ನೆಟ್‌ವರ್ಕ್‌ ಸಮಸ್ಯೆ: ಅಧಿಕಾರಿಗಳು ತರಾಟೆಗೆ


Team Udayavani, Aug 14, 2020, 12:42 PM IST

uk-tdy-1

ಸಾಂದರ್ಭಿಕ ಚಿತ್ರ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಭಾಗದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ ವರ್ಕ್‌ ಸಮಸ್ಯೆಯಿಂದಾಗಿ ಬೇಸತ್ತ ಜನತೆ ಪಟ್ಟಣದ ಬಿಎಸ್‌ಎನ್‌ಎಲ್‌ ಕಚೇರಿಗೆ ಬಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮೊಬೈಲ್‌ ನೆಟ್‌ವರ್ಕ್‌ ಹಾಗೂ ಸ್ಥಿರ ದೂರವಾಣಿಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಜನತೆ ತುರ್ತು ಸಂಪರ್ಕಕ್ಕೂ ಯಾವುದೇ ಸಾಧನಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವರ್ಷದಿಂದೀಚೆಗೆ ವಿದ್ಯುತ್‌ ಸಂಪರ್ಕ ಇದ್ದರೆ ಮಾತ್ರ ಟಾವರ್‌ ಕಾರ್ಯ ನಿರ್ವಹಿಸುತ್ತಿದೆ. ವಿದ್ಯುತ್‌ ವ್ಯತ್ಯಯವಾದರೆ ನೆಟ್‌ವರ್ಕ್‌ ಅಷ್ಟಕ್ಕಷ್ಟೇ. ಕಳೆದ ವಾರ ಭಾರೀ ಮಳೆ-ಗಾಳಿಯಿಂದಾಗಿ ವಿದ್ಯುತ್‌ ವ್ಯತ್ಯಯ ಉಂಟಾದಾಗ ವಿದ್ಯುತ್‌ ಜತೆ ಹೋದ ನೆಟ್‌ವರ್ಕ್‌ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಸರಿಯಾದರೂ ಸರಿಯಾಗಿಲ್ಲ. ನಂದೊಳ್ಳಿಯಲ್ಲಿ ಟವರ್‌ ಇದ್ದೂ ವ್ಯರ್ಥವಾಗಿದೆ. ಹಲವು ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌, ಅನೇಕರು ವರ್ಕ್‌ ಫ್ರಂ ಹೋಂ ಸಲುವಾಗಿ ಮೊಬೈಲ್‌ ನೆಟ್‌ವರ್ಕನ್ನೇ ನೆಚ್ಚಿಕೊಂಡಿದ್ದಾರೆ. ಜನತೆ ತುರ್ತಾಗಿ ಒಂದು ಕರೆ ಮಾಡುವುದಕ್ಕೂ ಬೆಟ್ಟ-ಗುಡ್ಡ ಹತ್ತಿ ನೆಟ್‌ವರ್ಕ್‌ ಹುಡುಕಬೇಕಾದ ದುಃ ಸ್ಥಿತಿ ಬಂದೊದಗಿದೆ.

ನಂದೊಳ್ಳಿಯಲ್ಲಿ ಟವರ್‌ ನಿರ್ವಹಣೆಗೆ ಯಾವುದೇ ಸಿಬ್ಬಂದಿ ಇರುವುದಿಲ್ಲ. ವಿದ್ಯುತ್‌ ವ್ಯತ್ಯಯವಾದಾಗ ಹೋದ ನೆಟ್‌ವರ್ಕ್‌, ವಿದ್ಯುತ್‌ ಬಂದ ನಂತರ ಮತ್ತೆ ಬರಬೇಕೆಂದರೆ ಟವರನ್ನು ಆನ್‌ ಮಾಡಲು ಯಲ್ಲಾಪುರದಿಂದಲೇ ಸಿಬ್ಬಂದಿ ಬರಬೇಕು. ಇಷ್ಟಾದರೂ ಜನರಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪದೇಪದೇ ನೆಟ್‌ವರ್ಕ್‌ ಇಲ್ಲದಂತಾಗುವ ಸಮಸ್ಯೆ ಪರಿಹರಿಸಬೇಕು. ವಿದ್ಯುತ್‌ ವ್ಯತ್ಯಯವಾದರೂ ನೆಟ್‌ವರ್ಕ್‌ ಇರುವಂತೆ ಕ್ರಮ ಕೈಗೊಳ್ಳಬೇಕು. ಟವರ್‌ ನಿರ್ವಹಣೆಗೆ ಸಿಬ್ಬಂದಿ ನೇಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಮಳೆ-ಗಾಳಿಯಿಂದಾಗಿ ಈ ಅವ್ಯವಸ್ಥೆ ಉಂಟಾಗಿತ್ತು. ಇನ್ನು ಮುಂದೆ ಈ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಸಮಸ್ಯೆ ಮುಂದುವರಿದರೆ ಬಿಎಸ್‌ ಎನ್‌ಎಲ್‌ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಎಂ.ಎನ್‌. ಭಟ್ಟ, ನಾಗರಾಜ ಭಟ್‌ ಕವಡಿಕೇರಿ, ಆರ್‌. ಎಸ್‌. ಭಟ್ಟ, ಮಹಾಬಲೇಶ್ವರ ಭಟ್ಟ ಬೆಳಶೇರ, ಗೋಪಣ್ಣ ಮೊಟ್ಟೆಪಾಲ, ರಾಮಚಂದ್ರ ಭಟ್ಟ ಕಿರಕುಂಭತ್ತಿ, ಗಣಪತಿ ಭಟ್ಟ ಉಬ್ಬಜ್ಜಿಪಾಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.