಾರಗಳು ಮನೆಮಾಡಿದ್ದು. ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯ ಸಂಸ್ಕಾರವನ್ನು ನಡೆಸುವುದೇ ಒಂದು ಸವಾಲಿನ ವಿಚಾರವಾಗಿದೆ.

ಇವೆಲ್ಲದರ ನಡುವೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವೃತ್ತಿಯಲ್ಲಿ ವಕೀಲೆಯೂ ಆಗಿರುವ ನಾಗಶ್ರೀ ಪ್ರತಾಪ್ ಅವರು ನಗರ ಘಟಕದ ಪದಾಧಿಕಾರಿಗಳ ಜೊತೆ ಸೇರಿ, ಕೋವಿಡ್‌ 19 ಸೋಂಕಿನಿಂದ ಮೃತಪಟ್ಟ ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ನಡೆಸಿ ಮಾದರಿಯಾಗಿದ್ದಾರೆ.

ಭಾನುವಾರ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಗುಂಬಳ್ಳಿಯ 55 ವರ್ಷದ ಬೋವಿ ಸಮುದಾಯದ ಮಹಿಳೆ ಮೃತಪಟ್ಟಿದ್ದರು. ಈ ಮಹಿಳೆಯ ಅಂತ್ಯ ಸಂಸ್ಕಾರವನ್ನು ನಡೆಸಲು ಬಿಜೆಪಿ ಪದಾಧಿಕಾರಿಗಳು ಮುಂದೆ ಬಂದರು. ಆರು ಜನರಿದ್ದ ಈ ತಂಡದ ನೇತೃತ್ವವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್ ವಹಿಸಿ, ಅಂತ್ಯಕ್ರಿಯೆಯ ವಿಧಿ ವಿಧಾನವನ್ನು ನೆರವೇರಿಸಿದರು.


ನಗರದ ಎಡಬೆಟ್ಟದ ತಪ್ಪಲಿನಲ್ಲಿ, ಭಾನುವಾರ, ಜಿಲ್ಲಾಡಳಿತ ನಿಗದಿಪಡಿಸಿರುವ ಸ್ಥಳದಲ್ಲಿ, ಸರ್ಕಾರದ ಕೋವಿಡ್ 19 ಅಂತ್ಯಸಂಸ್ಕಾರದ ಶಿಷ್ಟಾಚಾರದಂತೆ, ಬಿಜೆಪಿ ಕಾರ್ಯಕರ್ತರು, ಪಿಪಿಇ ಕಿಟ್ ಧರಿಸಿ ಮಹಿಳೆಯ ಅಂತ್ಯಕ್ರಿಯೆ ನಡೆಸಿದರು. ನಾಗಶ್ರೀ ಅವರು ಮಹಿಳೆಯ ಕುಟುಂಬದವರ ಅಪೇಕ್ಷೆಯಂತೆ ಶವಕ್ಕೆ ಪೂಜೆ ನೆರವೇರಿಸಿ ಅಂತ್ಯ ಸಂಸ್ಕಾರ ಮಾಡಿದರು.

ಅಂತ್ಯಕ್ರಿಯೆ ನಡೆಸಿದ 6 ಜನರ ತಂಡದಲ್ಲಿ ಬಿಜೆಪಿ ನಗರಘಟಕ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ರಾಜೇಶ್‌ನಾಯಕ್, ಯುವ ಮೋರ್ಚಾ ಉಪಾಧ್ಯಕ್ಷ ಶಿವು, ಓಬಿಸಿ ಮೋರ್ಚಾದ ಮಹೇಶ್, ಅಟ್ಟುಗುಳಿಪುರ ಮಹದೇವಸ್ವಾಮಿ ಇದ್ದರು.

ಮೂರು ದಿನಗಳ ಹಿಂದೆ ಸಂತೆಮರಹಳ್ಳಿಯ ವ್ಯಕ್ತಿಯೊಬ್ಬರು ಕೋವಿಡ್‌ 19 ಸೋಂಕಿನಿಂದ ಗುಣಮುಖರಾದ ಬಳಿಕ ಮೃತಪಟ್ಟಿದ್ದರು. ನೆಗೆಟಿವ್ ಇದ್ದರೂ, ಮೃತರ ಕುಟುಂಬದವರಿಗೆ ಅಂತ್ಯಕ್ರಿಯೆ ನಡೆಸಲು ಅಡಚಣೆ ಎದುರಾಗಿತ್ತು.

ಆ ಸಂದರ್ಭದಲ್ಲಿಯೂ ನಾಗಶ್ರೀ ಪ್ರತಾಪ್ ಅವರು ಸ್ಥಳಕ್ಕೆ ತೆರಳಿ, ಮೃತರ ಕುಟುಂಬದವರಿಗೆ ಧೈರ್ಯ ಹೇಳಿ, ಹಿಂದೂ ಆಜಾದ್ ಸೇನೆಯ ಕಾರ್ಯಕರ್ತರೊಡಗೂಡಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಹೀಗೆ, ಕೋವಿಡ್ 19ನ ಈ ಸಂಕಷ್ಟದ ಸಂದರ್ಭದಲ್ಲಿ ಈ ಸೋಂಕಿಗೆ ಬಲಿಯಾದವರ ಅಂತ್ಯಸಂಸ್ಕಾರವನ್ನು ಗೌರವಯುತವಾಗಿ ನಡೆಸುವ ಮೂಲಕ ಮೃತಪಟ್ಟ ವ್ಯಕ್ತಿಯ ಕುಟುಂಬ ಸದಸ್ಯರ ನೋವಿಗೂ ಸ್ಪಂದಿಸುವ ಅಗತ್ಯತೆಯನ್ನು ನಾಗಶ್ರೀ ಪ್ರತಾಪ್ ಮತ್ತು ಅವರ ತಂಡ ತೋರಿಸಿಕೊಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.