ಇನ್ನು ನೆನಪು ಮಾತ್ರ… ಮಾಜಿ ರಾಷ್ಟ್ರಪತಿ, ಖ್ಯಾತ ಆರ್ಥಿಕ ತಜ್ಞ ಪ್ರಣಬ್ ಮುಖರ್ಜಿ ವಿಧಿವಶ
ನಂತರ ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ಭಾರೀ ಪ್ರಮಾಣದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿತ್ತು.
Team Udayavani, Aug 31, 2020, 5:53 PM IST
ನವದೆಹಲಿ: ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿರುವ ಘಟನೆ ಸೋಮವಾರ (ಆಗಸ್ಟ್ 31, 2020)ನಡೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ಮುಖರ್ಜಿ ಅವರು ಟ್ವೀಟ್ ಮಾಡಿ ವಿಷಯ ಹಂಚಿಕೊಂಡು, ತನ್ನ ಸಂಪರ್ಕಕ್ಕೆ ಬಂದವರು ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ: ಕ್ಲರ್ಕ್ to ರಾಷ್ಟ್ರಪತಿಯವರೆಗೆ “ಪ್ರಣಬ್” ರಾಜಕೀಯ ಜೀವನಗಾಥೆ; ಕೈತಪ್ಪಿದ್ದ ಪ್ರಧಾನಿ ಪಟ್ಟ
ನಂತರ ಅವರ ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ಭಾರೀ ಪ್ರಮಾಣದ ರಕ್ತವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಲ್ಲದೇ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ನಿಗಾವಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಆದರೆ ಕೊನೆಗೂ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ತೀರಾ ವಿಷಮಸ್ಥಿತಿಗೆ ಹೋಗಿದ್ದು, ಇಹಲೋಕ ತ್ಯಜಿಸಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ