2 ದಿನಗಳಲ್ಲಿ 916 ಮೆಟ್ರಿಕ್‌ ಟನ್‌ ಯೂರಿಯಾ ಪೂರೈಕೆ


Team Udayavani, Aug 5, 2020, 4:29 PM IST

CD-TDY-01

ಚಿತ್ರದುರ್ಗ: ಎಂಎಫ್‌ಎಲ್‌ ಹಾಗೂ ಆರ್‌ಸಿಎಫ್‌ ರಸಗೊಬ್ಬರ ಸಂಸ್ಥೆಗಳಿಂದ ಇನ್ನೆರಡು ದಿನಗಳಲ್ಲಿ 916 ಮೆಟ್ರಿಕ್‌ ಟನ್‌ ಯೂರಿಯಾ ರಸಗೊಬ್ಬರ ಪೂರೈಕೆಯಾಗಲಿದ್ದು, ಜಿಲ್ಲೆಯಾದ್ಯಂತ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸದಾಶಿವ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಠಾಧೀಶರ ಪ್ರಯತ್ನದಿಂದ ಹಾಗೂ ರಾಜ್ಯ ಕೃಷಿ ಸಚಿವರ ವಿಶೇಷ ಪ್ರಯತ್ನ ಮತ್ತು ಕೇಂದ್ರ ಸರ್ಕಾರದ ರಸಗೊಬ್ಬರ ಸಚಿವರ ಸಹಕಾರದಿಂದ ಜಿಲ್ಲೆಗೆ ಎಂಎಫ್‌ಎಲ್‌ (ಮದ್ರಾಸ್‌ ಫರ್ಟಿಲೈಸರ್ ಲಿಮಿಟೆಡ್‌) ವತಿಯಿಂದ 516.06 ಮೆ. ಟನ್‌ ಹಾಗೂ ಆರ್‌ಸಿಎಫ್‌ (ರಾಷ್ಟ್ರೀಯ ಕೆಮಿಕಲ್ಸ್‌ ಆ್ಯಂಡ್‌ ಫರ್ಟಿಲೈಸರ್ ಲಿಮಿಟೆಡ್‌) ಸಂಸ್ಥೆ ವತಿಯಿಂದ 400 ಮೆ. ಟನ್‌ ಸೇರಿದಂತೆ 916 ಟನ್‌ ಯೂರಿಯಾ ರಸಗೊಬ್ಬರ ಎರಡು ದಿವಸಗಳಲ್ಲಿ ಪೂರೈಕೆಯಾಗಲಿದೆ. ರೈತರು ಆತಂಕ ಪಡದೇ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಯೂರಿಯಾ ರಸಗೊಬ್ಬರ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗಿದ್ದು, ಮೆಕ್ಕೆಜೋಳ, ರಾಗಿ, ಶೇಂಗಾ ಬೆಳೆಗಳಿಗೆ ಯೂರಿಯಾ ರಸಗೊಬ್ಬರವನ್ನು ಮೇಲು ಗೊಬ್ಬರವಾಗಿ ನೀಡುವ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಜುಲೈ ಅಂತ್ಯಕ್ಕೆ ಜಿಲ್ಲೆಗೆ ಸರಬರಾಜಾಗಬೇಕಾದ ಯೂರಿಯಾ ಗೊಬ್ಬರ ಪೂರೈಕೆಯಲ್ಲಿ ವ್ಯತ್ಯಾಸವಾದ ಕಾರಣ ಕೆಲ ಭಾಗಗಳಲ್ಲಿ ಯೂರಿಯಾ ಕೊರತೆಯಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಕೃಷಿ ಪರಿಕರ ಮಾರಾಟಗಾರರಿಂದ ರೈತರಿಗೆ ಅಗತ್ಯವಾದ ಯೂರಿಯಾ ರಸಗೊಬ್ಬರವನ್ನು ಪೂರೈಸಲು ಕೃಷಿ ಅಧಿಕಾರಿಗಳ ಉಸ್ತುವಾರಿಯಲ್ಲಿ 1 ಎಕರೆಗೆ 1 ಪ್ಯಾಕೆಟ್‌ ನಂತೆ ವಿತರಿಸಲಾಗುವುದು. ಚಿತ್ರದುರ್ಗ ತಾಲೂಕಿನಲ್ಲಿ 6 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಎಂಎಫ್‌ಎಲ್‌ 88.65 ಮೆ.ಟನ್‌ ಹಾಗೂ ಆರ್‌ಸಿಎಫ್‌ 34.2 ಮೆ.ಟನ್‌ ಯೂರಿಯಾ ಹಂಚಿಕೆಯಾಗಿದೆ. ಹೊಳಲ್ಕೆರೆ ತಾಲೂಕಿನಲ್ಲಿ 13 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಎಂಎಫ್‌ಎಲ್‌ 300.6 ಮೆ.ಟ ಹಾಗೂ ಆರ್‌ಸಿಎಫ್‌ 265.95 ಮೆ.ಟನ್‌, ಹಂಚಿಕೆಯಾಗಿದೆ. ಹೊಸದುರ್ಗ ತಾಲೂಕಿನಲ್ಲಿ 1 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಎಂಎಫ್‌ಎಲ್‌ 15.3 ಮೆ.ಟನ್‌ ಹಂಚಿಕೆಯಾಗಿದೆ. ಚಳ್ಳಕೆರೆ ತಾಲೂಕಿನಲ್ಲಿ 7 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಎಂಎಫ್‌ಎಲ್‌ 87.75 ಮೆ. ಟನ್‌ ಹಾಗೂ ಆರ್‌ಸಿಎಫ್‌ 17.1 ಮೆ.ಟನ್‌ ಹಂಚಿಕೆಯಾಗಿದೆ. ಹಿರಿಯೂರು ತಾಲೂಕಿನಲ್ಲಿ 3 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಎಂಎಫ್‌ಎಲ್‌ 87.75 ಮೆ.ಟ ಹಾಗೂ ಆರ್‌ಸಿಎಫ್‌ 50 ಮೆ. ಟನ್‌ ಹಂಚಿಕೆಯಾಗಿದೆ. ಮೊಳಕಾಲ್ಮೂರು ತಾಲೂಕಿನಲ್ಲಿ 1 ಸಗಟು, ಚಿಲ್ಲರೆ ಮಾರಾಟಗಾರರಿದ್ದು, ಆರ್‌ಸಿಎಫ್‌ 36 ಮೆ. ಟನ್‌ ಯೂರಿಯಾ ರಸಗೊಬ್ಬರ ಹಂಚಿಕೆಯಾಗಿದೆ. ರೈತರು ತಮ್ಮ ಆಧಾರ್‌ ಕಾರ್ಡ್‌, ಎಫ್‌ಐಡಿ ಬಿತ್ತನೆಯಾದ ಹಿಡುವಳಿ ವಿಸ್ತೀರ್ಣದ ವಿವರಗಳನ್ನು ಸಲ್ಲಿಸಬೇಕು. ಯೂರಿಯಾ ಪಡೆದುಕೊಂಡು ಪಿಒಎಸ್‌ ಮಷಿನ್‌ನಲ್ಲಿ ನಗದು ರಸೀದಿಯನ್ನು ಪಡೆಯಬೇಕು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.