ಹಿರಿಯ ಪತ್ರಕರ್ತ ಉದಯಕುಮಾರ್ ಪೈ ಅಸೌಖ್ಯದಿಂದ ನಿಧನ
Team Udayavani, Aug 16, 2020, 12:07 AM IST
ಉಡುಪಿ: “ಉದಯವಾಣಿ’ಯ ನಿವೃತ್ತ ಉಪ ಸಂಪಾದಕ, ಹಿರಿಯ ಪತ್ರಕರ್ತ, ಮಣಿಪಾಲ ಸಮೀಪದ ತ್ರಿಶಂಕುನಗರದ ನಿವಾಸಿ ಉದಯಕುಮಾರ್ ವಾಮನ ಪೈ (70) ಅವರು ಅಸೌಖ್ಯದಿಂದ ಆ. 14ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉದಯಕುಮಾರ್ ಪೈ ಅವರು ಉ.ಕ. ಜಿಲ್ಲೆ ಕುಮಟ ತಾಲೂಕಿನ ಕೋಡ್ಕಣಿಯವರು. ಹೊಟೇಲ್ ನೌಕರಿಯನ್ನು ಅರಸಿ ಚೆನ್ನೈಗೆ ಹೋದ ಅವರು ಹೊಟೇಲ್ ನೌಕರರನ್ನು ಒಂದುಗೂಡಿಸಿ ಕಥಾಪುಸ್ತಕಗಳನ್ನು ತರಿಸಿ ಓದಿಸುತ್ತಿದ್ದರು, ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅಲ್ಲಿ ಕನ್ನಡ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಆರಂಭಿಕ ಹಂತದಲ್ಲಿ ಚೈನ್ನೈಯಲ್ಲಿ ಯುಎಸ್ಎಸ್ಆರ್ನ ಸೋವಿಯತ್ ಲ್ಯಾಂಡ್ ಪತ್ರಿಕೆಯಲ್ಲಿ ಕಂಪೋಸಿಟರ್ ಆಗಿ ಕೆಲಸ ಮಾಡಿದ್ದರು.
ಚಂದಮಾಮ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಚಿತ್ರದೀಪ, ವಿಜಯಚಿತ್ರದಲ್ಲಿ ಕಾರ್ಯನಿರ್ವಹಿಸಿದರು. ಮಣಿಪಾಲದ ರೂಪತಾರಾ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಕೊನೆಯ ಸುಮಾರು 15 ವರ್ಷಗಳ ಕಾಲ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಉದಯವಾಣಿಯ ಸಿನೆಮಾ ವಿಭಾಗವನ್ನು ನಿರ್ವಹಿಸುತ್ತಿದ್ದ ಅವರು ಸುದೀರ್ಘ ಅವಧಿ ಸಿನೆಮಾ ಚಿತ್ರರಂಗದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದರು. ಕೊನೆಯ ಅವಧಿಯಲ್ಲಿ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು.
ಗೋಮತಿ ಮತ್ತು ಶ್ರೀರಾಮ್ ಎಂಬ ಅಂಕಿತದಲ್ಲಿ ಅಂಕಣ, ಲೇಖನಗಳನ್ನು ಬರೆಯುತ್ತಿದ್ದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಅತ್ಯುತ್ತಮ ಲೇಖನಕ್ಕೆ ಕೊಡಮಾಡುವ ಪ್ರಥಮ ಪ್ರಶಸ್ತಿಗೆ ಪೈಯವರು ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience