ಬೆಳ್ತಂಗಡಿ: ಆ. 9ರ ಮಹಾ ಪ್ರವಾಹಕ್ಕೆ ಒಂದು ವರ್ಷ; ಇನ್ನೂ ಬಾಡಿಗೆ ಮನೆಯಲ್ಲೇ ಸಂತ್ರಸ್ತರ ವಾಸ

7 ಮನೆಗಳಷ್ಟೆ ಪೂರ್ಣ ನಿರ್ಮಾಣ

Team Udayavani, Aug 8, 2020, 9:03 AM IST

ಬೆಳ್ತಂಗಡಿ: ಆ. 9ರ ಮಹಾ ಪ್ರವಾಹಕ್ಕೆ ಒಂದು ವರ್ಷ; ಇನ್ನೂ ಬಾಡಿಗೆ ಮನೆಯಲ್ಲೇ ಸಂತ್ರಸ್ತರ ವಾಸ

ಕಳೆದ ಬಾರಿ ಪ್ರವಾಹಕ್ಕೆ ತುತ್ತಾದ ಕುಕ್ಕಾವು ಸೇತುವೆ.

ಬೆಳ್ತಂಗಡಿ: ಪಶ್ಚಿಮಘಟ್ಟ ಗುಡ್ಡಗಾಡು ನಲುಗಿ ಇತಿಹಾಸದಲ್ಲಿ ಕಂಡುಕೇಳರಿಯದ ಪ್ರವಾಹಕ್ಕೆ ತುತ್ತಾಗಿದ್ದ ಬೆಳ್ತಂಗಡಿ ತಾಲೂಕು ಆಗಸ್ಟ್‌ 9ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಅಂದು ಸಂತ್ರಸ್ತರಾದವರ ಬದುಕು ಮತ್ತೆ ಹಸನಾಗಿಲ್ಲ. ಪರಿಹಾರ ಮೊತ್ತ ಖಾತೆಗೆ ಜಮೆಯಾದರೂ ತಾಂತ್ರಿಕ ತೊಂದರೆಗಳಿಂದ ಮನೆಗಳು ಪೂರ್ಣಗೊಳ್ಳದೆ ಬಾಡಿಗೆ ಮನೆಯಲ್ಲೇ ವಾಸ ಒಂದೆಡೆಯಾದರೆ, ನದಿ ಪಾತ್ರದ ಮಂದಿ ಪ್ರವಾಹದ ಭಯದಲ್ಲೇ ಜೀವನ ಸಾಗಿಸುತ್ತಿವೆ.

ಆಗಸ್ಟ್‌-ಅಕ್ಟೋಬರ್‌-2019ರಲ್ಲಿ ನೆರೆ ಹಾವಳಿಯಿಂದ ಬೆಳ್ತಂಗಡಿ ತಾಲೂಕಿನ 16 ಗ್ರಾಮಗಳಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನೆರೆ ಸಂತ್ರಸ್ಥರ ಪುನರ್ವಸತಿ ಯೋಜನೆ-2019 ರಡಿ 289 ಮನೆಗಳನ್ನು ಗುರುತಿಸಲಾಗಿತ್ತು. ಈವರೆಗೆ ನೆರೆಯಿಂದ ಮನೆ ಕಳೆದುಕೊಂಡ ತಾಲೂಕಿನ ಫಲಾನುಭವಿಗಳಿಗೆ 2020 ಜೂನ್‌ 03 ರ ವರೆಗೆ 5,55,00,000 ರೂ. ಹಣ ಬಿಡುಗಡೆಯಾಗಿರುವ ಲೆಕ್ಕ ಕಂದಾಯ ಇಲಾಖೆಯಲ್ಲಿದೆ.

ಲೆಕ್ಕ ನೀಡಿದರೂ ಪಕ್ಕವಾಗದ ಮನೆ
203 ಮನೆ ಸಂಪೂರ್ಣ ಹಾನಿ, 55 ಮನೆ ಭಾಗಶಃ ಹಾನಿ, 31 ಅಲ್ಪ-ಸ್ವಲ್ಪ ಹಾನಿ ಎಂದು ಪರಿಗಣಿಸಿ ಒಟ್ಟು 289 ಮನೆಗಳು ಹಾನಿಗೊಳಗಾಗಿರುವುದಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಸಂಪೂರ್ಣ ಮತ್ತು ಭಾಗಶಃ ಹಾನಿಗೊಳಗಾದ ಒಟ್ಟು 258 ಮನೆಗಳಪೈಕಿ 255 ಮನೆಗಳಿಗೆ 5 ಲಕ್ಷ ರೂ. ಪರಿಹಾರದ ಹಣ ಸರಕಾರ ಘೋಷಿಸಿತ್ತು.

ಅವುಗಳಲ್ಲಿ ಪ್ರಥಮ ಹಂತವಾಗಿ 1 ಲಕ್ಷ ರೂ. ಹಣ ಬಿಡುಗಡೆಗೊಳಿಸಿದೆ. ಬಳಿಕ ತಳಪಾಯ-ಗೋಡೆ- ಛಾವಣಿ-ಪೂರ್ಣ ಹೀಗೆ ಹಂತವಾರು ಪ್ರಗತಿ ಸಾಧಿಸಿದ ಫಲಾನುಭವಿಗಳಿಗೆ ಜಿ.ಪಿ.ಎಸ್‌. ಅಳವಡಿಸಿದ ಅನಂತರ ನೇರವಾಗಿ ಖಾತೆಗೆ ಜಮಾ ಮಾಡ ಲಾಗುತ್ತಿದೆ. ಉಳಿದಂತೆ ಅಲ್ಪ-ಸ್ವಲ್ಪ ಹಾನಿಗೊಳಗಾದ 31 ಮನೆಗಳಿಗೆ ಪ್ರತಿ ಫಲಾನುಭವಿಗೆ 50,000 ರೂ. ಪೂರ್ಣ ಮೊತ್ತದ ಪರಿಹಾರದ ಹಣ ನೀಡಲಾಗಿದೆ. ಇಷ್ಟಾದರೂ ಮನೆಗಳು ಪೂರ್ಣ ಗೊಂಡಿಲ್ಲ. ಒಟ್ಟು 69 ಮನೆಗಳು ತಳಪಾಯ ಹಂತದಲ್ಲಿ, 77 ಮನೆಗಳು ಗೋಡೆ ಹಂತ, 67 ಮನೆಗಳು ಛಾವಣಿ ಹಂತ, 7 ಮನೆಗಳಷ್ಟೆ ಪೂರ್ಣ ಹಂತವಾಗಿದೆ.

ಬಾಡಿಗೆ: ಸ್ಪಷ್ಟತೆ ಇಲ್ಲ
ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಿಕೊಳ್ಳುವ ಫಲಾನುಭವಿಗೆ 50,000 ರೂ. ಮತ್ತು ಬಾಡಿಗೆ ಮನೆಯಲ್ಲಿ ವಾಸಿಸುವ ಫಲಾನುಭವಿಗೆ ಪ್ರತಿ ತಿಂಗಳು 5,000 ರೂ.ನಂತೆ 10 ತಿಂಗಳ ವರೆಗೆ ಮಾಸಿಕ ಬಾಡಿಗೆ ನೀಡಲಾಗಿದೆ. ಆದರೆ ಪ್ರಸಕ್ತ 10 ತಿಂಗಳು ಪೂರ್ಣಗೊಂಡಿದ್ದರಿಂದ ಮುಂದಕ್ಕೆ ಬಾಡಿಗೆ ನೀಡುವ ಬಗ್ಗೆ ಸರಕಾರ ಸ್ಪಷ್ಟತೆ ನೀಡಿಲ್ಲ. ಇತ್ತ ಮನೆಯೂ ಪೂರ್ಣಗೊಂಡಿಲ್ಲ. ಈ ಮಧ್ಯೆ ಕೊರೊನಾದಿಂದ ಬದುಕು ಮತ್ತಷ್ಟು ಜಟಿಲವಾಗಿದೆ.

ಪ್ರವಾಹಕ್ಕೆ ತುತ್ತಾದ ಮಂದಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯತೆ ಪೂರೈಸುವಲ್ಲಿ ಶಾಸಕನಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ತಾಂತ್ರಿಕ ತೊಂದರೆ ಸರಿಪಡಿಸಲು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇನೆ. ಚಾರ್ಮಾಡಿ ರಸ್ತೆ ಸರ್ವೆ ನಡೆಸಿ ಕೇಂದ್ರಕ್ಕೆ ವರದಿ ನೀಡಲಾಗಿದೆ.
-ಹರೀಶ್‌ ಪೂಂಜ, ಶಾಸಕ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.