ಗುರುಮಠಕಲ್ ತಾ.ಪಂ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ದಳಪತಿಗಳು
ತಾ.ಪಂ.ಗೆ ಜೆಡಿಎಸ್ ನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
Team Udayavani, Aug 10, 2020, 2:40 PM IST
ಯಾದಗಿರಿ : ಜಿಲ್ಲೆಯ ನೂತನ ಗುರುಮಠಕಲ್ ತಾಲೂಕು ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ಕೊನೆಗೂ ದಳಪತಿಗಳು ಯಶಸ್ವಿಯಾಗಿದ್ದಾರೆ.
12 ಸದಸ್ಯ ಬಲ ಹೊಂದಿರುವ ತಾ. ಪಂ. ನಲ್ಲಿ ಜೆಡಿಎಸ್ 4, ಕಾಂಗ್ರೆಸ್ 6 ಹಾಗೂ ಬಿಜೆಪಿಯ 2 ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಕಾಂಗ್ರೆಸ್ ಭದ್ರ ಕೋಟೆಯಿಂದ ರಾಜ್ಯದಲ್ಲಿ ಬಿಂಬಿತವಾಗಿದ್ದ ಗುರುಮಠಕಲ್ ಮತಕ್ಷೇತ್ರದಲ್ಲಿ 2018 ಚುನಾವಣೆಯಲ್ಲಿ ಜೆಡಿಎಸ್ ನ ನಾಗನಗೌಡ ಕಂದಕೂರ ವಿಜಯಪತಾಕೆ ಹಾರಿಸಿ, ಕೈ ಕೋಟೆಯನ್ನು ತನ್ನ ತೆಕ್ಕೆಗೆ ಪಡೆದಿದ್ದರು, ಆಗಿಂದ ಗುರುಮಠಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ನಾಯಕತ್ವ ಕೊರತೆಯುಂಟಾಗಿದೆ.
ಸದ್ಯ ತಾ. ಪಂ. ಗೆ ಅಧಿಕಾರಕ್ಕೇರಲು 7 ಸದಸ್ಯರು ಬೇಕಿತ್ತು, ಕಾಂಗ್ರೆಸ್ 6 ಸದಸ್ಯರ ಬಲ ಹೊಂದಿದ್ದರೂ ಮೀಸಲಾತಿಯ ಅಭ್ಯರ್ಥಿಯಿಲ್ಲದ ಕಾರಣ ಅಧಿಕಾರದಿಂದ ವಂಚಿತವಾಗುವಂತಾಗಿದೆ.
ಇದನ್ನೆ ಅಸ್ತ್ರವಾಗಿ ಬಳಸಿಕೊಂಡ ಜೆಡಿಎಸ್ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ತಂತ್ರ ಹೆಣೆದು ತಮ್ಮ 4 ಜನ ಸದಸ್ಯರ ಬಲದೊಂದಿಗೆ ಇತರೆ ಸದಸ್ಯರ ವಿಶ್ವಾಸ ಪಡೆದು ನೂತನ ತಾ. ಪಂ. ಗೆ ಮೊದಲ ಬಾರಿಗೆ ಅವಿರೋಧವಾಗಿ ಗದ್ದುಗೆ ಏರಿದ ಖ್ಯಾತಿ ಪಡೆದಿದೆ.
ಇದೀಗ ಕಂದಕೂರ ತಾ. ಪಂ ನ ಈಶ್ವರ ನಾಯಕ ಅಧ್ಯಕ್ಷ ಮತ್ತು ರಾಮಲಿಂಗಮ್ಮ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ