ಐತಿಹಾಸಿಕ ಅಯೋಧ್ಯೆ ಭೂಮಿಪೂಜೆಗೆ ಕ್ಷಣಗಣನೆ; ಗೌರಿ, ಗಣೇಶ ಪೂಜೆ ಆರಂಭ
9.30ಕ್ಕೆ ಪ್ರಧಾನಿ ಮೋದಿ ಅವರು ವಿಶೇಷ ವಿಮಾನದಲ್ಲಿ ಲಕ್ನೋಗೆ ತೆರಳಲಿದ್ದಾರೆ.
Team Udayavani, Aug 5, 2020, 8:52 AM IST
ಲಕ್ನೋ:ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ(ಆಗಸ್ಟ್ 05-2020) ಭೂಮಿ ಪೂಜೆ ನಡೆಯಲು ಕ್ಷಣಗಣನೆ ಆರಂಭಗೊಂಡಿದ್ದು, ಕೋಟ್ಯಾನುಕೋಟಿ ಹಿಂದೂಗಳ ಮಹಾಸ್ವಪ್ನ 12.30ಕ್ಕೆ ಭೂಮಿಪೂಜೆಯ ಮೂಲಕ ಮೂರ್ತ ರೂಪ ತಾಳಲಿದೆ. ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿ, ವಿಧಾನ ಆರಂಭವಾಗಿದ್ದು, ಗೌರಿ ಗಣೇಶ ಪೂಜೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ನಿಟ್ಟಿನಲ್ಲಿ ಹನುಮಾನ್ ದೇವಾಲಯದಲ್ಲಿ ಮೊದಲು ಸ್ಯಾನಿಟೈಸ್ ಮಾಡಲಾಗಿದೆ. ರಾಮಜನ್ಮಭೂಮಿ ಆವರಣದಲ್ಲಿ ಎಂಟು ಮಂದಿ ಪುರೋಹಿತರು ಭೂಮಿ ಪೂಜೆ ನೆರವೇರಿಸಲಿದ್ದಾರೆ.
9.30ಕ್ಕೆ ಪ್ರಧಾನಿ ಮೋದಿ ಅವರು ವಿಶೇಷ ವಿಮಾನದಲ್ಲಿ ಲಕ್ನೋಗೆ ತೆರಳಲಿದ್ದಾರೆ. ಲಕ್ನೋ ತಲುಪಿದ ನಂತರ ಹೆಲಿಕಾಪ್ಟರ್ ನಲ್ಲಿ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ವರದಿ ವಿವರಿಸಿದೆ.
ನಂತರ ಪ್ರಧಾನಿ ಅವರು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ, ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್, ಆರ್ ಎಸ್ ಎಸ್ ಮುಖ್ಯಸ್ಥ ಭಾಗವತ್ , ಉತ್ತರಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.
ಅಯೋಧ್ಯೆಯಲ್ಲಿ ನಡೆಯಲಿರುವ ಐತಿಹಾಸಿಕ ಭೂಮಿ ಪೂಜೆಯನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಪವಿತ್ರ ನಗರದಾದ್ಯಂತ ಬೃಹತ್ ಸಿಸಿಟಿವಿ ಸ್ಕ್ರೀನ್ಸ್ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ
Ayodhya: ವ್ಯಾಟಿಕನ್, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ
Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ
MUST WATCH
ಹೊಸ ಸೇರ್ಪಡೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ