ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಣಬ್‌ ಮುಖರ್ಜಿ


Team Udayavani, Aug 31, 2020, 6:15 PM IST

pranab_mohan

ಮಣಿಪಾಲ: ʼಭಾರತದ ಆತ್ಮ ನೆಲೆಸಿರುವುದೇ ಬಹುತ್ವದಲ್ಲಿ.ʼ ದ್ವೇಷ ಮತ್ತು ಅಸಹನೆಯಿಂದ ಭಾರತದ ರಾಷ್ಟ್ರೀಯತೆ ನಾಶವಾಗಬಹುದು’ ಎಂದು ಸಂಘದ ಕಾರ್ಯಕ್ರಮದಲ್ಲಿ ಈ ಸೂಚ್ಯ ಎಚ್ಚರಿಕೆ ನೀಡಿದ್ದು ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು.

ನಾಗಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ 3ನೇ ವರ್ಷದ ವಿದ್ಯಾರ್ಥಿಗಳ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮಕ್ಕೆ ಸಂಘ ಅವರನ್ನು ಮುಖ್ಯ ಅಥಿತಿಯಾಗಿ ಆಹ್ವಾನಿಸಲಾಗಿತ್ತು. ಇದಕ್ಕೆ ಪರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್‌ನಲ್ಲಿ ಬೆರಳೆನಿಕೆ ಮಂದಿ ಇದಕ್ಕೆ ಆಕ್ಷೇಪ ಎತ್ತಿದ್ದರು.

ಸ್ವತಃ ಪ್ರಣಬ್‌ ಮುಖರ್ಜಿ ಅವರ ಮಗಳೇ ಈ ಕಾರ್ಯಕ್ರಮಕ್ಕೆ ತಮ್ಮ ತಂದೆಯವರನ್ನು ಆಹ್ವಾನಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪರ-ವಿರೋಧದ ನಡುವೆ ಪ್ರಣಬ್‌ ಮುಖರ್ಜಿ ಅವರು ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಿಸಿ ತೆರಳಿದ್ದರು. ಈ ಸಂದರ್ಭ ಅವರ ಭಾಷಣ ಕೇಳಲು ಇಡೀ ದೇಶದ ಕುತೂಹಲದಿಂದ ಕಾಯುತ್ತಿತ್ತು.

ಐದು ದಶಕಗಳ ರಾಜಕೀಯ ಜೀವನದಲ್ಲಿ ಆರೆಸ್ಸೆಸ್‌ ನಿಲುವಿಗೆ ವ್ಯತಿರಿಕ್ತವಾದ ಧೋರಣೆ ಹೊಂದಿರುವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಆರ್‌ಎಸ್‌ಎಸ್‌ನ ಸಂಸ್ಥಾಪಕ ಮತ್ತು ಮೊದಲ ಸರಸಂಘ ಚಾಲಕ ಡಾ| ಕೇಶವ ಬಲಿರಾಮ್‌ ಹೆಡಗೇವಾರ್‌ ಅವರನ್ನು ʼಭಾರತ ಮಾತೆಯ ಶ್ರೇಷ್ಠ ಪುತ್ರ’ ಎಂದು ವ್ಯಾಖ್ಯಾನಿಸಿದ್ದರು.

ʼದೇಶಪ್ರೇಮ, ರಾಷ್ಟ್ರೀಯತೆ ಮತ್ತು ಬಹುತ್ವದ ಕುರಿತು ತಮ್ಮ ಅಭಿಪ್ರಾಯ ವಿವರಿಸಿದ್ದ ಅವರು, ಆಧುನಿಕ ಭಾರತದ ತಮ್ಮ ಪರಿಕಲ್ಪನೆಯನ್ನು ಹರಿಯ ಬಿಟ್ಟಿದ್ದರು. ಭಾರತದ ಬಹುತ್ವವನ್ನು ಸಂಭ್ರಮಿಸಬೇಕು’ ರಾಷ್ಟ್ರೀಯತೆ ಎಲ್ಲವನ್ನೂ ಒಳಗೊಳ್ಳಬೇಕು. ವಿಶ್ವವೇ ಕುಟುಂಬ ಎಂಬ ಪರಿಕಲ್ಪನೆಯಂತೆ ರಾಷ್ಟ್ರೀಯತೆಯಲ್ಲಿ ವಿಶ್ವಾತ್ಮಕ ಮನೋಭಾವ ಅಡಕವಾಗಿರಬೇಕು. ರಾಷ್ಟ್ರೀಯತೆ ಒಂದು ಭಾಷೆ ಒಂದು ಧರ್ಮಕ್ಕೆ ಸೀಮಿತವಾಗಬಾರದು ಎಂದು ಆರ್‌ಎಸ್‌ಎಸ್‌ ಸಭೆಯಲ್ಲಿಯೇ ಅವರು ಹೇಳಿದ್ದರು.

ಆರಂಭದಲ್ಲಿ ಭಾರತ ಮುಕ್ತ ಸಮಾಜ ಹೊಂದಿತ್ತು. ಸಿಲ್ಕ್ ರೂಟ್‌ ಸಹಿತ ಎಲ್ಲ ಪ್ರಮುಖ ದಾರಿಗಳ ಮೂಲಕ ದೇಶಕ್ಕೆ ಸಂಪರ್ಕವಿತ್ತು. ವ್ಯಾಪಾರಿಗಳು ಮತ್ತು ಹಲವಾರು ಮಂದಿ ವಿದೇಶಿ ದಾಳಿಕೋರರು ಇಲ್ಲಿಗೆ ಆಗಮಿಸಿದ್ದರು. ಶತಮಾನಗಳ ಹಿಂದೆ ಆಗಮಿಸಿದ್ದ ವಿದೇಶಿ ಪ್ರವಾಸಿಗರು, ವಿವಿಧ ರೀತಿಯ ಆಡಳಿತ ವ್ಯವಸ್ಥೆ ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿದ್ದ ಬಗ್ಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಪ್ರಣಬ್‌ ಮುಖರ್ಜಿ ನೆನಪಿಸಿದ್ದರು.

ಈಗಿನ ಪರಿಸ್ಥಿತಿಯಲ್ಲಿ ಹಿಂಸೆಗೆ ವಿದಾಯ ಹೇಳಿ ಎಲ್ಲರನ್ನೂ ಒಳಗೊಳ್ಳುವಂಥ ವ್ಯವಸ್ಥೆಯತ್ತ ಹೊರಳಿಕೊಳ್ಳಬೇಕಾಗಿದೆ. ಎಲ್ಲ ರೀತಿಯ ಹಿಂಸೆ ಮತ್ತು ಭೀತಿಯ ವಾತಾವರಣದಿಂದ ನಮ್ಮ ಸಾರ್ವಜನಿಕ ವ್ಯವಸ್ಥೆಯನ್ನು ದೂರ ಇರಿಸಿಕೊಳ್ಳಬೇಕಾಗಿದೆ. ದ್ವೇಷದ ಮನೋಭಾವನೆ ರಾಷ್ಟ್ರೀಯತೆಯ ನಾಶಕ್ಕೆ ಕಾರಣವಾಗುತ್ತದೆ. ಅಸಹಿಷ್ಣುತೆ ನಮ್ಮ ರಾಷ್ಟ್ರೀಯ ಏಕತೆಗೆ ಧಕ್ಕೆ ತರುತ್ತದೆ. ಹಲವು ರಾಜವಂಶಗಳು, ಪ್ರಭಾವ ಶಾಲಿಯಾಗಿದ್ದ ರಾಜಕುಟುಂಬಗಳು ಭಾರತದ ಉತ್ತರ ಮತ್ತು ದಕ್ಷಿಣ ಭಾಗವನ್ನು ಆಳಿದ್ದವು.

ನಮ್ಮ ದೇಶದ ರಾಷ್ಟ್ರೀಯ ಏಕತೆ ವಿಚಾರ ಹಲವು ರೀತಿಯ ಸಮೀಕರಣ ಮತ್ತು ಸಮ್ಮಿಲನದ ಬಳಿಕ ರೂಪುಗೊಂಡಿದೆ. ಹಲವು ರೀತಿಯ ಸಂಸ್ಕೃತಿಗಳು ಮತ್ತು ನಂಬಿಕೆ ನಮ್ಮ ವ್ಯವಸ್ಥೆಯ ವಿಶೇಷವೇ ಆಗಿದೆ. ರಾಷ್ಟ್ರೀಯತೆಯ ಬಗ್ಗೆ ದೇಶದ ಮೊತ್ತ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ಬರೆದ ʼಡಿಸ್ಕವರಿ ಆಫ್ ಇಂಡಿಯಾ‘ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶವನ್ನು ಮುಖರ್ಜಿ ಅವರು ಉಲ್ಲೇಖೀಸುತ್ತಾ….
“ಹಿಂದೂ, ಮುಸ್ಲಿಂ, ಸಿಕ್ಖ್ ಮತ್ತು ಭಾರತದ ಇತರ ಯಾವುದೇ ಗುಂಪಿಗೆ ಸೇರ್ಪಡೆಗೊಂಡವನು ʼತಾನುʼ ಎಂಬ ಭಾವನೆಯಿಂದ ಹೊರಗೆ ಬಂದಾಗ ಮಾತ್ರ ರಾಷ್ಟ್ರೀಯತೆ ಎಂಬ ವಿಚಾರ ನಮ್ಮೆಲ್ಲರಲ್ಲಿ ಮೈಗೂಡುತ್ತದೆ’ ಎಂದು ನೆಹರೂ ಬರೆದಿದ್ದನ್ನು ನೆನಪಿಸಿ ಭಾಷಣ ಮುಂದುವರಿಸಿದ್ದರು.

ವಸುಧೈವ ಕುಟುಂಬಕಂ 
1,800 ವರ್ಷಗಳ ಕಾಲ ತಕ್ಷಶಿಲಾ, ನಲಂದಾ ಸೇರಿದಂತೆ ವಿಶ್ವಮಾನ್ಯ ವಿವಿಗಳು ಪ್ರಪಂಚದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳನ್ನು ಮತ್ತು ಸಂಶೋಧಕರನ್ನು ಆಹ್ವಾನಿಸುತ್ತಿದ್ದವು. ನಮ್ಮ ದೇಶದ ರಾಷ್ಟ್ರೀಯತೆ ಎಂಬ ವಿಚಾರ ಏಕತೆಯಿಂದ ಉಂಟಾಗಿದೆ. ಶತಮಾನಗಳಿಂದಲೂ ಕೂಡ “ವಸುಧೈವ ಕುಟುಂಬಕಂʼ ಎಂಬ ತತ್ತ್ವದಲ್ಲಿ ನಂಬಿಕೆಯನ್ನು ಇರಿಸಿಕೊಂಡು ಬಂದಿದ್ದೇವೆ.

ಕ್ರಿಸ್ತಪೂರ್ವ ಆರನೇ ಶತಮಾನದಿಂದ 600 ವರ್ಷಗಳ ಕಾಲ ಮುಸ್ಲಿಂ ಅರಸರ ಆಳ್ವಿಕೆ ದೇಶದಲ್ಲಿತ್ತು. ಬಳಿಕ ಈಸ್ಟ್‌ ಇಂಡಿಯಾ ಕಂಪೆನಿ ಆಡಳಿತದ ನೇತೃತ್ವ ವಹಿಸಿಕೊಂಡಿತು. ಮೊದಲ ಸ್ವಾತಂತ್ರ್ಯ ಸಂಗ್ರಾಮದ ಬಳಿಕ ದೇಶದ ಆಡಳಿತ ರಾಣಿಯ ನೇತೃತ್ವಕ್ಕೆ ಸಿಕ್ಕಿತ್ತು. ಹಲವಾರು ಆಡಳಿತಗಾರರು ಆಡಳಿತ ನಡೆಸಿದರೂ 5 ಸಾವಿರ ವರ್ಷಕ್ಕಿಂತಲೂ ಹೆಚ್ಚಿನ ಇತಿಹಾಸ ಇರುವ ನಮ್ಮ ನಾಗರಿಕತೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು ಎಂದು ಭರತ ಖಂಡದ ಐಹಿತ್ಯವನ್ನು ಸಭೆಯ ಮುಂದಿಟ್ಟಿದ್ದರು.

ಯಾರು ಪರಿಪೂರ್ಣ ಭಾರತೀಯ
ತ್ರಿಪುರಾದಿಂದ ದ್ವಾರಕೆಯವರೆಗೆ, ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ನಮ್ಮ ದೇಶದಲ್ಲಿ ಹಲವಾರು ಧರ್ಮಗಳಿವೆ ಎಂದು ಹೇಳುವುದೇ ರೋಮಾಂಚನ. ಲೆಕ್ಕವಿಲ್ಲದಷ್ಟು ಧರ್ಮಗಳು, ಜಾತಿಗಳು ಒಂದೇ ಸಂವಿಧಾನದ ಅಡಿಯಲ್ಲಿವೆ ಎಂದು ಹೇಳಿಕೊಳ್ಳುವುದೇ ಹೆಗ್ಗಳಿಕೆ. 122 ಭಾಷೆಗಳು, 1,600 ನುಡಿಕಟ್ಟು, 7 ಪ್ರಮುಖ ಧರ್ಮಗಳು, ಮೂರು ಪ್ರಮುಖ ಜನಾಂಗಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಹೀಗಾಗಿಯೇ ಭಾರತೀಯ ಎಂದು ಕರೆಯಿಸಿಕೊಳ್ಳಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ವಿವಿಧ ಅಭಿಪ್ರಾಯಗಳು ಇರುತ್ತವೆ. ಅದನ್ನು ನಿರಾಕರಿಸಲಾಗದು ಎನ್ನುವ ಮೂಲಕ ಬಹುತ್ವವನ್ನು ಸಾರಿದ್ದರು.

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ನೀಡಿದ ಭೇಟಿ ಹಾಗೂ ಅಲ್ಲಿ ಅವರು ಮಾಡಿದ ಭಾಷಣ ಭಾರತದ ಇತಿಹಾಸದ ಪುಟದಲ್ಲಿ ದಾಖಲಾಗುವಂಥದ್ದು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.