ಹೆಸರು ಬದಲಾವಣೆ; ಒಂದು ಲಕ್ಷ ಲಂಚ ಸ್ವೀಕರಿಸಿದ ಡಿಡಿಎ ಉದ್ಯೋಗಿಗಳು ಸಿಬಿಐ ಬಲೆಗೆ
ನಿವೇಶನ ಮಾರಾಟ ವಿಚಾರದಲ್ಲಿ ಖರೀದಿದಾರರನ ಬಳಿ ನಾಲ್ಕು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು
Team Udayavani, Aug 15, 2020, 6:09 PM IST
ನವದೆಹಲಿ: ನಿವೇಶನ ಖರೀದಿಯ ವಿಚಾರದಲ್ಲಿ ವ್ಯಕ್ತಿಯೊಬ್ಬರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದೆಹಲಿ ಅಭಿವೃದ್ಧಿ ಪ್ರಾಧಿಕಾರ(ಡಿಡಿಎ)ದ ಸಹಾಯಕ ನಿರ್ದೇಶಕ ಸೇರಿದಂತೆ ಮೂವರು ಉದ್ಯೋಗಿಗಳನ್ನು ಸಿಬಿಐ ಶನಿವಾರ (ಆಗಸ್ಟ್ 15, 2020) ಬಂಧಿಸಿದೆ.
ಲಂಚ ಸ್ವೀಕರಿಸಿದ್ದ ಸಹಾಯಕ ನಿರ್ದೇಶಕ ಸುಧಾಂಶು ರಂಜನ್, ಕ್ಲರ್ಕ್ ಅಜೀತ್ ಭಾರದ್ವಾಜ್ ಮತ್ತು ಭದ್ರತಾ ಸಿಬ್ಬಂದಿ ದಾರ್ವಾನ್ ಸಿಂಗ್ ಸೇರಿದಂತೆ ಮೂವರು ಸಿಬಿಐ ವಶದಲ್ಲಿರುವುದಾಗಿ ವರದಿ ತಿಳಿಸಿದೆ.
ನಿವೇಶನ ಮಾರಾಟ ವಿಚಾರದಲ್ಲಿ ಖರೀದಿದಾರರನ ಬಳಿ ನಾಲ್ಕು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ನಂತರ ಮಾರಾಟಗಾರನ ಹೆಸರಿಗೆ ನಿವೇಶನ ದಾಖಲು ಮಾಡಿಕೊಡುವುದಾಗಿ ತಿಳಿಸಿದ್ದರು.
ಈ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಖರೀದಿಸಿದ್ದ, ಅಲ್ಲದೇ ಜಾಗವನ್ನು ಬೇರೆಯವರೊಬ್ಬರಿಗೆ ಮಾರಾಟ ಮಾಡಲು ಬಯಸಿದ್ದ. ಆದರೆ ಅದಕ್ಕೆ ಡಿಡಿಎಯಿಂದ ಖಾಸಗಿ ವ್ಯಕ್ತಿಯ ಹೆಸರಿನಲ್ಲಿರುವ ದಾಖಲೆಯ ಅಗತ್ಯವಿತ್ತು. ಇದಕ್ಕಾಗಿ ಡಿಡಿಎ ಅಧಿಕಾರಿಗಳು ನಾಲ್ಕು ಲಕ್ಷ ರೂಪಾಯಿ ಲಂಚ ಕೇಳಿರುವುದಾಗಿ ಖರೀದಿದಾರ ಆರೋಪಿಸಿರುವುದಾಗಿ ಸಿಬಿಐ ವಕ್ತಾರ ಆರ್ ಕೆ ಗೌರ್ ತಿಳಿಸಿದ್ದಾರೆ.
ಹೀಗೆ ಖರೀದಿದಾರನ ದೂರಿನ ಆಧಾರದ ಮೇಲೆ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಅಜೀತ್ ಭಾರದ್ವಾಜ್ ಸಿಬಿಐ ಬಲೆಗೆ ಬಿದ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ