ಆರೋಗ್ಯ ಸ್ನೇಹಿ ಅರಿಶಿಣ ಗಣೇಶ ಪೂಜಿಸಿ


Team Udayavani, Aug 7, 2020, 10:57 AM IST

ಆರೋಗ್ಯ ಸ್ನೇಹಿ ಅರಿಶಿಣ ಗಣೇಶ ಪೂಜಿಸಿ

ಶಿಡ್ಲಘಟ್ಟ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲೇ, ಗೌರಿ ಗಣೇಶ ಹಬ್ಬವು ಸಮೀಪಿಸುತ್ತಿದೆ. ಈ ಬಾರಿ ರೋಗ ನಿರೋಧಕ ಶಕ್ತಿ ಇರುವ ಅರಿಶಿಣದಿಂದ ಗಣೇಶನನ್ನು ಮನೆಯಲ್ಲೇ ತಯಾರಿಸಿ, ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸಿ ಪರಿಸರ ಮಾಲಿನ್ಯ ನಿಯಂತ್ರಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಸಕ್ತ ವರ್ಷದಲ್ಲಿ ರೋಗ ನಿರೋಧಕ ಗುಣ  ವುಳ್ಳ ಅರಿಶಿಣ ಗಣೇಶನನ್ನು ಪುಟ್ಟದಾಗಿ ಮನೆಯಲ್ಲೇ ತಯಾರಿಸಿ ಆಚರಿಸಬೇಕೆಂದು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಕೋವಿಡ್ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ‘ಪರಿಸರ ಸ್ನೇಹಿ ಜೊತೆಗೆ ಆರೋಗ್ಯ ಸ್ನೇಹಿ’ ಗಣೇಶೋತ್ಸವಕ್ಕೆ ಸಜ್ಜಾಗಬೇಕು. ಹಾಗಾಗಿ, ವೈರಾಣು ನಿರೋಧಕ ಶಕ್ತಿ ಹೊಂದಿರುವ ಅರಿಶಿಣದಿಂದ ಗಣೇಶ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸಬೇಕು ಎಂದು ಸಲಹೆ ನೀಡಿದರು.

ಕೆರೆ ಕುಂಟೆಗಳಲ್ಲಿ ವಿಸರ್ಜನೆ ಇಲ್ಲ: ಪರಿಸರದ ಮೇಲೆ ಭಾರಿ ಪರಿಣಾಮ ಬೀರುವಂತಹ ಪಿಒಪಿ ಗಣೇಶ ಹಾಗೂ ರಾಸಾಯನಿಕ ಬಣ್ಣಗಳನ್ನೊಳಗೊಂಡ ಗಣೇಶನ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗೌರಿ- ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಅವಕಾಶ ಇರುವುದಿಲ್ಲ ಹಾಗೂ ಗಣೇಶ ಮೂರ್ತಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದ್ದು, ಮೂರ್ತಿಯನ್ನು ಕೆರೆ ಕುಂಟೆಗಳಲ್ಲಿ ವಿಸರ್ಜನೆಗೆ ನಿಷೇಧ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಡಳಿತದ ಜೊತೆ ಸಹಕರಿಸಿ: ಕೋವಿಡ್ ವೈರಸ್‌ ಎಲ್ಲೆಡೆ ಆಕ್ರಮಿಸಿರುವ ಹಿನ್ನೆಲೆಯಲ್ಲಿ ಅರಿಶಿಣ ಗಣೇಶ ಪರಿಸರ ಹಾಗೂ ಆರೋಗ್ಯ ಸ್ನೇಹಿ ಗಣೇಶ ಹಬ್ಬವನ್ನು ಕೋವಿಡ್‌ ನಿರೋಧಕ ಪ್ರತಿಮೆಗಳನ್ನು ತಯಾರಿಸುವ ಮೂಲಕ ರೋಗ ನಿರೋಧಕ ಶಕ್ತಿಯುಳ್ಳ ಸಗಣಿ, ಅರಿಶಿಣ ಬಳಕೆಯಿಂದ ಮಾಡಿದ ಅಥವಾ ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿಣ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆಗಳನ್ನು ಮನೆಯಲ್ಲಿಯೇ ತಯಾರಿಸಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆ ಮಾಡುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದರು.

ಹಬ್ಬದ ಸಂಭ್ರಮದಲ್ಲಿ ಜನದಟ್ಟಣೆ ಸೇರದೆ, ಮಾಸ್ಕ್ ಧರಿಸುವುದರ ಮೂಲಕ ಸಾಮಾಜಿಕ ಅಂತರವನ್ನು ಕಾಯ್ದು ಕೊಂಡು ಜಾಗೃತರಾಗಿ ಕೋವಿಡ್ ಮಹಾಮಾರಿಯನ್ನು ಹರಡದಂತೆ ತಡೆಗಟ್ಟಲು ಸಹಕರಿಸಿ ಎಂದು ಅವರು ಮನವಿ ಮಾಡಿದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಧಿಕಾರಿಗಳಾದ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.