ಮಹಾಮಳೆಗೆ ಚಿಕ್ಕಮಗಳೂರಿನಲ್ಲಿ ನಾಲ್ಕನೇ ಬಲಿ: ಹೇಮಾವತಿ ನದಿಯಲ್ಲಿ ಕೊಚ್ಚಿ ಹೋದ ವೃದ್ಧೆ
Team Udayavani, Aug 8, 2020, 3:51 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಮಹಾ ಮಳೆಗೆ ನಾಲ್ಕನೇ ಬಲಿಯಾಗಿದೆ.
ಮೂಡಿಗೆರೆ ತಾಲೂಕಿನ ಜನ್ನಾಪುರದ ಅಗ್ರಹಾರ ದೇವಸ್ಥಾನದ ಸಮೀಪದ ನಿವಾಸಿ ರುದ್ರಮ್ಮ( 87)ಮೃತಪಟ್ಟಿರುವ ವೃದ್ದೆ. ಇವರು ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಇವರು ಇಂದು ಜನ್ನಾಪುರದ ಅಗ್ರಹಾರದ ದೇವಸ್ಥಾನಕ್ಕೆ ಹೋಗಿದ್ದ ವೇಳೆಯಲ್ಲಿ ಕಾಲು ಜಾರಿ ಹೇಮಾವತಿ ನದಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ. ಗೋಣಿಬೀಡು ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ಇಂದು ಮಧ್ಯಾಹ್ನನಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದೆ. ಮೂರು ದಿನದಿಂದ ನೀರಿಂದ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಮೇಲಿಂದ ಈಗ ನೀರು ಇಳಿದಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ