ಸೋಂಕಿತರು 87,680ಕ್ಕೆ ಏರಿಕೆ


Team Udayavani, Aug 16, 2020, 12:23 PM IST

ಸೋಂಕಿತರು 87,680ಕ್ಕೆ ಏರಿಕೆ

ಬೆಂಗಳೂರು: ನಗರದಲ್ಲೀಗ ಕೋವಿಡ್ ಸೋಂಕಿತರ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಹೊಸದಾಗಿ 3,495 ಪ್ರಕರಣ ದೃಢಪಟ್ಟಿದ್ದು ಸೋಂಕಿತರ ಒಟ್ಟಾರೆ ಸಂಖ್ಯೆ 87,680ಕ್ಕೆ ಏರಿದೆ. ಹಾಗೆಯೇ 2,034 ಮಂದಿ ವಿವಿಧ ಆಸ್ಪತ್ರೆ ಮತ್ತು ಆರೈಕೆ ಕೇಂದ್ರಗಳಿಂದ ಗುಣಮುಖರಾಗಿ ಮನೆ ಸೇರಿದ್ದು, ಒಟ್ಟಾರೆ ಚೇತರಿಸಿಕೊಂಡು ಬಿಡುಗಡೆಯಾದವರ ಪ್ರಮಾಣ 51,426 ಕ್ಕೆ ಏರಿಕೆಯಾಗಿದೆ.

ನಿನ್ನೆ ಹೊಸದಾಗಿ 35 ಮಂದಿ ಕೋವಿಡ್ ಗೆ ಬಲಿಯಾಗಿದ್ದು ಸಾವಿಗೀಡಾದವರ ಸಂಖ್ಯೆ ಈಗ 1,395ಕ್ಕೆ ಏರಿದೆ. ಕಳೆದ ಹಲವು ದಿನಗಳಿಂದ ಸೋಂಕಿತ ಪ್ರಕರಣ ಹೆಚ್ಚಳವಾಗುವುದರ ಜತೆಗೆ ಸಾವಿನ ಸಂಖ್ಯೆಯೂ ಏರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

10 ದಿನಗಳಲ್ಲಿ 22,809 ಸೋಂಕಿತ ಪ್ರಕರಣ: ಕಳೆದ 10 ದಿನಗಳಲ್ಲಿ ನಗರದಲ್ಲಿ 22,809 ಕೋವಿಡ್‌ ಸೋಂಕಿತ ಪ್ರಕರಣ ಕಂಡುಬಂದಿವೆ. ಆ.10 ರಂದು 1,610 ಪ್ರಕರಣ ದಾಖಲಾಗಿ ಇಳಿಗತಿ ಕಂಡಿತ್ತು. ಆದರೆ, ಆ.11 ರಿಂದೀಚೆಗೆ 2 ಸಾವಿದರ ಮೇಲೆ ಇದ್ದ ಸೋಂಕಿತರ ಸಂಖ್ಯೆ ಇದೀಗ 3,495ಕ್ಕೆ ದಾಪುಗಾಲಿಟ್ಟಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 10 ದಿನಗಳ ಅಂಕಿಅಂಶ ಗಮನಿಸಿದರೆ ನಿನ್ನೆಯ ಸಂಖ್ಯೆ 10 ದಿನಗಳಲ್ಲಿ ದಾಖಲಾದ ಅತಿ ಹೆಚ್ಚಿನ ಸೋಂಕಿತರ ಸಂಖ್ಯೆ ಎನಿಸಿದೆ. ಸೋಂಕಿತರಲ್ಲಿ 53,733 ಪುರುಷರುಮತ್ತು 33,925 ಮಹಿಳೆಯರು ಸೇರಿದ್ದಾರೆ. ಜತೆಗೆ ಗುಣಮುಖರಾಗುವ ಸಂಖ್ಯೆ 2 ಸಾವಿರದ ಮೇಲೆಯೇ ಇದ್ದು ಈವರೆಗೂ ಪುರುಷರು, ಮಹಿಳೆಯರು ಸೇರಿ 51,426 ಜನ ಮನೆ ಸೇರಿದ್ದಾರೆ. ಇದರಲ್ಲಿ 31,061 ಪುರುಷರು, 20,358 ಮಹಿಳೆಯರಿದ್ದಾರೆ. ಕೋವಿಡ್‌ನಿಂದ ಗುಣಮುಖರಾಗುತ್ತಿರುವ ಪ್ರಮಾಣ 58,65 ರಷ್ಟಿದೆ.

ಹಾಗೆಯೇ ನಗರದಲ್ಲಿ ಒಟ್ಟಾರೆ 34,858 ಸಕ್ರಿಯ ಪ್ರಕರಣಗಳಿದ್ದು ಅವರೆಲ್ಲರೂ ವಿವಿಧ ಆಸ್ಪತ್ರೆ, ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,400 ರತ್ತ ಮರಣದ ಸಂಖ್ಯೆ: ನಗರದಲ್ಲೀಗ ಕೋವಿಡ್‌ ಸೋಂಕಿಗೆ ಮೃತಪಡುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ನಿನ್ನೆ 35 ಮಂದಿ ಸಾವಿಗೀಡಾಗಿದ್ದು ಇದರಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಅಸುನೀಗಿದ 37ವರ್ಷದ ಯುವಕ ಮತ್ತು ತೀವ್ರ ಜ್ವರ, ಕಫ ಹಾಗೂ ಉಸಿರಾಟದ ತೊಂದರೆಯಿಂದ ಮರಣವನ್ನಪಿದ 85 ವರ್ಷದ ವೃದ್ಧ ಸೇರಿದ್ದಾರೆ.

ಒಟ್ಟಾರೆ ಕೋವಿಡ್ ದಿಂದ ಸಾವಿಗೀಡಾದವರ ಸಂಖ್ಯೆ ಈಗ 1,395ಕ್ಕೆ ಹೆಚ್ಚಿದೆ. ಇದರಲ್ಲಿ 468 ಮಹಿಳೆಯರು, 928 ಪುರುಷರು ಇದ್ದಾರೆ. ಜತೆಗೆ ಮರಣದ ಪ್ರಮಾಣ ಶೇ.1.59ರಷ್ಟಿದ್ದು 325 ಜನರು ವಿವಿಧ ಆಸ್ಪತ್ರೆಗಳ ತೀವ್ರ ನಿಗಾಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

5,05,416 ಮಂದಿಗೆ ಪರೀಕ್ಷೆ: ನಗರದಲ್ಲೀಗ ಒಟ್ಟು ಪಾಸಿಟಿವ್‌ ಪ್ರಮಾಣ ಶೇ.17.35 ಇದ್ದು, ಆಕ್ಟೀವ್‌ ರೇಟ್‌ ಶೇ.40 ರಷ್ಟಿದೆ. ಅಲ್ಲದೇ, ನಿನ್ನೆ 18,471 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಇದುವರಗೂ 5,05,416 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಹಾಗೆಯೇ ಒಟ್ಟು 34,077 ಕಂಟೈನ್ಮೆಂಟ್‌ ವಲಯವಿದ್ದು ಇದರಲ್ಲಿ 14,518 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ.

ನೀರಿನ ಅಭಾವದ ವಿಡಿಯೋ ಹರಿಬಿಟ್ಟ ಸೋಂಕಿತರು :  ನಗರದ ಹೊರವಲಯದ ನೆಲಮಂಗಲ ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿನ ಕೋವಿಡ್‌ ಕೇಂದ್ರದಲ್ಲಿ ಇದೀಗ ಶುದ್ಧ ನೀರಿಗೂ ತೊಂದರೆ ಎದುರಾಗಿದೆ. ಕಂಟೇನರ್‌ ಕ್ಯಾನ್‌ಗಳಿಂದ ಸೋಂಕಿತರಿಗೆ ನೀರಿನ ವ್ಯವಸ್ಥೆ ಮಾಡಿದ್ದು, ಅವ್ಯವಸ್ಥೆ ಬಗ್ಗೆ ಕೋವಿಡ್ ಸೋಂಕಿತರು ವಿಡಿಯೋ ಮಾಡಿ ನೀರಿನ ಸಮಸ್ಯೆ ಬಗ್ಗೆ ನೋವು ತೋಡಿಕೊಂಡಿದ್ದಾರೆ. ಅಲ್ಲದೇ, ಶುದ್ಧ ನೀರಿನ ಬದಲು ಟ್ಯಾಂಕರ್‌ ನೀರು ಸರಬರಾಜು ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.