ಆಶ್ಲೇಷಾ ಅಬ್ಬರ: ರಾಜ್ಯ ತತ್ತರ ; ಕರಾವಳಿಯಲ್ಲೂ ಮಳೆ ಜೋರು

ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ

Team Udayavani, Aug 7, 2020, 6:15 AM IST

Karnataka-Rain-01

ಹುಬ್ಬಳ್ಳಿ/ ಮಡಿಕೇರಿ: ಮಹಾ ಮಳೆನಕ್ಷತ್ರ ಆಶ್ಲೇಷಾದ ಅಬ್ಬರಕ್ಕೆ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗ ಅಕ್ಷರಶಃ ತತ್ತರಿಸಿ ಹೋಗಿವೆ.

ಪ್ರಮುಖ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೀರ ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಕೊಡಗಿನ ಕಾವೇರಿ ಉಗಮತಾಣ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟದ ಭಾಗ ಕುಸಿದು ಅಲ್ಲಿನ ಅರ್ಚಕರ ಕುಟುಂಬದ ಮನೆ ಸಂಪೂರ್ಣ ನೆಲಸಮವಾಗಿದೆ. ಅಲ್ಲಿದ್ದ ಐವರು ಕಣ್ಮರೆಯಾಗಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂಕುಸಿತ ಉಂಟಾಗಿ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 6, ಬಾಗಲಕೋಟೆ ಜಿಲ್ಲೆಯಲ್ಲಿ 3, ಹಾವೇರಿ ಜಿಲ್ಲೆಯಲ್ಲಿ 2 ಸೇರಿದಂತೆ 11 ಸೇತುವೆಗಳು ಮುಳುಗಡೆಯಾಗಿವೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಜಕ್ಕನಹಳ್ಳಿ ಗ್ರಾಮದ ಪರಮೇಶ್ವರಪ್ಪ (38) ತೋಟದಿಂದ ವಾಪಸ್‌ ಬರುವ ವೇಳೆ ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ.


ಮೈಸೂರು ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆ ಮುಳುಗಿದೆ. ಕಬಿನಿ ಜಲಾಶಯದಿಂದ 50 ಸಾವಿರ ಕ್ಯುಸೆಕ್‌ ನೀರು ಹೊರಬಿಡಲಾಗಿದೆ.
ಕೆಆರ್‌ಎಸ್‌ ಜಲಾಶಯವು ಒಂದು ವಾರದಲ್ಲಿ ಭರ್ತಿ ಯಾಗುವ ಸಾಧ್ಯತೆ ಇದೆ. ಕೃಷ್ಣಾ, ವೇದಗಂಗಾ, ದೂಧ ಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಾ, ಭದ್ರಾ, ಹೇಮಾವತಿ, ಕಾಳಿ, ಶರಾವತಿ, ಗಂಗಾವಳಿ, ಅಘನಾಶಿನಿ ನದಿಗಳು, ಧಾರವಾಡ ಜಿಲ್ಲೆಯ ತುಪ್ಪರಿ, ಬೆಣ್ಣಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ತುಂಗಾ, ನಾರಾಯಣಪುರ, ನವಿಲುತೀರ್ಥ, ಧೂಪದಾಳ, ಕದ್ರಾ ಜಲಾಶಯಗಳು ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ವಿಶ್ವವಿಖ್ಯಾತ ಜೋಗ ಮತ್ತು ಗೋಕಾಕ ಜಲಪಾತ ಮೈದುಂಬಿವೆ. ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಹೊಸನಗರ, ಉತ್ತರ ಕನ್ನಡದ ಘಟ್ಟದ ಮೇಲ್ಭಾಗದಲ್ಲಿ ವ್ಯಾಪಕ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯ ಸಮೀಪದ ಕಪ್ಪೆ ಶಂಕರ ಮಂಟಪ, ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಟಾಳ ಸೇತುವೆ ಮುಳುಗಡೆಯಾಗಿದೆ.

ಮಹಾ ಮಳೆಗೆ ಪ್ರವಾಹ

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಮತ್ತೆ ನೆರೆ ಉಂಟಾಗಿದೆ. ಚಿಕ್ಕೋಡಿ ಬಳಿ ಕೃಷ್ಣಾ ನದಿಗೆ 1.32 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ನದಿಯ ಮಟ್ಟದಲ್ಲಿ 10 ಅಡಿಗಳಷ್ಟು ಏರಿಕೆಯಾಗಿದೆ. ಎನ್‌ಡಿಆರ್‌ಎಫ್‌ ತಂಡ ನದಿ ತೀರದಲ್ಲಿ ಬೀಡು ಬಿಟ್ಟಿದೆ. ಕೋಯ್ನಾ, ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿರುವುದರಿಂದ ಬಾಗಲಕೋಟೆ, ಜಮಖಂಡಿ, ಬೀಳಗಿ, ಹುನಗುಂದ, ವಿಜಯಪುರ, ರಾಯಚೂರು, ಯಾದಗಿರಿ ಮೊದಲಾದೆಡೆಯಲ್ಲೂ ನೆರೆ ಭೀತಿ ಎದುರಾಗಿದೆ.

ತತ್‌ಕ್ಷಣ ಪರಿಹಾರ: ಸಿಎಂ
ಮಳೆಯಿಂದ ಹಾನಿ ಗೊಳಗಾದ ಕುಟುಂಬಗಳಿಗೆ ತತ್‌ಕ್ಷಣ 10,000 ರೂ. ಪರಿಹಾರದ ಜತೆಗೆ ಸಂಪೂರ್ಣ ಮನೆ ಹಾನಿಯಾಗಿದ್ದರೆ  5 ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಬಿಎಸ್‌ವೈ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಳ್ಳಿಗಳ ಶಾಲಾ-ಕಾಲೇಜುಗಳನ್ನೇ ನಿರಾಶ್ರಿತರ ಕೇಂದ್ರವನ್ನಾಗಿಸಿ ಎಲ್ಲ ಸೌಲಭ್ಯ ಕಲ್ಪಿಸಬೇಕು ಎಂದು ಆದೇಶ ನೀಡಿದ್ದಾರೆ.


ಕರಾವಳಿಯಲ್ಲೂ ಮಳೆ ಜೋರು

ಕರಾವಳಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಗುರುವಾರ ಅಪರಾಹ್ನದ ಬಳಿಕ ಬಿರುಸುಗೊಂಡಿತ್ತು. ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ಭಾರೀ ಮಳೆಯಿಂದ ಅವಿಭಜಿತ ಜಿಲ್ಲೆಯಲ್ಲಿ ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಬೆಳ್ತಂಗಡಿ, ಸುಳ್ಯ ತಾಲೂಕುಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದ ಬಿಸಿಲೆ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಕೆಲವು ಕಡೆಗಳಲ್ಲಿ ರಸ್ತೆಗೆ ಮರಬಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಕುಸಿದ ಕೊಂಕಣ ರೈಲ್ವೇ ಸುರಂಗ
ಭಾರೀ ಮಳೆಯಿಂದ ಕೊಂಕಣ ರೈಲ್ವೇಯ ಕಾರವಾರ ವ್ಯಾಪ್ತಿಯ ಪೆರ್ನೆಮ್‌ ಸುರಂಗ ಕುಸಿದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಮಳೆ ಏಕೆ?
ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡ ಉಂಟಾಗಿ ಮುಂಗಾರು ಮಾರುತಗಳು ಚುರುಕಾಗಿರುವುದು.

ರೆಡ್‌ ಅಲರ್ಟ್‌: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ

ಎಷ್ಟು ದಿನ?
ಹವಾಮಾನ ಇಲಾಖೆ ಪ್ರಕಾರ ಆ.10ರ ವರೆಗೂ ಮಳೆ ಮುಂದುವರಿಯಲಿದೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.