ಅಂಗಡಿಗಳ ಮೇಲೆ ದಾಳಿ: ದಂಡ
Team Udayavani, Aug 12, 2020, 3:10 PM IST
ಸಾಂದರ್ಭಿಕ ಚಿತ್ರ
ಹರಿಹರ: ತಂಬಾಕು ಉತ್ಪನ್ನಗಳ ಮಾರಾಟ ತಡೆಯಲು ಅಧಿಕಾರಿಗಳ ತಂಡ ಮಂಗಳವಾರ ನಗರದ ಮುಖ್ಯ ರಸ್ತೆ, ಹಳೆ ಪಿ.ಬಿ.ರಸ್ತೆ ಮುಂತಾದೆಡೆ ಸಗಟು ಹಾಗೂ ರೀಟೇಲ್ ಅಂಗಡಿಗಳ ಮೇಲೆ ದಾಳಿ ನಡೆಸಿತು. ಬೀಡಿ, ಸಿಗರೇಟು, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟಮಾಡುತ್ತಿದ್ದವರಿಂದ ದಂಡ ವಸೂಲಿ ಮಾಡಲಾಯಿತು.
ನೇತೃತ್ವ ವಹಿಸಿದ್ದ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಮಾತನಾಡಿ, ಗುಟ್ಕಾ ಹಾಕಿಕೊಂಡು ಎಲ್ಲೆಂದರಲ್ಲಿ ಉಗುಳುವುದರಿಂದ ಕೋವಿಡ್-19 ಮತ್ತಷ್ಟು ವ್ಯಾಪಕವಾಗಿ ಹರಡುತ್ತದೆ. ಕೊಟ್ಪಾ (ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ) ಅಡಿ ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಿಸಲಾಗಿದೆ. ಅಡಿಕೆ ಹಾಗೂ ತಂಬಾಕು ಪ್ರತ್ಯೇಕಿಸಿ ಮಾರಾಟ ಮಾಡುವುದನ್ನೂ ಸಹ ಹೈಕೋರ್ಟ್ ನಿರ್ಬಂಧಿಸಿದೆ. ಅಧಿಕಾರಿಗಳ ಕಣ್ತಪ್ಪಿಸಿ ಗುಟ್ಕಾ ಮಾರಾಟ ಮಾಡಿದ್ದೇ ಆದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಎಸ್.ಎಚ್ .ಪಾಟೀಲ್, ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ, ನಗರಸಭೆ ಆರೋಗ್ಯ ನಿರೀಕ್ಷಕ ಕೋಡಿ ಭೀಮರಾಯ, ಸಾಮಾಜಿಕ ಕಾರ್ಯಕರ್ತ ದೇವರಾಜ್, ಸಿಬ್ಬಂದಿ ರುದ್ರೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!
Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ
Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ