ಕಲ್ಲಿಕೋಟೆ ದುರಂತ: ಮಂಗಳೂರು ವಿಮಾನ ದುರಂತದಷ್ಟೇ ತೀವ್ರವಾದ ಘಟನೆ
Team Udayavani, Aug 7, 2020, 9:40 PM IST
ಕಲ್ಲಿಕೋಟೆ: ದುಬೈನಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆ 7.45ರ ಸುಮಾರಿಗೆ ದೊಡ್ಡ ಅಪಘಾತ ಸಂಭವಿಸಿದೆ.
ಲ್ಯಾಂಡಿಂಗ್ ಸಮಯದಲ್ಲಿ ಅಪಘಾತಕ್ಕೀಡಾಗಿದ್ದು, ಇದು ದಶಕಗಳ ಹಿಂದೆ ನಡೆದ ಮಂಗಳೂರು ವಿಮಾನ ದುರಂತವನ್ನು ನೆನಪಿಸಿದೆ.
ಈ ವಿಮಾನದಲ್ಲಿ 180 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದ್ದು, ಪೈಲಟ್ ಸಾವಿನ ಸುದ್ದಿ ಹೊರಬರುತ್ತಿದೆ. 2 ಮಕ್ಕಳು ಸಾವನ್ನಪ್ಪಿದ್ದರು ಎಂಬ ಮಾಹಿತಿಯೂ ಇದೆ.
ವಿಮಾನದ ಮುಂಭಾಗದ ಭಾಗವು ಭಾರೀ ಪ್ರಮಾಣದಲ್ಲಿ ಹಾನಿಗೊಂಡಿದೆ. ಅಪಘಾತದ ತೀವ್ರತೆಗೆ ವಿಮಾನ ಎರಡು ತುಂಡುಗಳಾಗಿದೆ. ಗಾಯಗೊಂಡ ಜನರನ್ನು ಆಸ್ಪತ್ರೆಗೆ ಕರೆದೊಯ್ಯುಲು ಆ್ಯಂಬುಲೆನ್ಸ್ಗಳು ಈಗಾಗಲೇ ಆಗಮಿಸಿವೆ. ಭಾರೀ ಮಳೆಯಿಂದಾಗಿ ಈ ವಿಮಾನ ಅಪಾಘಾತಕ್ಕೆ ಈಡಾಗಿದೆ ಎಂದು ಹೇಳಲಾಗುತ್ತದೆ.
ಬಯಲು 30 ಅಡಿ ಆಳದ ಕಂದಕ
ಭಾರೀ ಮಳೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಈ ವಿಮಾನವು ರಾತ್ರಿ 7.38ಕ್ಕೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಈ ಸಮಯದಲ್ಲಿ ಭಾರಿ ಮಳೆಯಾಗುತ್ತಿತ್ತು. ಈ ಮಧ್ಯೆ ಲ್ಯಾಂಡ್ ಆದ ವಿಮಾನ ರನ್ವೇಗೆ ತಲುಪಿದ ಕೆಲವೇ ಕ್ಷಣದಲ್ಲಿ ರನ್ ವೇ ಇಂದ ಜಾರಿದೆ. ಬಳಿಕ ಇದು 30 ಅಡಿ ಆಳದಕ್ಕೆ ತಳ್ಳಲ್ಪಟ್ಟಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ ; ಪೈಲಟ್ ಸಹಿತ 14 ಸಾವು
ಮಂಗಳೂರಿನಲ್ಲೂ ಇದೇ ಆಗಿತ್ತು
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22ರ ಬೆಳಗ್ಗೆ 6.15ಕ್ಕೆ ನಡೆದ ವಿಮಾನ ಅಪಘಾತಕ್ಕೆ ಸರಿ ಸಮಾನಾಗಿ ಈ ದುರಂತವನ್ನು ಪರಿಗಣಿಸಲಾಗುತ್ತದೆ. ಪೈಲಟ್, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. 135 ಮಂದಿ ವಯಸ್ಕರು, 19 ಮಕ್ಕಳು ಹಾಗೂ 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ದುರ್ಘಟನೆಯಲ್ಲಿ 8 ಮಂದಿ ಬದುಕುಳಿದಿದ್ದರು.
ಕ್ಯಾಲಿಕಟ್ನಂತೆ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವಿಮಾನ ದುರಂತಕ್ಕೀಡಾಗಿತ್ತು. ರನ್ವೇಗೆ ಇಳಿದ ವಿಮಾನ ಸ್ವಲ್ಪ ದೂರ ಕ್ರಮಿಸಿ ನೋಡುತ್ತಿದ್ದಂತೆಯೇ ವಿಮಾನ ಎರಡು ತುಂಡಾಗಿ ಹೊತ್ತಿ ಉರಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ