ಭದ್ರತೆ ನೀಡದೆ ಕೋವಿಡ್‌ ಕೆಲಸಕ್ಕೆ ನಿಯೋಜನೆ: ಶಿಕ್ಷಕರಲ್ಲಿ ಆತಂಕ

ಹೊರರಾಜ್ಯದಿಂದ ಬರುವವರಿಗೆ ಮಾಹಿತಿ, ಸೂಕ್ತ ವ್ಯವಸ್ಥೆ

Team Udayavani, Aug 5, 2020, 2:25 PM IST

ಭದ್ರತೆ ನೀಡದೆ ಕೋವಿಡ್‌ ಕೆಲಸಕ್ಕೆ ನಿಯೋಜನೆ: ಶಿಕ್ಷಕರಲ್ಲಿ ಆತಂಕ

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಯಾವುದೇ ರೀತಿಯಾದ ಆರೋಗ್ಯ ಭದ್ರತೆ ನೀಡದೆ ಜಿಲ್ಲಾಡಳಿತ ಕೋವಿಡ್‌-19 ಕೆಲಸಕ್ಕೆ ನಿಯೋಜಿಸಿರುವುದು ಶಿಕ್ಷಕರನ್ನು ಆತಂಕಕ್ಕೆ ಗುರಿ ಮಾಡಿದೆ. ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ವಿಧಿಸಲಾದ ಅಂತರ್‌ ರಾಜ್ಯಗಳ ಸಂಚಾರದ ನಿಷೇಧಾಜ್ಞೆ ತೆರವುಗೊಂಡಿದೆ. ಹೊರ ರಾಜ್ಯದಿಂದ ಜಿಲ್ಲೆಗೆ ಬರುವವರನ್ನು ಕ್ವಾರಂಟೈನ್‌ ಮಾಡುವಂತೆ ಸರಕಾರ ಆದೇಶ ನೀಡಿದೆ. ರೈಲು ಹಾಗೂ ವಿಮಾನದ ಮೂಲಕ ಜಿಲ್ಲೆಗೆ ಆಗಮಿಸುವವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯವಿರುವ ಮಾಹಿತಿಯನ್ನು ಪಡೆಯಲು ಜಿಲ್ಲೆಯ ಸರಕಾರಿ, ಅನುದಾನಿತ ಶಾಲೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕೋವಿಡ್‌ ಡ್ಯೂಟಿ ಹೊರೆ
ಜಿಲ್ಲೆಯಲ್ಲಿ ಸರಕಾರ ಹಾಗೂ ಅನುದಾನಿತ ಶಾಲೆಗಳ 750 ಮಂದಿ ಶಿಕ್ಷಕರನ್ನು ವಿವಿಧ ಕೋವಿಡ್‌ ಕರ್ತವ್ಯಕ್ಕೆ ಬಳಸಿಕೊಳ್ಳಲಾಗಿದೆ. ಪ್ರಸ್ತುತ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಟಿವಿ ಮೂಲಕ ತರಗತಿ ನಡೆಯುತ್ತಿದೆ. ಶಿಕ್ಷಕರು ದೂರದರ್ಶನದ ಸಂಪರ್ಕವಿಲ್ಲದ ವಿದ್ಯಾರ್ಥಿಗಳಿಗೆ ಮನೆಗೆ ತೆರಳಿ ಪಾಠ ಮಾಡಬೇಕಾಗಿದೆ. ಜತೆಗೆ ಅವರು ಕೋವಿಡ್‌- 19 ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿರುವುದು ಶಿಕ್ಷಕರಿಗೆ ತಲೆ ನೋವು ಆಗಿ ಪರಿಣಮಿಸಿದೆ.

ಮೂರು ಪಾಳಿಯಲ್ಲಿ ಕೆಲಸ
ಇದುವರೆಗೆ ಜಿಲ್ಲೆಯ ಎಲ್ಲ ಶಿಕ್ಷಕರು ಈಗಾಗಲೇ ಕೋವಿಡ್‌ ಕೆಲಸವನ್ನು ಪೂರೈಸಿದ್ದಾರೆ. ಪ್ರಸ್ತುತ ಕೊರೊನಾ ಸೋಂಕು ಪ್ರಕರಣ ಹೆಚ್ಚಾದ ಹಿನ್ನೆಲೆ ಯಲ್ಲಿ ಶಿಕ್ಷಕರು ಆತಂಕಕ್ಕೀಡಾಗಿದ್ದಾರೆ. ಆರೋಗ್ಯ ಭದ್ರತೆ ನೀಡದೆ ತಾಲೂಕು ರಿಸೀವಿಂಗ್‌ ಸೆಂಟರ್‌ನಲ್ಲಿ ಕೋವಿಡ್‌-19 ಕೆಲಸ ನಿಯೋಜಿಸಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.

ವಾಹನ ವ್ಯವಸ್ಥೆ ಇಲ್ಲ!
ಶಿಕ್ಷಕರಿಗೆ ಮೂರು ಶಿಫ್ಟ್ನಲ್ಲಿ ಕೆಲಸ ಮಾಡಬೇಕಾಗಿದೆ. ಮೊದಲ ಶಿಫ್ಟ್ ಬೆಳಗ್ಗೆ 6ರಿಂದ ಅಪರಾಹ್ನ 2, ಎರಡನೇ ಶಿಫ್ಟ್ 2ರಿಂದ ರಾತ್ರಿ 10, ಮೂರನೇ ಶಿಫ್ಟ್ 10ರಿಂದ ಬೆಳಗ್ಗೆ 6 ವರೆಗೆ ಕರ್ತವ್ಯ ನಿರ್ವಹಿಸಬೇಕಾಗಿದೆ. ರಾತ್ರಿ ಹಾಗೂ ಮುಂಜಾನೆ ಶಿಫ್ಟ್ ಮಾಡುವ ಶಿಕ್ಷಕರಿಗೆ ಪಿಕ್‌ ಆ್ಯಂಡ್‌ ಡ್ರಾಪ್‌ ವ್ಯವಸ್ಥೆ ಇಲ್ಲದೆ ಕೋವಿಡ್‌ ರಿಸೀವ್‌ ಕೇರ್‌ ಸೆಂಟರ್‌ಗೆ ಹೋಗಲು ಪರದಾಡುತ್ತಿದ್ದಾರೆ.

ಶಿಕ್ಷಕರ ಬೇಡಿಕೆಗಳು?
ಕೋವಿಡ್‌-19 ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ವಾಹನದ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಭತ್ತೆ ನೀಡಬೇಕು. ಆರೋಗ್ಯ ಭದ್ರತೆ ನೀಡಬೇಕು. ವಿವಿಧ ರಾಜ್ಯದಿಂದ ರೈಲು ಮೂಲಕ ಬರುವವರು ಮೊದಲು ಶಿಕ್ಷಕರ ಸಂಪರ್ಕಕ್ಕೆ ಬರುತ್ತಾರೆ. ಮಾಸ್ಕ್ ಹಾಗೂ ಸ್ಯಾನಿಟೈಸರ್‌ ನೀಡಲಾಗಿದೆ. ಅದರ ಹೊರತಾಗಿ ಇತರ ಯಾವುದೇ ಆರೋಗ್ಯ ಭದ್ರತೆಯನ್ನು ನೀಡಿಲ್ಲ. ಸೆಂಟರ್‌ನಲ್ಲಿ ಕರ್ತವ್ಯ ಮುಗಿಸಿದವರು ನೇರವಾಗಿ ಮನೆಗೆ ತೆರಳಬೇಕಾಗಿದೆ. ಮನೆಯಲ್ಲಿ ಚಿಕ್ಕ ಮಕ್ಕಳು, ಹಿರಿಯರು ಇದ್ದಾರೆ. ಒಂದು ವೇಳೆ ನಾವು ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದರೆ ಇಡೀ ಕುಟುಂಬ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಶಿಕ್ಷಕರು ದೂರು ನೀಡಿಲ್ಲ
ಆರೋಗ್ಯ ಭದ್ರತೆ ನೀಡದೆ ಜಿಲ್ಲಾಡಳಿತ ಕೋವಿಡ್‌-19 ಕೆಲಸ ನಿಯೋಜಿಸುತ್ತಿದ್ದಾರೆಂದು ಶಿಕ್ಷಕರು ದೂರು ನೀಡಿಲ್ಲ. ಕೋವಿಡ್‌ -19ರ ಕರ್ತವ್ಯ ನೇಮಕಾತಿ ಜಿಲ್ಲಾಡಳಿದಿಂದ ನಡೆಯುತ್ತದೆ.
-ಶೇಷಶಯನ ಕಾರಿಂಜ, ಡಿಡಿಪಿಐ ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.