BCCIಯಿಂದ ಪ್ರಮಾಣೀಕೃತ ಕಾರ್ಯಾಚರಣೆ ಪದ್ಧತಿ ರಚನೆ ; 60 ವರ್ಷ ಮೀರಿದವರಿಗೆ ಅವಕಾಶವಿಲ್ಲ


Team Udayavani, Aug 4, 2020, 6:41 AM IST

BCCIಯಿಂದ ಪ್ರಮಾಣೀಕೃತ ಕಾರ್ಯಾಚರಣೆ ಪದ್ಧತಿ ರಚನೆ ; 60 ವರ್ಷ ಮೀರಿದವರಿಗೆ ಅವಕಾಶವಿಲ್ಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಬಿಸಿಸಿಐ ದೇಶಿ ಕ್ರಿಕೆಟಿಗೆ ಸಂಬಂಧಿಸಿದಂತೆ ಪ್ರಮಾಣೀಕೃತ ಕಾರ್ಯಾಚರಣೆ ಪದ್ಧತಿಯನ್ನು (ಎಸ್‌ಒಪಿ) ಸೋಮವಾರ ಬಿಡುಗಡೆ ಮಾಡಿದೆ.

ಇದು 100 ಪುಟಗಳನ್ನು ಹೊಂದಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಸಿದ್ಧವಾಗಿದೆ.

ಈ ಪ್ರಕಾರ 60 ವರ್ಷ ಮೀರಿದ ಸಹಾಯಕ ಸಿಬಂದಿ, ಅಂಪಾಯರ್‌ಗಳು, ಮೈದಾನ ಸಿಬಂದಿ, ಇನ್ನಿತರ ಯಾವುದೇ ವ್ಯಕ್ತಿಗಳಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಜತೆಗೆ ಮಧುಮೇಹ, ರೋಗ ನಿರೋಧಕ ಶಕ್ತಿ ಕಡಿಮೆ ಹೊಂದಿರುವುದು, ಇನ್ನಿತರ ಆರೋಗ್ಯ ಸಮಸ್ಯೆ ಹೊಂದಿದ್ದರೆ ಅವರು ಕೋವಿಡ್ 19 ಸೋಂಕಿಗೆ ಸಿಲುಕುವ ಸಾಧ್ಯತೆ ಜಾಸ್ತಿ. ಅವರಿಗೆಲ್ಲ ಸರಕಾರದ ಹೊಸ ಆದೇಶ ಬರುವವರೆಗೆ ಅವಕಾಶ ನಿರಾಕರಿಸಲಾಗಿದೆ.

ಇದರಿಂದ ಭಾರೀ ಹೊಡೆತ ಎದುರಿಸಿರುವವರು ಬಂಗಾಲ ಕ್ರಿಕೆಟ್‌ ತಂಡದ ತರಬೇತುದಾರ, 65 ವರ್ಷದ ಅರುಣ್‌ಲಾಲ್‌ ಹಾಗೂ ಆಸ್ಟ್ರೇ ಲಿಯ ಮೂಲದ ಬರೋಡ ತಂಡದ ತರಬೇತುದಾರ, 66 ವರ್ಷದ ಡೇವ್‌ ವಾಟ್‌ಮೋರ್‌.

ಅರುಣ್‌ಲಾಲ್‌ ಈ ವರ್ಷ ಬಂಗಾಲವನ್ನು ರಣಜಿ ಫೈನಲಿಗೇರಿಸಲು ನೆರವಾಗಿದ್ದರು. 1996ರಲ್ಲಿ ಶ್ರೀಲಂಕಾದ ವಿಶ್ವಕಪ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಾಟ್‌ಮೋರ್‌ ಎಪ್ರಿಲ್‌ ತಿಂಗಳಲ್ಲಷ್ಟೇ ಬರೋಡ ರಣಜಿ ತಂಡದ ತರಬೇತುದಾರರಾಗಿ ನೇಮಕಗೊಂಡಿದ್ದರು.

ಕೋವಿಡ್ 19 ಕಾರ್ಯಪಡೆ
ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಮುಖ್ಯಸ್ಥ ರಾಹುಲ್‌ ದ್ರಾವಿಡ್‌, ಬಿಸಿಸಿಐನ ಕೋವಿಡ್ 19 ನಿಗ್ರಹ ಕಾರ್ಯ ಪಡೆಯಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಈ ಪಡೆಯ ರಚನೆಯಲ್ಲಿ ಬಿಸಿಸಿಐ ನಿರತವಾಗಿದೆ. ಪೂರ್ಣ ಸದಸ್ಯರ ವಿವರ ಮುಂದೆ ಗೊತ್ತಾಗಲಿದೆ.

ಕಿಟ್‌ ಪ್ರಾಯೋಜಕತ್ವಕ್ಕೆ ಬಿಡ್‌
ಸಭೆಯಲ್ಲಿ ಭಾರತ ಕ್ರಿಕೆಟ್‌ ತಂಡದ ಕಿಟ್‌ಗಳ ಪ್ರಾಯೋಜಕತ್ವ, ಮಾರುಕಟ್ಟೆ ಪಾಲುದಾರಿಕೆ, ಇನ್ನಿತರ ಹಕ್ಕುಗಳಿಗಾಗಿ ಬಿಡ್‌ ಕರೆಯಲಾಗಿದೆ.

ನಕಲಿ ವಯೋಮಿತಿ
ಕ್ರಿಕೆಟ್‌ನಲ್ಲಿ ನಕಲಿ ವಯೋಮಿತಿ ಪ್ರಮಾಣಪತ್ರ ಸಲ್ಲಿಸುವುದು ಮಾಮೂಲಾಗಿದೆ. ಇನ್ನು ವಯೋಮಿತಿಯ ಬಗ್ಗೆ ನಕಲಿ ಪ್ರಮಾಣ ಪತ್ರ ನೀಡಿರುವುದನ್ನು ಆಟಗಾರ ತಾನಾಗಿಯೇ ಬಾಯ್ಬಿಟ್ಟರೆ, ಆತನಿಗೆ ಶಿಕ್ಷೆಯಿಂದ ವಿನಾಯಿತಿ ಇರುತ್ತದೆ. ಇಲ್ಲವಾದರೆ 2 ವರ್ಷ ನಿಷೇಧ ಹೇರಲಾಗುತ್ತದೆ. ಬಿಸಿಸಿಐ ಅಧೀನದಲ್ಲಿ 2020-21ರಿಂದ ನಡೆಯುವ ಎಲ್ಲ ವಯೋಮಾನದ ಕೂಟಗಳಿಗೂ ಇದು ಅನ್ವಯಿಸುತ್ತದೆ.

ವಿವೋ ಪ್ರಾಯೋಜನೆಗೆ ವಿರೋಧ
ಚೀನ ಮೊಬೈಲ್‌ ಕಂಪನಿ ವಿವೋವನ್ನು ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ಉಳಿಸಿಕೊಳ್ಳಲು ಬಿಸಿಸಿಐ ತೀರ್ಮಾನಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಸ್ವದೇಶಿ ಜಾಗರಣ್‌ ಮಂಚ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

‘ಚೀನಿ ಸೈನಿಕರ ಕೈಯಲ್ಲಿ ಭಾರತೀಯ ಯೋಧರು ಹತರಾಗಿದ್ದರೂ, ಅದನ್ನು ಪರಿಗಣಿಸದೆ ಬಿಸಿಸಿಐ ಚೀನ ಕಂಪೆನಿಯನ್ನು ಉಳಿಸಿಕೊಂಡಿದೆ. ಇದು ಬಿಸಿಸಿಐ, ಭಾರತೀಯ ಸೈನಿಕರಿಗೆ ತೋರಿದ ಅಗೌರವ’ ಎಂದು ಹರಿಹಾಯ್ದಿದೆ.

ಭಾರತೀಯ ಕ್ರೀಡಾಭಿಮಾನಿಗಳು ಐಪಿಎಲ್‌ ಟಿ20 ಕೂಟವನ್ನು ಬಹಿಷ್ಕರಿಸಬೇಕು ಎಂದು ಸ್ವದೇಶ ಜಾಗರಣ್‌ ಮಂಚ್‌ ಸಹ ಸಂಘಟನಾ ಕಾರ್ಯದರ್ಶಿ ಅಶ್ವಾನಿ ಮಹಾಜನ್‌ ಆಗ್ರಹಿಸಿದ್ದಾರೆ. ಕೇಂದ್ರ ಸರಕಾರ, ಚೀನವನ್ನು ಭಾರತೀಯ ಮಾರುಕಟ್ಟೆಯಿಂದ ಹೊರಹಾಕಲು ಯತ್ನಿಸುತ್ತಿದೆ. ಇಂಥ ಹೊತ್ತಿನಲ್ಲಿ ಬಿಸಿಸಿಐ ತನ್ನ ನಿರ್ಧಾರವನ್ನು ಇನ್ನೊಮ್ಮೆ ಪರಿಶೀಲಿಸಬೇಕು ಎಂದು ಆಗ್ರಹಿಸಿದೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.