ಎಸ್ಎಸ್ಎಲ್ ಸಿ ಸಾಧಕರು: ದೂರದರ್ಶನದ ಆನ್ಲೈನ್ ಪಾಠ ಕೇಳುತ್ತಿದ್ದ ತನ್ಮಯಿ ರಾಜ್ಯಕ್ಕೆ ಪ್ರಥಮ
Team Udayavani, Aug 10, 2020, 4:52 PM IST
ಚಿಕ್ಕಮಗಳೂರು: ಕಾಫಿನಾಡಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ತನ್ಮಯಿ ಪಿ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಚಿಕ್ಕಮಗಳೂರಿನ ನಗರದ ಸೈಂಟ್ ಜೋಸೆಫ್ ಬಾಲಕಿಯರ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಅವರು ನಗರದ ಇಂದಾವರ ನಿವಾಸಿ ವಸ್ತಾರೆ ಉಪತಹಶೀಲ್ದಾರ ಐ.ಎಸ್. ಪ್ರಸನ್ನ ಮತ್ತು ಸರಕಾರಿ ಶಾಲಾ ಶಿಕ್ಷಕಿ ಡಿ.ಎಲ್ ಸಂಧ್ಯಾ ದಂಪತಿಯ ಪುತ್ರಿಯಾಗಿದ್ದಾರೆ.
ಉದಯವಾಣಿ ಜೊತೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಬಂದಿದ್ದು ನನಗೆ ತುಂಬಾ ಖುಷಿಯಾಗಿದೆ. ದಿನಕ್ಕೆ 2ಗಂಟೆ ಓದುತ್ತಿದ್ದೆ. ಪರೀಕ್ಷೆ ಸಮಯದಲ್ಲಿ ಇನ್ನೂ ಹೆಚ್ಚಿನ ಕಾಲ ಓದುತ್ತಿದ್ದೆ ಎಂದಿದ್ದಾರೆ.
ಕಷ್ಟಪಟ್ಟು ಓದಿದಕ್ಕೆ ಸಾರ್ಥಕವಾಯ್ತು. ನಾನು ಯಾವುದೇ ಟ್ಯೂಷನ್ ಪಡೆದುಕೊಂಡಿಲ್ಲ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಆನ್ಲೈನ್ ಪಾಠ ಕೇಳುತ್ತಿದ್ದೆ. ಮರೆತ ವಿಷಯಗಳು ಜ್ಞಾಪಕಕ್ಕೆ ಬರುತ್ತಿತ್ತು. ಇದರಿಂದ ಬಹಳ ಉಪಯೋಗವಾಯ್ತು ಎಂದು ತನ್ಮಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ