ಕೋವಿಡ್ ನಿರ್ಮೂಲನೆಗೆ ಸದೃಢರಾಗಿ
Team Udayavani, Aug 16, 2020, 2:36 PM IST
ಶಿಡ್ಲಘಟ್ಟ: ಕೋವಿಡ್ ಸೋಂಕು ನಿಯಂತ್ರಿಸಲು ದೈಹಿಕ, ಮಾನಸಿಕವಾಗಿ ಸದೃಢರಾಗಬೇಕೆಂದು ಶಾಸಕ ವಿ. ಮುನಿಯಪ್ಪ ಸಲಹೆ ನೀಡಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, ಜನರ ನೆಮ್ಮದಿ ಕೆಡಿಸಿರುವ ಕೋವಿಡ್ ಸೋಂಕಿಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನ ವಿಜ್ಞಾನಿಗಳಿಂದ ಆಗುತ್ತಿದೆ. ಆದರೂ, ಸೋಂಕಿನಿಂದ ಮಾನಸಿಕವಾಗಿ ಆತ್ಮಸ್ಥೈರ್ಯ ಕಳೆದುಕೊಂಡು, ಬೇರೆ ರೀತಿಯ ಕಾಯಿಲೆಗಳಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರದ ನಿರ್ದೇಶನ, ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುವ ಸಲಹೆ ಮತ್ತು ಸೂಚನೆಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ, ಆರೋಗ್ಯವಂತ ಸಮಾಜವವನ್ನು ನಿರ್ಮಿಸಿ ಕೋವಿಡ್ ಮುಕ್ತ ಮಾಡಬೇಕೆಂದು ಮನವಿಮಾಡಿದರು. ತಹಶೀಲ್ದಾರ್ ಕೆ.ಅರುಂಧತಿ ಧ್ವಜರೋಹಣ ನೆರವೇರಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಪಡೆದವರು, ಆರೋಗ್ಯ ಇಲಾಖೆ ಸೇರಿ ಕೋವಿಡ್ ವಾರಿಯರ್ಸ್ಗಳಿಗೆ ಶಾಸಕರು ಸನ್ಮಾನಿಸಿದರು. ಬಿಇಒ ಆರ್.ಶ್ರೀನಿವಾಸ್, ತಾಪಂ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಒ ಬಿ.ಶಿವ ಕುಮಾರ್, ನಗರಸಭಾ ಪೌರಾಯುಕ್ತ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಟಾರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ, ತಾಪಂ ಸದಸ್ಯೆ ಪಂಕಜ ನಿರಂಜನ್, ಸಿಡಿಪಿಒ ನಾಗವೇಣಿ, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು