ವಾರ್ಡ್‌ ಸಮಿತಿ ರಚನೆಗೆ ಪಾಲಿಕೆ ಅನುಮೋದನೆ; ಸದಸ್ಯರ ಆಯ್ಕೆಯನ್ನು ಸ್ಥಳೀಯ ನಾಗರಿಕರೇ ನಡೆಸಲಿ


Team Udayavani, Aug 15, 2020, 4:28 AM IST

ವಾರ್ಡ್‌ ಸಮಿತಿ ರಚನೆಗೆ ಪಾಲಿಕೆ ಅನುಮೋದನೆ; ಸದಸ್ಯರ ಆಯ್ಕೆಯನ್ನು ಸ್ಥಳೀಯ ನಾಗರಿಕರೇ ನಡೆಸಲಿ

ಮಹಾನಗರ: ಮಂಗಳೂರಿನ ನಾಗರಿಕರ ಬಹು ಬೇಡಿಕೆಯಾದ ವಾರ್ಡ್‌ ಸಮಿತಿ ರಚನೆಗೆ ಇದೀಗ ಮಂಗಳೂರು ಮಹಾನಗರ ಪಾಲಿಕೆಯಿಂದ ಅನುಮೋದನೆ ದೊರಕಿದೆ. ಪಾರದರ್ಶಕ ಆಡಳಿತ ಪಡೆಯುವ ಸಲುವಾಗಿ ಆ ಭಾಗದ ಜನರೇ ವಾರ್ಡ್‌ ಸದಸ್ಯರನ್ನು ಆಯ್ಕೆ ಮಾಡಲು ಅವಕಾಶ ನೀಡುವಂತೆ ಇದೀಗ ಒತ್ತಾಯ ಶುರುವಾಗಿದೆ.

ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ ಗಳಲ್ಲಿ ಪಾರದರ್ಶಕ ಆಡಳಿತ ನೀಡುವ ಸಲುವಾಗಿ ವಾರ್ಡ್‌ ಸಮಿತಿ ರಚಿಸಬೇಕು ಎಂಬುದು ನಾಗರಿಕರ ಹಲವು ವರ್ಷಗಳ ಬೇಡಿಕೆಯಾಗಿತ್ತು. ವಾರ್ಡ್‌ ಸಮಿತಿ ರಚನೆಯಾದ ಬಳಿಕ ಪಾಲಿಕೆ ಅಭಿವೃದ್ಧಿಯಲ್ಲಿ ಜನರ ನೇರ ಸಹಭಾಗಿತ್ವಕ್ಕೆ ಅವಕಾಶ ದೊರೆಯಲಿದೆ. ಆದರೆ ವಾರ್ಡ್‌ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡುವಾಗ ಜನರ ಸಹಭಾಗಿತ್ವ ಅಗತ್ಯವಾಗಿದ್ದು, ಜನರೇ ಆಯ್ಕೆ ಮಾಡಬೇಕು ಎಂಬುದು ವಾರ್ಡ್‌ ಸಮಿತಿ ರಚನೆಗಾಗಿ ಹೋರಾಡುತ್ತಿರುವ ನಾಗರಿಕರ ಅಭಿಪ್ರಾಯ.

ಬೆಂಗಳೂರು ಮುಂತಾದೆಡೆ ಈಗಾಗಲೇ ವಾರ್ಡ್‌ ಸಮಿತಿ ಅಸ್ತಿತ್ವದಲ್ಲಿದೆ. ಅಲ್ಲಿ ಕಾರ್ಪೊರೇಟರ್‌ಗಳು ಅವರಿಗೆ ಬೇಕಾದ ಜನರನ್ನೇ ಆಯ್ಕೆ ಮಾಡಿದ್ದಾರೆ. ಹೀಗೆ ಮಾಡುವುದರಿಂದ ಪಾರದರ್ಶಕ ಆಡಳಿತ ನಿರೀಕ್ಷಿಸುವುದು ಅಸಾಧ್ಯ. ಜನರೇ ಆಯ್ಕೆ ಮಾಡುವ ಅನುಭವಿಗಳು, ಯುವಕರು ವಾರ್ಡ್‌ ಕಮಿಟಿಯ ಸದಸ್ಯರಾಗಬೇಕು ಎನ್ನುವುದು ವಾರ್ಡ್‌ ಸಮಿತಿಗೆ ಹೋರಾಡುತ್ತಿರುವ ನಾಗರಿಕರ ವಾದ.

ಆಶ್ವಾಸನೆ ಈಡೇರಿಕೆ
ಕಳೆದ ಅಕ್ಟೋಬರ್‌ನಲ್ಲಿ ಪಾಲಿಕೆ ಚುನಾವಣೆ ಮುಗಿದ ತತ್‌ಕ್ಷಣ ಅಸ್ತಿತ್ವಕ್ಕೆ ಬರಬೇಕಿದ್ದ ವಾರ್ಡ್‌ ಸಮಿತಿಗಳ ರಚನೆ ಪ್ರಕ್ರಿಯೆಗೆ ಮೇಯರ್‌ ಆಯ್ಕೆ ಮತ್ತು ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರವಾಗದೇ ಇದ್ದುದರಿಂದ ತೊಡಕಾಗಿತ್ತು. ಆ ಬಳಿಕ ಕೊರೊನಾ ಆತಂಕದಿಂದ ಲಾಕ್‌ಡೌನ್‌ ಆದ ಪರಿಣಾಮ ಪಾಲಿಕೆಯ ಸಭೆಗಳೂ ನಡೆಯದೇ ಇದ್ದದ್ದರಿಂದಾಗಿ ವಾರ್ಡ್‌ ಸಮಿತಿ ರಚನೆ ಸಂಬಂಧ ಚರ್ಚೆ ಮುನ್ನೆಲೆಗೆ ಬಂದಿರಲಿಲ್ಲ. ಪಾಲಿಕೆ ಆಡಳಿತದಲ್ಲಿ ವಾರ್ಡ್‌ ಸಮಿತಿ ರಚಿಸಬೇಕೆಂಬ ಹೈಕೋರ್ಟ್‌ ಆದೇ ಶದ ಹಿನ್ನೆಲೆಯಲ್ಲಿ ಚುನಾವಣೆ ಪೂರ್ವ ದಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳೆಲ್ಲರೂ ವಾರ್ಡ್‌ ಸಮಿತಿ ರಚನೆಯ ಆಶ್ವಾಸನೆ ನೀಡಿದ್ದರು. ಪಾಲಿಕೆಯಲ್ಲಿ ನೂತನ ಆಡಳಿತ ಶುರುವಾದ ಬಳಿಕ ನಡೆದ ಪರಿಷತ್‌ನ ಮೊದಲ ಸಾಮಾನ್ಯ ಸಭೆಯಲ್ಲಿ ವಾರ್ಡ್‌ ಕಮಿಟಿ ರಚನೆ ಪ್ರಕ್ರಿಯೆಗೆ ಅನುಮೋದನೆ ಸಿಕ್ಕಿದೆ.

ಸಮಿತಿ ರಚನೆ ಹೇಗೆ?
ಪ್ರತಿಯೊಂದು ವಾರ್ಡ್‌ನ ವಿವಿಧ ಪ್ರದೇಶಗಳ ಜನತೆ ತಮ್ಮ ತಮ್ಮ ಪರಿಸರದ ಸದಸ್ಯರನ್ನು ಆಯ್ಕೆ ಮಾಡಿ ಕಾರ್ಪೊ
ರೇಟರ್‌ಗೆ ತಿಳಿಸಬೇಕು. ಕಾರ್ಪೊರೇಟರ್‌ ಆ ಸಮಿತಿಯ ಅಧ್ಯಕ್ಷರಾಗಿದ್ದು, ಆ ಮಾಹಿತಿಯನ್ನು ಆಯುಕ್ತರಿಗೆ ನೀಡುತ್ತಾರೆ. ಆಯುಕ್ತರು ಅದಕ್ಕೆ ಅನುಮೋದನೆ ನೀಡಬೇಕು. ವಾರ್ಡ್‌ ಸಮಿತಿಯಲ್ಲಿ ಒಟ್ಟು 10 ಜನ ಸದಸ್ಯರಿರುತ್ತಾರೆ. ಆ ಪೈಕಿ ಮೂವರು ಮಹಿಳೆಯರು, ನಿವೃತ್ತ ಸರಕಾರಿ ನೌಕರರು, ಯುವಕರು ಕಡ್ಡಾಯವಾಗಿ ಸಮಿತಿಯಲ್ಲಿರಬೇಕು.

ಒಂದು ವೇಳೆ ವಾರ್ಡ್‌ ಸಮಿತಿಯ ಸಲಹೆ, ಅಸಮ್ಮತಿಯನ್ನು ಮೀರಿಯೂ ಕಾರ್ಪೊರೇಟರ್‌ ಅನುದಾನ ಬಳಕೆ ಅಥವಾ ಇತರೆ ಕಾರ್ಯಗಳನ್ನು ಮಾಡುವುದಾದರೆ ಲಿಖೀತವಾಗಿ ಆಯುಕ್ತರಿಗೆ ಕಾರ್ಪೊರೇಟರ್‌ ತಿಳಿಸಬೇಕು. “ನಾನು ವಾರ್ಡ್‌ ಸಮಿತಿಯ ತೀರ್ಮಾನವನ್ನು ಉಲ್ಲಂ ಸುತ್ತಿದ್ದೇನೆ’ ಎಂದು ಗಮನಕ್ಕೆ ತರಬೇಕಾಗುತ್ತದೆ.

ವಾರ್ಡ್‌ ಸಮಿತಿ ಅಧಿಕಾರ
ಪ್ರತಿಯೊಂದು ವಾರ್ಡ್‌ನ ಜನರು ತಾವು ಆಯ್ಕೆ ಮಾಡುವ ಪ್ರತಿನಿಧಿಯ (ಕಾರ್ಪೊರೇಟರ್‌) ಕಾರ್ಯವೈಖರಿ ಮೇಲೆ ನೇರವಾಗಿ ಪ್ರಭಾವ ಬೀರಲು ವಾರ್ಡ್‌ ಸಮಿತಿ ನೆರವಾಗುತ್ತದೆ. ಕಾರ್ಪೊರೇಟರ್‌ ಅಥವಾ ಆ ವಾರ್ಡ್‌ನ ಸದಸ್ಯ ತನ್ನ ಇಚ್ಛಾನುಸಾರ, ಅನಗತ್ಯವೆನಿಸುವ ಕಾಮಗಾರಿ ಮಾಡಿಸುವುದನ್ನು ತಡೆಯುವ ಅಧಿಕಾರ ವಾರ್ಡ್‌ ಸಮಿತಿಗಿರುತ್ತದೆ.

ಜನರ ಆಯ್ಕೆ
ವಾರ್ಡ್‌ ಸಮಿತಿ ರಚನೆಯಾಗಬೇಕೆಂಬುದು ನಮ್ಮ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಸಮಿತಿ ರಚನೆಗೆ ಅನುಮೋದನೆ ಸಿಕ್ಕಿರುವುದು ತುಂಬಾ ಖುಷಿಯ ವಿಚಾರ. ಪ್ರತಿ ವಾರ್ಡ್‌ನಲ್ಲಿಯೂ ಕಾರ್ಪೊರೇಟರ್‌ಗಳು ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡದೆ ಜನತೆಯೇ ಆಯ್ಕೆ ಮಾಡುವಂತಾಗಬೇಕು. ಈಗಲಾದರೂ ಪ್ರಜಾಪ್ರಭುತ್ವ ಅನುಷ್ಠಾನಕ್ಕೆ ಬರುತ್ತದೆ ಎಂಬ ಆಶಾಭಾವನೆ.
– ಪದ್ಮನಾಭ ಉಳ್ಳಾಲ್‌, ಎಂಸಿಸಿ ಸಿವಿಕ್‌ ಗ್ರೂಪ್‌

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.