ಪಾಕಿಸ್ತಾನ: ಕಾಶ್ಮೀರ ಪರ Rally ಮೇಲೆ ಗ್ರೆನೇಡ್ ದಾಳಿ- 30 ಜನರಿಗೆ ಗಾಯ
ಈ ದಾಳಿಯ ಹೊಣೆಯನ್ನು ಸಿಂಧುದೇಶ್ ರೆವೊಲ್ಯೂಶನರಿ ಆರ್ಮಿ ಹೊತ್ತುಕೊಂಡಿದೆ.
Team Udayavani, Aug 6, 2020, 9:29 AM IST
ಇಸ್ಲಾಮಾಬಾದ್:ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಶ್ಮೀರ ಪ್ರತ್ಯೇಕತೆ ಪರ ನಡೆಸಿದ ರಾಲಿ ಮೇಲೆ ಗ್ರೆನೇಡ್ ದಾಳಿ ನಡೆದ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, 30 ಜನರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ತೆರವುಗೊಳಿಸಿದ್ದನ್ನು ವಿರೋಧಿಸಿ ಜಮಾತ್ ಎ ಇಸ್ಲಾಮಿ ರಾಲಿ ನಡೆಸಿದ ವೇಳೆ ಗ್ರೆನೇಡ್ ದಾಳಿ ನಡೆದಿದ್ದು, ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯ ಹೊಣೆಯನ್ನು ಸಿಂಧುದೇಶ್ ರೆವೊಲ್ಯೂಶನರಿ ಆರ್ಮಿ ಹೊತ್ತುಕೊಂಡಿದೆ. ಜೂನ್ ತಿಂಗಳಿನಲ್ಲಿ ಇಬ್ಬರು ಯೋಧರು ಸೇರಿದಂತೆ ನಾಲ್ವರನ್ನು ಸರಣಿ ಸ್ಫೋಟ ನಡೆಸಿ ಹತ್ಯೆಗೈದಿರುವ ಘಟನೆಯ ಹೊಣೆಯನ್ನು ಎಸ್ ಆರ್ ಎ ಹೊತ್ತುಕೊಂಡಿರುವುದಾಗಿ ವರದಿ ವಿವರಿಸಿದೆ.
ಪ್ರತ್ಯೇಕ ಸಿಂಧ್ ಪ್ರಾಂತ್ಯಕ್ಕಾಗಿ ಎಸ್ ಆರ್ ಎ ಹೋರಾಟ ನಡೆಸುತ್ತಿದೆ. ಪಾಕಿಸ್ತಾನದಿಂದ ಪ್ರತ್ಯೇಕಗೊಳ್ಳಬೇಕು ಎಂದು ತಿಳಿಸಿದೆ. ಅಲ್ಲದೇ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದೆ.
2019ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು. ಅಲ್ಲದೇ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಪ್ರತ್ಯೇಕಗೊಳಿಸಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
MUST WATCH
ಹೊಸ ಸೇರ್ಪಡೆ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ