ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ


Team Udayavani, Aug 5, 2020, 8:08 PM IST

ಲುಧಿಯಾನಾ ನಗರಕ್ಕೆ ಕಾಡಿದ ಆತ್ಮಹತ್ಯೆ ಭೂತ

ಲುಧಿಯಾನಾ: ಕೋವಿಡ್‌ ಸಂಕಷ್ಟದಿಂದಾಗಿ ಸೋಂಕಿತರಿರುವ ಪ್ರದೇಶವನ್ನು ಸರಕಾರ ಲಾಕ್‌ಡೌನ್‌ ಮಾಡುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಅತ್ಯಗತ್ಯ. ಆದರೆ ಲಾಕ್‌ಡೌನ್‌ನಲ್ಲಿನ ಖನ್ನತೆ, ಹಣಕಾಸಿನ ಸಂಕಷ್ಟ, ಇನ್ನಿತರ ಕಾರಣಗಳಿಗಾಗಿ ಕನಿಷ್ಠ 120 ಮಂದಿ ಲುಧಿಯಾನಾ ಪ್ರದೇಶ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಗರ ಪೊಲೀಸರ ಅಂಕಿಅಂಶಗಳು ಶ್ರುತಪಡಿಸಿವೆ.

ಲಾಕ್‌ಡೌನ್‌ ಅವಧಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳಗೊಳ್ಳುತ್ತಿರುವ ಬಗ್ಗೆ ಪೊಲೀಸರಿಂದ ಮಾಹಿತಿ ನೀಡಿದ್ದು, ಅನೇಕ ಮಂದಿ ಖನ್ನತೆಯಿಂದ ಬಳಲುತ್ತಿದ್ದಾರೆ ಮತ್ತು ಲಾಕ್‌ಡೌನ್‌ ಹಲವರ ಜೀವನವನ್ನು ಸಂಕಷ್ಟಕ್ಕೀಡು ಮಾಡಿದೆ. ಅಂತೆಯೇ, ಕನಿಷ್ಠ ಹದಿನಾರು ಪ್ರಕರಣಗಳಲ್ಲಿ ಗೃಹ ಹಿಂಸೆ ಮತ್ತು ಮನೆಯಲ್ಲಿನ ಇತರ ಸಮಸ್ಯೆಗಳು ಕಾರಣವಾದರೆ, ಐದು ಪ್ರಕರಣಗಳಲ್ಲಿ ಆರ್ಥಿಕ ಸಮಸ್ಯೆ ಕಾರಣವಾಗಿದೆ ಮತ್ತು ಲಾಕ್‌ ಡೌನ್‌ ಸಮಯದಲ್ಲಿ ಐದು ವಿದ್ಯಾರ್ಥಿಗಳೂ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. 9ರಿಂದ 80ರ ವಯಸ್ಸಿನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.

ಕೋವಿಡ್‌ ಬಂದಾಗಿನಿಂದ ಎಲ್ಲೆಡೆ ಸಮಸ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ನಿರ್ದಿಷ್ಟ ಕಾರಣಗಳನ್ನು ಹೆಸರಿಸಬಹುದಾದರೂ ಲಾಕ್‌ಡೌನ್‌ ಚಿಂತೆಯನ್ನು, ಸಂಕಷ್ಟವನ್ನು ಬಿಗಡಾಯಿಸುವಂತೆ ಮಾಡಿದ್ದು ಸುಳ್ಳಲ್ಲ.

ಪಡಿತರ ಸಮಸ್ಯೆ: ಆತ್ಮಹತ್ಯೆ
ಲುಧಿಯಾನಾದ ರಾಜೀವ್‌ ಗಾಂಧಿ ಕಾಲನಿಯಲ್ಲಿ ವಾಸಿಸುತ್ತಿದ್ದ ಅಜಿತ್‌ಕುಮಾರ್‌ ಎಂಬಾತ ಲಾಕ್‌ ಡೌನ್‌ ಸಮಯದಲ್ಲಿ ಪಡಿತರವನ್ನು ಪಡೆಯಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನಾ ಕೆಲಸವಿಲ್ಲದೆ ಮನೆಯಲ್ಲೇ ಇದ್ದದ್ದು, ಪತ್ನಿ ಕೆಲಸ ಮಾಡುತ್ತಿದ್ದ ಕಾರ್ಖಾನೆ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದು ದಿನನಿತ್ಯದ ರೇಷನ್‌ಗೂ ಪರದಾಡುವಂತೆ ಮಾಡಿತ್ತು. ಇದರಿಂದ ಮನನೊಂದ ಅವರು ಮೇ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಭವಿಷ್ಯದ ಚಿಂತೆ
ಸಾಹೀಲ್‌ ಅರೋರಾ ಎಂಬ 22ರ ಯುವಕ ಬ್ಯಾಡ್ಡೋವಲ್‌ನ ಪಂಜಾಬ್‌ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಪಿಸಿಟಿಇ) ಫಾರ್ಮಸಿಯಲ್ಲಿ ಪದವಿ ಪಡೆದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಅಂತಿಮ ಪರೀಕ್ಷೆಗಳು ಮುಗಿದು ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿದ್ದರು. ಕೋವಿಡ್‌ ಎಲ್ಲ ಆಸೆಗೂ ತಿಲಾಂಜಲಿ ಇಟ್ಟಿತ್ತು. ಉದ್ಯೋಗ ಮತ್ತು ಅನಿಶ್ಚಿತ ಭವಿಷ್ಯದ ಬಗ್ಗೆ ಯೋಚಿಸುತ್ತಾ ಖನ್ನತೆಗೆ ಒಳಗಾದ ಅವರು ಮೇ 9ರಂದು ಅಬ್ದುಲ್ಲಾಪುರ ಬಸ್ತಿಯಲ್ಲಿದ್ದ ನಿವಾಸದಲ್ಲಿ ಆತ್ಮಹತಯೆ ಮಾಡಿಕೊಂಡಿದ್ದರು.

ವೀಡಿಯೋ ಕರೆಯಲ್ಲಿ ಮಾತಾಡುವಾಗಲೇ ಆತ್ಮಹತ್ಯೆ
ಮೇ 14ರಂದು ಖಾಸಗಿ ಶಾಲೆಯ ಉದ್ಯೋಗಿಯೊಬ್ಬರು ಪತ್ನಿಯೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡುತ್ತಿ¨ªಾಗ ಆತ್ಮಹತ್ಯೆ ಮಾಡಿಕೊಂಡರು. ಹೌಸಿಂಗ್‌ ಬೋರ್ಡ್‌ ಕಾಲೋನಿ ನಿವಾಸಿ ಸಂತ್ರಸ್ತೆ ಖಾಸಗಿ ಶಾಲೆಯೊಂದರಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದಳು. ಅವರು ಯಾರೊ ಒಬ್ಬರಿಂದ 2 ಲಕ್ಷ ರೂ.ಗಳನ್ನು ಸಾಲ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದಿರುಗಿಸಲು ವಿಫ‌ಲರಾಗಿ ಖನ್ನತೆಗೆ ಒಳಗಾಗಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್‌ನಲ್ಲಿ ಅಣ್ಣನ ಆಟ; ತಂಗಿಯ ಆತ್ಮಹತ್ಯೆ
ಅಣ್ಣ ಮೊಬೈಲ್‌ನಲ್ಲಿ ವಿಪರೀತ ಆಟವಾಡುತ್ತಾನೆ. ತನ್ನೊಂದಿಗೆ ಯಾರೂ ಇಲ್ಲವೆಂದು 9 ವರ್ಷದ ಬಾಲಕಿ ಮೇ 16 ರಂದು ಧಂಧಾನ್‌ ಎನ್‌ಕ್ಲೇವ್‌ಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾಲ ಮರು ಪಾವತಿ ಸಂಕಷ್ಟ
ಟ್ರಾವೆಲ್‌ ಏಜೆಂಟ್‌ ಆಗಿ ಹರ್ಜಿತ್‌ ಸಿಂಗ್‌ ಉತ್ತಮ ಆದಾಯ ಗಳಿಸುತ್ತಿದ್ದರು. 42 ವರ್ಷದ ಅವರ ಜೀವನ ಖುಷಿಯಿಂದ ಕೂಡಿತ್ತು. ಈ ಸಂದರ್ಭ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಹೆಚ್ಚು ಹಣದ ಅಗತ್ಯವಿದ್ದುದರಿಂದ ಕೆಲವರಿಂದ ಸಾಲ ಪಡೆದಿದ್ದರು. ಆದರೆ ಕೋವಿಡ್‌ -19 ಜೀವನ ಮಟ್ಟವನ್ನು ಬಿಗಡಾಯಿಸುವಂತೆ ಮಾಡಿತು. ಜುಲೈ 12ರಂದು ಮನೆ ಬಿಟ್ಟು ನಾಪತ್ತೆಯಾದರು. ಅನಂತರ ಸಿಕ್ಕಿದ್ದು 19 ದಿನಗಳ ಬಳಿಕ. ಮೊಗಾದ ಘೋಲಿಯಾ ಖುದ್‌ì ಬಳಿಯ ಕಾಲುವೆಯಿಂದ ಜುಲೈ 28 ರಂದು ಅವನ ಕೊಳೆತ ದೇಹವನ್ನು ಹೊರತೆಗೆಯಲಾಯಿತು. ಸಾಲ ವಾಪಸು ನೀಡಲು ಕಿರುಕುಳ ನೀಡಿದ್ದ ನಾಲ್ವರನ್ನು ಬಂಧಿಸಲಾಗಿತ್ತು.

ಪ್ರತಿದಿನ ಜಗಳ
ಇಸ್ತ್ರಿ ಹಾಕುವ ಕೆಲಸ ಮಾಡುತ್ತಿದ್ದ ರಾಕೇಶ್‌ ಶರ್ಮ ಲಾಕ್‌ಡೌನ್‌ ಅವಧಿಯಲ್ಲಿ ಗುರುದೇವ್‌ ನಗರದಲ್ಲಿರುವ ಮನೆಯಲ್ಲೇ ಇದ್ದರು. ಪತ್ನಿ ಜ್ಯೋತಿಗೂ ಇವರಿಗೂ ಹಣಕಾಸು ಮತ್ತು ಇತರ ಕಾರಣಗಳಿಗಾಗಿ ಪ್ರತಿದಿನವೂ ಜಗಳವಾಗುತ್ತಿತ್ತು. ಜೂ. 23ರಂದು ಜಗಳ ತಾರಕಕ್ಕೇರಿ ಪತ್ನಿಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಪತ್ನಿ ಸಾವನ್ನಪ್ಪಿದ್ದನ್ನು ಕಂಡು ಈತನೂ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಖನ್ನತೆ, ಸಾಲ, ಆರ್ಥಿಕ ಸಮಸ್ಯೆಗಳು, ಉದ್ಯೋಗ ಕಳೆದುಕೊಳ್ಳುವುದು ಮುಂತಾದ ಹಲವಾರು ಸಮಸ್ಯೆಗಳಿಂದಾಗಿ ಜನರ ಮಾನಸಿಕ ಸಾಮರ್ಥ್ಯ ಕುಗ್ಗುವುದರಿಂದ ಲಾಕೌಡೌನ್‌ ಸಮಯದಲ್ಲಿ ಆತ್ಮಹತ್ಯೆಗಳು ಹೆಚ್ಚಾಗಿವೆ. ಜನರನ್ನು ಸಂವೇದನಾಶೀಲಗೊಳಿಸಲು ಮತ್ತು ಆನ್‌ಲೈನ್‌ ಕೌನ್ಸೆಲಿಂಗ್‌ ಸೆಷನ್‌ಗಳನ್ನು ನಡೆಸುವ ಮೂಲಕ ಜನರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಲುಧಿಯಾನಾ ಪೊಲೀಸ್‌ ಆಯುಕ್ತ ರಾಕೇಶ್‌ ಅಗ್ರವಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.