ದುಃಖದ ಜತೆ ನೀರಿನ ಬವಣೆ ನೀಗಿಸಿದ ‘ಪ್ರಾಜೆಕ್ಟ್ ಹ್ಯಾಪಿನೆಸ್‌’


Team Udayavani, Aug 2, 2020, 9:59 PM IST

forest

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಆಕೆಗೆ 18 ವರ್ಷದಲ್ಲೇ ಮದುವೆಯಾಯಿತು. ಬಿ.ಕಾಂ ಪದವಿ ಪಡೆಯಬೇಕು ಎನ್ನುವ ಆಸೆಗೆ ಅನಿವಾರ್ಯ ಕಾರಣದಿಂದ ತಿಲಾಂಜಲಿ ಇಟ್ಟು ಪತಿ ಜತೆಗೆ ಕತಾರ್‌ಗೆ ತೆರಳಿದರು.

ಸುಮಾರು ಎಂಟು ವರ್ಷಗಳ ಅನಂತರ ದಂಪತಿ ಊರಿಗೆ ಮರಳಿದರು.

ಈ ಮಧ್ಯೆ ಹಿರಿಯ ಪುತ್ರ ಆಟಿಸಂನಿಂದ ಬಳಲುತ್ತಿದ್ದ ಮತ್ತು ಮಾತನಾಡಲು, ಸಂವಹನ ನಡೆಸಲು ಕಷ್ಟವಾಗುತ್ತಿತ್ತು.

ಜತೆಗೆ ಆಕೆಯ ಊರಲ್ಲಿ ನೀರಿಗೆ ಕ್ಷಾಮವಿತ್ತು. ಈ ಎಲ್ಲ ಸಮಸ್ಯೆಯಿಂದ ಹೊರ ಬರಲು ಆಕೆ ಕಂಡುಕೊಂಡ ದಾರಿ ಗಿಡಗಳನ್ನು ಬೆಳೆಸುವುದು. ಹೀಗೆ 56 ಸೆಂಟ್ಸ್‌ ಸ್ಥಳದಲ್ಲಿ ಕಾಡು ಬೆಳೆದ ಆಕೆ ತನ್ನ ಬೇಸರದಿಂದ ತಕ್ಕ ಮಟ್ಟಿಗೆ ಹೊರ ಬಂದರು.

ಇದು ಯಾವುದೇ ಕತೆಯಲ್ಲ. ಕೇರಳದ ಆಲಪ್ಪುಳ ಜಿಲ್ಲೆಯ ಮಾವೇಲಿಕ್ಕರ ಕುನ್ನಂನ ಜಯಶ್ರೀ ಎಂ.ಬಿ. ಯಶೋಗಾಥೆ. ಕಾಡು ಬೆಳೆಸುವುದನ್ನು ‘ಪ್ರಾಜೆಕ್ಟ್ ಹ್ಯಾಪಿನೆಸ್‌’ ಎಂದು ಕರೆಯುವ ಜಯಶ್ರೀ ಇದರಲ್ಲೇ ದುಃಖ ಮರೆತಿದ್ದಾರೆ, ಸಮಾಧಾನ ಕಂಡುಕೊಂಡಿದ್ದಾರೆ.

ಸಂಬಂಧಿಕರ ವಿರೋಧ
ಕಾಡು ಬೆಳೆಸುವ ತನ್ನ ನಿರ್ಧಾರ ಸುಲಭದ್ದೇನೂ ಆಗಿರಲಿಲ್ಲ ಎನ್ನುತ್ತಾರೆ ಜಯಶ್ರೀ. ‘ಪತಿ ವಿಶ್ವಂಭರ ಜತೆ ಕತಾರ್‌ನಿಂದ ಕುನ್ನಂಗೆ ಹಿಂದಿರುಗಿದ ಸಮಯ. ಇಲ್ಲಿ ನೀರಿಗೆ ಕೊರತೆಯಿತ್ತು. ಹೀಗಾಗಿ ನಾನು ಖಾಲಿ ಜಾಗದಲ್ಲಿ ಗಿಡಗಳನ್ನು ನೆಡಲು ನಿರ್ಧರಿಸಿದೆ. ಆಗ ನೆರೆ ಹೊರೆಯವರು, ಸಂಬಂಧಿಕರೆಲ್ಲ ನನ್ನನ್ನು ಗೇಲಿ ಮಾಡಿದರು. ಕಾಡು ಗಿಡಗಳನ್ನು ನೆಡುವ ಬದಲು ಮರಗೆಣಸು ಮುಂತಾದ ಆದಾಯ ತರುವ ಸಸಿಗಳನ್ನು ಬೆಳಸಬಹುದಲ್ಲ ಎಂದು ಪ್ರಶ್ನಿಸಿದರು.

ಆದರೆ ನನಗೆ ಅದು ಇಷ್ಟವಿರಲಿಲ್ಲ. ಕಾಡು ಬೆಳೆಸಬೇಕೆನ್ನುವ ನಿರ್ಧಾರದಲ್ಲಿ ಗಟ್ಟಿಯಾಗಿದ್ದೆ. ಹೀಗಾಗಿ 28 ವರ್ಷಗಳ ಹಿಂದೆ ತೇಗ, ಮಹಾಗನಿ, ಮಾವು, ಆಲ ಮುಂತಾದ ಗಿಡಗಳನ್ನು ನೆಟ್ಟೆ. ಇದೀಗ ನಮ್ಮೂರಿನಲ್ಲಿ ಕಾಡುತ್ತಿದ್ದ ನೀರಿನ ಸಮಸ್ಯೆ ಬಗೆಹರಿದಿದೆ. ಅಂದು ಟೀಕಿಸುತ್ತಿದ್ದವರೆಲ್ಲ ಶ್ಲಾ ಸುತ್ತಿದ್ದಾರೆ’ ಎಂದು ವಿವರಿಸುತ್ತಾರೆ ಜಯಶ್ರೀ.

ದುಃಖ ಮರೆಸಿತು
‘ಹಿರಿಯ ಪುತ್ರ ಆಟಿಸಂ ತೊಂದರೆ ಕಾಣಿಸಿಕೊಂಡಿತ್ತು. ಅನೇಕ ಚಿಕಿತ್ಸೆ ನೀಡಿದರೂ ಗುಣಮುಖನಾಗಿರಲಿಲ್ಲ. ಸಂವಹನ ನಡೆಸಲು ಆತನಿಗೆ ಕಷ್ಟವಾಗುತ್ತಿತ್ತು. ಈ ಸಮಯದಲ್ಲಿ ಎಲ್ಲ ಭರವಸೆಯನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ್ದೆ. ಆಗ ಕೈ ಹಿಡಿದದ್ದು ಗಿಡಗಳ ಒಡನಾಟ. ಅವುಗಳನ್ನು ಆರೈಕೆ ಮಾಡುತ್ತಾ ದುಃಖ ಮರೆತೆ’ ಎಂದು ಹೇಳುತ್ತಾರೆ ಜಯಶ್ರೀ.

2008ರಲ್ಲಿ ವಿಶ್ವಂಭರಂ ಕಾಯಿಲೆಯಿಂದ ನಿಧನ ಹೊಂದಿದರು. ಆಗ ಮಕ್ಕಳಿನ್ನು ಚಿಕ್ಕವರು. ಜಯಶ್ರೀ ಹೃದಯ ಚೂರಾಗಿತ್ತು.’ಆಗ ನಾನು ಸಂಪೂರ್ಣವಾಗಿ ಗಿಡಗಳ ಜತೆಗೆ ಸಮಯ ಕಳೆದೆ. ಇದರಿಂದ ನನಗೆ ಜೀವನೋತ್ಸಾಹ ಲಭಿಸಿತು’ ಎಂದು ಸ್ಮರಿಸಿಕೊಳ್ಳುತ್ತಾರೆ ಅವರು.
ಇದೀಗ ಮಕ್ಕಳು ದೊಡ್ಡವರಾಗಿದ್ದು, ಸಮಯ ಸಿಕ್ಕಾಗಲೆಲ್ಲ ತಾಯಿ ಜತೆ ಕೈ ಜೋಡಿಸುತ್ತಾರೆ. ದೊಡ್ಡ ಮಗ ವಿಷ್ಣು ಪಿಎಸ್‌ಸಿ ಪರೀಕ್ಷೆ ತಯಾರಾಗುತ್ತಿದ್ದರೆ ಕಿರಿಯ ಮಗ ವಿಶಾಖ್‌ ಪಿಎಚ್‌ಡಿ ಪಡೆದಿದ್ದಾನೆ. ಸುಮಾರು 50 ವಿಧದ ಮರ ಬೆಳೆದಿರುವ ಜಯಶ್ರೀ ಕೆಲವು ಔಷಧೀಯ ಗಿಡಗಳನ್ನೂ ಆರೈಕೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಗಿಡಗಳ ಸಹವಾಸದಿಂದ ದುಃಖ ಮರೆತ ಜಯಶ್ರೀ ಊರಿನ ನೀರಿನ ಸಮಸ್ಯೆಯನ್ನೂ ಬಗೆಹರಿಸಿ ಮಾದರಿಯಾಗಿದ್ದಾರೆ.

ರಮೇಶ್‌ ಬಳ್ಳಮೂಲೆ, ಕಾಸರಗೋಡು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.