ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!


Team Udayavani, Aug 12, 2020, 6:12 PM IST

Elephant-New

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ನಮ್ಮಲ್ಲಿ ಎಲ್ಲದಕ್ಕೂ ಒಂದೊಂದು ದಿನ ಎಂದು ನಿಗದಿಯಾಗಿರುತ್ತದೆ.

ಹಾಗೆಯೇ ಇಂದು ವಿಶ್ವ ಆನೆಗಳ ದಿನ, ಅಥವಾ ಇದನ್ನು ನಾವು ವಿಶ್ವ ಗಜ ದಿನವೆಂದೂ ಸಹ ಕರೆಯಬಹುದು.

ಆನೆಗಳು ಪ್ರಕೃತಿಯಲ್ಲಿ ವಾಸವಾಗಿರುವ ಅತೀದೊಡ್ಡ ಜೀವಿಗಳಲ್ಲಿ ಒಂದೆಂಬ ಸ್ಥಾನವನ್ನು ಪಡೆದುಕೊಂಡಿವೆ.

ನಮ್ಮ ದೇಶದಲ್ಲಿ ಆನೆಗಳಿಗೆ ವಿಶೇಷವಾದ ಸ್ಥಾನವಿದೆ. ಪ್ರಥಮ ಪೂಜಿತ ಗಣೇಶನೂ ಆನೆ ಮುಖದ ದೇವರೇ ಹಾಗಾಗಿ ಗಣೇಶನನ್ನು ನಾವೆಲ್ಲಾ ಗಜಮುಖ ಎಂದೇ ಕರೆಯುವುದು.

ಇನ್ನು ದಕ್ಷಿಣ ಭಾರತದ ಬಹುತೇಕ ಎಲ್ಲಾ ದೇವಸ್ಥಾನಗಳಲ್ಲೂ ಒಂದಾದರೂ ಆನೆ ಇದ್ದೇ ಇರುತ್ತದೆ. ಹಾಗಾಗಿ ನಮಗೂ ಆನೆಗಳಿಗೂ ಬಾಲ್ಯದಿಂದಲೇ ಒಂದು ನಂಟು ಬೆಳೆದುಬಿಟ್ಟಿರುತ್ತದೆ.

ಇನ್ನು ನಮ್ಮಲ್ಲಿ ಕಾಡುಗಳ್ಳರ ಹಾವಳಿಗೆ ಅತೀ ಹೆಚ್ಚು ತುತ್ತಾಗುತ್ತಿರುವುದೂ ಸಹ ಆನೆಗಳೇ. ಆನೆ ದಂತಕ್ಕೆ ಅಪಾರವಾದ ಬೇಡಿಕೆ ಮತ್ತು ಬೆಲೆ ಇರುವುದರಿಂದ ಗಂಡಾನೆಗಳು ಕಾಡುಗಳ್ಳರ ಕ್ರೂರದೃಷ್ಟಿಗೆ ತುತ್ತಾಗುತ್ತಲೇ ಇವೆ. ನಮ್ಮ ದೇಶ ಕಂಡ ಅತ್ಯಂತ ಕ್ರೂರಿ ಕಾಡುಗಳ್ಳ ವೀರಪ್ಪನ್ ಸಹ ‘ದಂತ ಚೋರ’ನೆಂದೇ ಕುಖ್ಯಾತಿಯನ್ನು ಹೊಂದಿದ್ದವ.

ಏಷ್ಯಾ ಸಹಿತ ನಮ್ಮ ದೇಶದಲ್ಲಿ ಕಾಣಸಿಗುವ ಆನೆಗಳು ಆಫ್ರಿಕಾದ ಆನೆಗಳಿಗಿಂತ ಗಾತ್ರ ಮತ್ತು ಆಕಾರದಲ್ಲಿ ಸಂಪೂರ್ಣ ಭಿನ್ನವಾಗಿವೆ. ದೊಡ್ಡ ಆನೆಗಳು ಗಾಂಭಿರ್ಯಕ್ಕೆ ಹೆಸರುವಾಸಿಯಾದರೆ ಮರಿಯಾನೆಗಳು ತಮ್ಮ ತುಂಟಾಟಗಳಿಗೆ ಪ್ರಸಿದ್ಧಿಯನ್ನು ಪಡೆದಿವೆ.

ಅವುಗಳು ತಮ್ಮ ಪುಟ್ಟ ಸೊಂಡಿಲಿನಿಂದ ಕೂಡಿದ ದೇಹದ ಮೂಲಕ ನಡೆಸುವ ತುಂಟಾಟದ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ.

ಜಗತ್ತಿನಲ್ಲಿರುವ ಒಟ್ಟು ಆನೆಗಳ ಸಂತತಿಯಲ್ಲಿ ಸರಿಸುಮಾರು 60% ಆನೆಗಳು ಭಾರತ ದೇಶದಲ್ಲಿಯೇ ಇರುವುದು ವಿಶೇಷ. ನಮ್ಮ ದೇಶದ 14 ರಾಜ್ಯಗಳಲ್ಲಿ ಇರುವ 30 ಆನೆ ಸಂರಕ್ಷಿತ ಪ್ರದೇಶಗಳಲ್ಲಿ ಈ ಗಜ ಸಂತತಿ ಹರಡಿದೆ. ಅದರಲ್ಲಿ ನಮ್ಮ ರಾಜ್ಯದ ದುಬಾರೆ ಮತ್ತು ಸಕ್ರೆಬೈಲೂ ಸಹ ಸೇರಿದೆ. ಭಾರತದಲ್ಲಿ ಸರಿಸುಮಾರು 65 ಸಾವಿರ ಚದರ ಕಿಲೋ ಮೀಟರ್ ಪ್ರದೇಶಗಳಲ್ಲಿ ಗಜ ಸಂತತಿ ವಾಸಿಸುತ್ತಿರುವುದರಿಂದ ಅವುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವೂ ಆಗಿದೆ.

ನಮ್ಮ ಪಶ್ಚಿಮ ಘಟ್ಟ ಭಾಗಗಳಲ್ಲೂ ಆನೆಗಳ ಸಂತತಿ ಬಹಳಷ್ಟಿದೆ. ಆನೆಗಳನ್ನು ಪಳಗಿಸಿ ಅವುಗಳನ್ನು ಧಾರ್ಮಿಕ ಚಟುವಟಿಕೆಗಳಿಗೆ ಮತ್ತು ಇನ್ನಿತರ ಕೆಲಸಗಳಿಗೆ ಬಳಸಿಕೊಳ್ಳುವ ವಿಚಾರದಲ್ಲಿ ಕೇರಳ ರಾಜ್ಯ ಅಗ್ರಣಿಯಾಗಿದೆ.

ಇಂದು ವಿಶ್ವ ಗಜ ದಿನದ ಈ ಸಂದರ್ಭದಲ್ಲಿ ನಾವು ನಿಮಗೆ ಆನೆ ಮರಿಗಳ ತುಂಟಾಟಗಳ ಇಂತಹ ಕೆಲವು ವಿಡಿಯೋ ಟ್ವೀಟ್ ಗಳನ್ನು ಇಲ್ಲಿ ನೀಡುತ್ತಿದ್ದೇವೆ ನೋಡಿ ಆನಂದಿಸಿ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.