ರಸ್ತೆ ಸಾರಿಗೆ ಸಂಸ್ಥೆಗೆ ಸಂಕಷ್ಟ


Team Udayavani, Aug 10, 2020, 12:36 PM IST

uk-tdy-1

ದಾಂಡೇಲಿ: ಕೋವಿಡ್‌-19 ಕಾರಣ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೆ ಒಳಗಾಗಿದ್ದಾರೆ. ಅದೇ ರೀತಿ ರಸ್ತೆ ಸಾರಿಗೆ ಸಂಸ್ಥೆಯೂ ಪ್ರಯಾಣಿಕರಿಲ್ಲದೆ ಅಪಾರ ನಷ್ಟ ಅನುಭವಿಸುತ್ತಿದ್ದೆ. ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

ಅನ್‌ಲಾಕ್‌ ಆದ ದಿನದಿಂದಲೇ ಸಾರಿಗೆ ಸಂಸ್ಥೆಯವರು ಪ್ರಯಾಣಿಕರ ಸೇವೆಗೆ ಬಸ್‌ ಬಿಟ್ಟರೂ ಪ್ರಯಾಣಿಕರು ಮಾತ್ರ ಬಸ್‌ ಹತ್ತುತ್ತಿಲ್ಲ. ಪ್ರತಿದಿನ 61 ಬಸ್‌ಗಳನ್ನು ಬಿಡುತ್ತಿದ್ದ ನಗರದ ಸಾರಿಗೆ ಸಂಸ್ಥೆ ಘಟಕದವರು ಈಗ 28 ಬಸ್‌ಗಳನ್ನಷ್ಟೇ ಬಿಟ್ಟಿದ್ದಾರೆ. ಕೋವಿಡ್ ಬರುವ ಮುನ್ನ 61 ಬಸ್‌ ನಿತ್ಯ ಸಂಚರಿಸುತ್ತಿದ್ದು, ಪ್ರತಿದಿನ 6.50ರಿಂದ 7 ಲಕ್ಷ ಆದಾಯ ಬರುತ್ತಿತ್ತು. ಈಗ ದಿನವೊಂದಕ್ಕೆ 1 ಲಕ್ಷದಿಂದ 1.25 ಲಕ್ಷ ಆದಾಯ ಬರಲು ಪ್ರಾರಂಭಿಸಿದೆ. ಹಿಂದೆ ಧಾರವಾಡಕ್ಕೆ ಪ್ರತಿದಿನ 60 ಟ್ರಿಪ್‌ ಹೋಗುತ್ತಿದ್ದಲ್ಲಿ ಈಗ 20ರಿಂದ 25 ಟ್ರಿಪ್‌ ಗಳಷ್ಟೇ ಹೋಗಲಾಗುತ್ತಿದೆ. ಇದಕ್ಕೂ ಪ್ರಯಾಣಿಕರು ತುಂಬಲು ಗಂಟೆಗಟ್ಟಲೆ ಕಾಯಬೇಕಾಗಿದೆ. ನಗರದೊಳಗಡೆ ಒಟ್ಟು 3 ಬಸ್‌ ಸಂಚರಿಸುತ್ತಿದ್ದರೂ ಅದು ಅಷ್ಟಕ್ಕಷ್ಟೆ ಆದಾಯ ತರುತ್ತಿದೆ.

ರಾಜ್ಯದ ಧಾರವಾಡ, ಬೆಳಗಾವಿ, ರಾಯಚೂರು, ಶಕ್ತಿನಗರ, ಬೆಂಗಳೂರು ಮೊದಲಾದ ಕಡೆಗಳಿಗೆ ಇಲ್ಲಿಂದ ಬಸ್‌ ಸಂಚಾರ ಪ್ರಾರಂಭವಾಗಿದ್ದು, ಜನರ ಬೇಡಿಕೆಯಾನುಸಾರ ಬಸ್‌ ಬಿಡಲಾಗುತ್ತಿದೆ. ಇನ್ನೂ ನಗರದಿಂದ ಧರ್ಮಸ್ಥಳಕ್ಕೆ, ಮಹಾರಾಷ್ಟ್ರ-ಕೊಲ್ಲಾಪುರಕ್ಕೆ ಬಸ್‌ ಸಂಚಾರ ಪ್ರಾರಂಭಿಸಿಲ್ಲ. ದಾಂಡೇಲಿ ಸಾರಿಗೆ ಘಟಕದಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ಒಟ್ಟು 263 ಜನ ಕೆಲಸ ನಿರ್ವಹಿಸುತ್ತಿದ್ದು, ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಿಗೆ ನಿತ್ಯ ಕೆಲಸ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಆದರೂ ಸಾರಿಗೆ ಘಟಕದ ವ್ಯವಸ್ಥಾಪಕ ಎಚ್‌.ವೈ. ಜೋಗಿನ್‌ ನೇತೃತ್ವದಲ್ಲಿ ಸಾರಿಗೆ ಘಟಕದ ಅಧಿಕಾರಿಗಳು ರೊಟೇಶನ್‌ ಮಾದರಿಯಲ್ಲಿ ಕೆಲಸ ನೀಡುತ್ತಿದ್ದಾರೆ.

ಸಂಕಷ್ಟದಲ್ಲಿಯೂ ಸೇವೆ ಕೋವಿಡ್‌ ಸಂಕಷ್ಟದಲ್ಲಿಯೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಬೇಕೆಂಬುವುದು ನಮ್ಮ ಗುರಿ. ಹಾಗಾಗಿ ಹೆಚ್ಚು ರಿಸ್ಕ್ ತೆಗೆದುಕೊಂಡು ಪ್ರಯಾಣಿಕರಿಗೆ ಸೇವೆ ನೀಡಲು ಮುಂದಾಗಿದ್ದೇವೆ. ಪ್ರಯಾಣಿಕ ಸಂಖ್ಯೆ ತೀರಾ ಕಡಿಮೆಯಿದೆ. ಸಂಸ್ಥೆ ಆರ್ಥಿಕವಾಗಿ ತೊಂದರೆಯಲ್ಲಿದೆ. ಆದಾಗ್ಯೂ ಸಂಸ್ಥೆಯ ಎಲ್ಲ ಸಿಬ್ಬಂದಿ ಸಮಸ್ಯೆಗಳನ್ನರಿತು ಒಂದಾಗಿ ಸೇವೆ ನೀಡುತ್ತಿದ್ದೇವೆ. –ಎಚ್‌.ವೈ. ಜೋಗಿನ್‌ ಘಟಕ ವ್ಯವಸ್ಥಾಪಕ

 

-ಸಂದೇಶ್‌ ಎಸ್‌. ಜೈನ್‌

 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.