ಪುಣೆ: ಕೋವಿಡ್ ಕರ್ತವ್ಯದಲ್ಲಿದ್ದ ಶಿಕ್ಷಕ ಸೋಂಕಿಗೆ ಬಲಿ


Team Udayavani, Aug 6, 2020, 1:08 PM IST

ಪುಣೆ: ಕೋವಿಡ್ ಕರ್ತವ್ಯದಲ್ಲಿದ್ದ ಶಿಕ್ಷಕ ಸೋಂಕಿಗೆ ಬಲಿ

ಸಾಂದರ್ಭಿಕ ಚಿತ್ರ

ಪುಣೆ: ನಗರದ ಸಂಗೀತ ಶಿಕ್ಷಕ ರೊಬ್ಬರು ರವಿವಾರ ಸೋಂಕಿನಿಂದ ಸಾವನ್ನಪ್ಪಿದ ಬಳಿಕ ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರ ಮತ್ತು ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 2,700 ಶಿಕ್ಷಕರು ಕೋವಿಡ್‌ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ, ಮುಖಗವಸುಗಳು ಮತ್ತು ಕೈಗವಸುಗಳಂತಹ ಸುರಕ್ಷತೆಯೊಂದಿಗೆ ಮನೆ ಮನೆಗೆ ಸಮೀಕ್ಷೆ ನಡೆಸುತ್ತಿದ್ದಾರೆ.

ಕಳೆದ 3 ತಿಂಗಳುಗಳಿಂದ ಶಿಕ್ಷಕ ಗೋವಿಂದ್‌ ಭಿಲಾರೆ ಅವರು ಪಿಎಂಸಿ ವ್ಯಾಪ್ತಿಯಲ್ಲಿ ಮನೆ-ಮನೆಗೆ ಸಮೀಕ್ಷೆ ಮತ್ತು ಸಂಪರ್ಕ ಪತ್ತೆಹಚ್ಚುವ ಕೆಲಸ ಮಾಡಿದರು. ಪಿಎಮ್‌ಸಿ ನೇಮಿಸಿಕೊಂಡ ಶಿಕ್ಷಕನ ಮೊದಲ ಸಾವು ಇದಾಗಿದೆ ಎಂದು ನಾಗರಿಕ ಅ ಧಿಕಾರಿಗಳು ತಿಳಿಸಿದ್ದಾರೆ. ಭಿಲಾರೆ ಅವರ ಮರಣದ ಬಳಿಕ, ಮಹಾರಾಷ್ಟ್ರ ರಾಜ್ಯ ಶಿಕ್ಷಕರ ಸಂಘವು ಪಿಎಂಸಿ ಶಿಕ್ಷಕರಿಗೆ ಕೋವಿಡ್‌ ಕರ್ತವ್ಯಗಳನ್ನು ನೀಡಬಾರದು ಎಂದು ಒತ್ತಾಯಿಸಿದ್ದು, ಈಗಾಗಲೇ ಅವರು ಕೆಲಸದ ಹೊರೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿವೆ.

ಪಿಎಮ್‌ಸಿ ಶಿಕ್ಷಕರಲ್ಲಿ ಅನೇಕರು ಕೋವಿಡ್‌ ತಂಡಗಳಲ್ಲಿ ಕೆಲಸ ಮಾಡುತ್ತಿರುವುದಲ್ಲದೆ, ಆನ್‌ಲೈನ್‌ ತರಗತಿಗಳು ಮತ್ತು ಹೆಚ್ಚುವರಿ ಶಾಲಾ ಕೆಲಸಗಳನ್ನು ಸಹ ಮಾಡುತ್ತಿದ್ದಾರೆ ಎಂದು ಶಿಕ್ಷಕರ ಸಂಸ್ಥೆ ತಿಳಿಸಿದೆ. ಇಲ್ಲಿಯವರೆಗೆ ಕೋವಿಡ್‌ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಸುಮಾರು 18 ಶಿಕ್ಷಕರು ಸೋಂಕಿಗೆ ಒಳಗಾಗಿದ್ದು, ಪಿಎಂಸಿ ಶಿಕ್ಷಕರಲ್ಲಿ ಭಿಲಾರೆ ಸಾವಿನಿಂದ ಆತಂಕ ಉಂಟಾಗಿದೆ ಎಂದು ಪುಣೆ ವಿಭಾಗದ ಸಂಘದ ಮುಖ್ಯಸ್ಥ ಸಚಿನ್‌ ಡಿಂಬಲ್‌ ಹೇಳಿದ್ದಾರೆ.

ಪುಣೆ ವಿಭಾಗದ ಪ್ರಾಥಮಿಕ ಶಿಕ್ಷಕರ ಸಂಘದ ನಾಲ್ಕು ಸದಸ್ಯರ ಸಮಿತಿಯು ಪಿಎಂಸಿ ಆಯುಕ್ತ ವಿಕ್ರಮ್‌ ಕುಮಾರ್‌ ಅವರೊಂದಿಗೆ ಕರ್ತವ್ಯ ವಿಷಯದ ಬಗ್ಗೆ ಸಭೆ ನಡೆಸಿತು. 3ರಿಂದ 4 ತಿಂಗಳುಗಳಿಂದ 2,700 ಪಿಎಂಸಿ ಶಿಕ್ಷಕರಿಗೆ ಕೋವಿಡ್‌ ಸಂಬಂ ಧಿತ ಕೆಲಸದ ಕರ್ತವ್ಯಗಳನ್ನು ನೀಡಲಾಗಿದೆ. ಇದು ಜನರ ಸ್ವಾಬ್‌ ಪರೀಕ್ಷೆ, ಸಂಪರ್ಕ ಪತ್ತೆಹಚ್ಚುವಿಕೆ, ಪ್ರದೇಶ ಸಮೀಕ್ಷೆ, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಒಳಗೊಂಡಿದೆ. ನಮಗೆ ನಿರಾಶಾದಾಯಕವಾದ ಮುಖ್ಯ ವಿಷಯವೆಂದರೆ ಯಾವುದೇ ಆವರ್ತಕ ವಿಧಾನವಿಲ್ಲದೆ ಮೂರು ತಿಂಗಳುಗಳಲ್ಲಿ ಕರ್ತವ್ಯಗಳನ್ನು ನೀಡಲಾಯಿತು.

ಶಿಕ್ಷಕರು ದಣಿದಿದ್ದಾರೆ
ಪುಣೆ ವಿಭಾಗದ ಸಂಘದ ಮುಖ್ಯಸ್ಥ ಸಚಿನ್‌ ಡಿಂಬಲ್‌ ಮಾತನಾಡಿ, ಇಂದು ನಾವು ಪಿಎಂಸಿ ಆಯುಕ್ತರನ್ನು ಭೇಟಿ ಮಾಡಿದ್ದೇವೆ ಮತ್ತು ನಮ್ಮ ಎಲ್ಲ ಶಿಕ್ಷಕರಿಗೆ ರಾಜ್ಯ ಸರಕಾರದ ಮಾರ್ಗಸೂಚಿಗಳ ಪ್ರಕಾರ 14 ದಿನಗಳ ಆವರ್ತಕ ಕರ್ತವ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದ್ದೇವೆ. ನಾವು ಕೋವಿಡ್‌ ಕರ್ತವ್ಯಗಳಿಗಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ. ದೈಹಿಕವಾಗಿ, ನಮ್ಮ ಶಿಕ್ಷಕರು ಈಗ ದಣಿದಿದ್ದಾರೆ ಆದರೆ ಕೆಲಸ ಕಳೆದುಕೊಳ್ಳುವ ಭಯದಿಂದಾಗಿ ಅವರು ಕೋವಿಡ್‌ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.