ವಸತಿ ಫಲಾನುಭವಿಗಳಿಗೆ ಖೂಬಾ ದ್ರೋಹ: ಗೀತಾ
Team Udayavani, Aug 9, 2020, 2:52 PM IST
ಬೀದರ: ಜನರಿಂದ ಆಯ್ಕೆಯಾಗಿ ಜನರಿಗೆ ಅದರಲ್ಲೂ ಕಡು ಬಡವರಿಗೆ ದೊಡ್ಡ ದ್ರೋಹ ಮಾಡುತ್ತಿರುವ ಸಂಸದ ಭಗವಂತ ಖೂಬಾ ತೊಟ್ಟಿಲನ್ನು ತೂಗಿ ಮಗುವನ್ನು ಚಿವುಟುವ ಕಾರ್ಯವನ್ನೂ ಮಾಡುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಖುದ್ದು ತಾವೇ ಭಾಲ್ಕಿ ವಸತಿ ಯೋಜನೆ ವಿರುದ್ಧ ಸುಳ್ಳು ಆರೋಪ ಮಾಡಿ, ಅರ್ಹ ಫಲಾನುಭವಿಗಳಿಗೆ ಹಣ ದೊರಕುವುದನ್ನು ವಿಳಂಬ ಮಾಡಿಸಿ, ಈಗ ಪಿಡಿಒಗಳ ಮೇಲೆ ಕ್ರಮದ ಬೆದರಿಕೆ ಹಾಕುತ್ತಿರುವುದು ಖಂಡನೀಯ. ಭಾಲ್ಕಿ ತಾಲೂಕಿನ ವಸತಿ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ವಿಳಂಬವಾಗಲು, ಸ್ಥಗಿತವಾಗಲು ಸಂಸದ ಖೂಬಾ ಅವರೇ ಕಾರಣ ಎಂದು ಆಪಾದಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಈಶ್ವರ ಖಂಡ್ರೆ ಅವರು ಹಿಂದಿನ ಸರ್ಕಾರದಲ್ಲಿ ಬಡ ವಸತಿ ರಹಿತರಿಗಾಗಿ ಸಾವಿರಾರು ಮನೆ ಮಂಜೂರುಮಾಡಿಸಿದ್ದರು. ಗುಡಿಸಲು ಮುಕ್ತ ತಾಲೂಕು ಮಾಡುವ ಸಂಕಲ್ಪ ಹೊಂದಿದ್ದರು. ಇದು ಸಾಕಾರವಾದರೆ ಖಂಡ್ರೆ ಅವರಿಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಹೊಟ್ಟೆ ಕಿಚ್ಚಿನಿಂದ ಸಂಸದ ಖೂಬಾ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅನಗತ್ಯವಾಗಿ ಭಾಲ್ಕಿ ವಸತಿ ಯೋಜನೆಯಲ್ಲಿ ಸುಳ್ಳು ಆರೋಪ ಮಾಡಿ, ತಾವೇ ಸರ್ಕಾರದಿಂದ ತನಿಖೆಗೆ ಅರ್ಹರಲ್ಲದ ಅಧಿಕಾರಿಗಳನ್ನು ಕಳುಹಿಸಿ, ಅಕ್ರಮ ನಡೆದಿದೆ ಎಂದು ವದಂತಿ ಸೃಷ್ಟಿಸಿ ಅರ್ಹ ಬಡ ಫಲಾನುಭವಿಗಳಿಗೆ ಎರಡು ವರ್ಷದಿಂದಲೂ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದಿದ್ದಾರೆ.
ಈಗ ಪಿಡಿಒಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿರುವ ಖೂಬಾ, ಅನಗತ್ಯವಾಗಿ ಬಡವರು, ಫಲಾನುಭವಿಗಳು ಮತ್ತು ಪಂಚಾಯತಿ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಈಗ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ದ್ವೇಷದ ರಾಜಕೀಯ ಮಾಡುತ್ತಿರುವ ಖೂಬಾ ದ್ವೇಷ ರಾಜಕಾರಣದ ಮಾತನಾಡುತ್ತಾರೆ. ಶಾಸಕ ಖಂಡ್ರೆ ಅವರ ಮೇಲೆ ಸುಳ್ಳು ಆರೋಪ ಮಾಡುವುದರಲ್ಲೇ ಕಾಲಹರಣ ಮಾಡುವುದನ್ನು ಬಿಟ್ಟು ಖೂಬಾ ಜನಸೇವೆ ಮಾಡಲಿ ಎಂದು ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ