ಕತ್ತಲ ಹಾದಿಯಲಿ ಕಾಣದ ಗುರಿಯೆಡೆಗೆ


Team Udayavani, Aug 16, 2020, 4:55 PM IST

walking

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಾವೀಗ ಕತ್ತಲ ಮುಳ್ಳುದಾರಿಯಲ್ಲಿ ಕಾಣದ ಗುರಿಯೆಡೆಗೆ ನಡೆಯುತ್ತಿದ್ದೇವೆ.

ಇದು ಬಲು ಕಠಿನವೆನಿಸುತ್ತಿದೆ. ಆದರೆ ಇರುವುದು ಇದೊಂದೇ ದಾರಿ.

ಇಲ್ಲಿ ನಾವೆಷ್ಟೇ ಅಲ್ಲ ಅದೆಷ್ಟೋ ಸಂಖ್ಯೆಯ ಸಹಪಯಣಿಗರೂ ಇದ್ದಾರೆ.

ಎಲ್ಲರೂ ಕತ್ತಲ ದಾರಿಯಲ್ಲಿ ಏದುಸಿರು ಬಿಡುತ್ತಾ ಸಾಗುತ್ತಿದ್ದಾರೆ.

ಕಾಲಚಕ್ರ ಮಗ್ಗುಲು ಬದಲಿಸಿದೆ. ಸಾಂಕ್ರಾಮಿಕ ರೋಗ, ಪ್ರವಾಹ, ಜತೆಗೇ ಬಂದ ಮತ್ತಷ್ಟು ಸಮಸ್ಯೆಗಳ ಬಲಾಡ್ಯ ಶಕ್ತಿಯನ್ನು ಎದುರಿಸಲಾಗದೆ ನಾವು ಪರಿತಪಿಸುತ್ತಿದ್ದೇವೆ.

ಮಕ್ಕಳು- ಹಿರಿಯರು, ಬಡವ-ಬಲ್ಲಿದ ಎಂಬ ಯಾವ ಭೇದವೂ ಇಲ್ಲದೆ ಎಲ್ಲರೂ ಇಲ್ಲಿ ಸಮಪಾತ್ರರು. ನಡೆದ, ನಡೆಯುತ್ತಿರುವ ಈ ಅಸಾಧ್ಯ ಆಕ್ರಮಣ ನಮ್ಮ ಜೀವನದ ಮೇಲೆ ಮಾತ್ರವಲ್ಲ, ಯೋಚನೆಯ ಮೇಲೆ ಗಾಢ ಪರಿಣಾಮ ಬೀರುತ್ತಿವೆ. ಭರವಸೆಯ ಬಗೆಗೊಂದು ಹೊಸ ಪ್ರಶ್ನೆ ಮೂಡುವಂತೆ ಮಾಡಿದೆ.

ನೆನಪಿರಲಿ, ಬದಲಾವಣೆ ಎಂಬುದು ಲೋಕನಿಯಮ. ಇದು ಸಿಹಿ-ಕಹಿಯ ಸಂಗಮ. ನಮಗೀಗ ಕಹಿ ಘಳಿಗೆ ಎದುರಾಗಿದೆ. ಆದರೆ ಇದೇನೂ ಹೊಸತಲ್ಲ. ಕಾಲಚಕ್ರಕ್ಕೆ ಹೆದರಿದರೆ ನಾವು ಬದುಕಲ್ಲಿ ಸೋತಂತೆ. ಈ ಕ್ಷಣ ಸೋತರೆ, ಭರವಸೆ ಕಳೆದುಕೊಂಡರೆ ಅದು ಸತ್ತಂತೆ. ಸುರಾಸುರರೆನ್ನದೆ ವಿಶಾಲ ಕ್ಷೀರಸಾಗರವೆಂಬ ಬದುಕಿನಲ್ಲಿ ಮಂಥನ ನಡೆಸೋಣ. ಮೊದಲು ವಿಷವೇ ದಕ್ಕಿದರೂ ಕುಗ್ಗದೆ ಅಮೃತ ಬಂದೀತೆಂಬ ಅಚಲ ಭರವಸೆಯೊಂದಿಗೆ ಇಲ್ಲಿ ತನ್ನನ್ನು ತಾನು ನಂಬಿದವನಷ್ಟೇ ಬಾಳಿಯಾನು.

ಇಲ್ಲಿ ಯಾರ ಸಹಾಯದ ನಿರೀಕ್ಷೆಯೂ ಬೇಡ. ಯಾರನ್ನೂ ಕಾಯುವ ಪ್ರಮೇಯವಿಲ್ಲ. ಜಗ ನಿಯಮದನುಸಾರ ಹೊಸ ರೀತಿಯಲ್ಲಿ ಬದುಕಲು ಕಲಿಯಬೇಕಷ್ಟೇ.

ಆಧುನಿಕ ಜಗತ್ತಿನ ಹೊಸ ವೇಷದಲ್ಲಿ ನಾವೂ ಪಾತ್ರಧಾರಿಗಳಾಗುವುದು ಇಲ್ಲಿ ಆಯ್ಕೆಯಲ್ಲ; ಅನಿವಾರ್ಯ. ಕಷ್ಟದ ಹಾದಿಯಲ್ಲಿ ಮುಳ್ಳು ಚುಚ್ಚಿದರೂ, ಸೋತೇನೆಂಬ ಭಯ ಕಾಡಿದರೂ ತಾಳ್ಮೆಯಿರಲಿ. ನಮ್ಮ ಮೇಲೆ ಪ್ರೀತಿಯಿಟ್ಟಿರುವವರ ಮೇಲೆ ಪ್ರೀತಿ, ನಂಬಿಕೆಯಿರಲಿ. ನಮ್ಮ ಜವಾಬ್ದಾರಿಗಳ ಬಗೆಗೆ ಬದ್ಧತೆಯಿರಲಿ.

ಒಮ್ಮೆಯಷ್ಟೇ ದೊರೆಯುವ ಈ ಜೀವನ ಎಷ್ಟೊಂದು ಅದ್ಭುತ. ಇದು ಬಯಸದೇ ಎಲ್ಲವನ್ನೂ ಕೊಡುತ್ತದೆ. ಅತಿಯಾಸೆ, ಅದರಿಂದ ಮೂಡುವ ಕೊರಗನ್ನು ತೊರೆದು ಜೀವನವನ್ನು ಪ್ರೀತಿಸೋಣ. ನಮ್ಮನ್ನು ನಾವು ಪ್ರೀತಿಸೋಣ. ಕಠಿನ ಪರಿಸ್ಥಿತಿಯಲ್ಲಿ ಕುಗ್ಗದೆ, ಮುಂದೆ ನಡೆಯಬಲ್ಲ ನಮ್ಮ ಸಾಮರ್ಥ್ಯದ ಅರಿವಿರಲಿ. ಒಮ್ಮೆಯಷ್ಟೇ ಬರುವ ಈ ಜೀವನದ ಕಡೆಗೆ ಎಂದೂ ಮಸುಕಾಗದ ಭರವಸೆಯಿರಲಿ. ಮನುಷ್ಯರಾಗಿ ಎಲ್ಲ ಪ್ರೀತಿ ವಿಶ್ವಾಸಗಳನ್ನು ಮರೆತು, ನಮ್ಮವರನ್ನು ತೊರೆದು, ಕೊರಗಿ ಅಲ್ಪರಾಗಿ ಸಾಯದಿರೋಣ.

ಈ ಕಷ್ಟದ ಹಾದಿಯಲ್ಲಿ ಗುರಿಯೆಡೆಗೆ ಮಾತ್ರ ಗಮನಹರಿಸದೆ, ಸವೆಸಿದ ಹಾದಿ ಕಲಿಸಿದ ಪಾಠ ಮರೆಯದಿರಲಿ. ನಮ್ಮ ದುರಾಸೆಗೆ ಪ್ರತಿಯಾಗಿ ಪ್ರಕೃತಿ ತೋರಿದ ಮುನಿಸು ಮುಂದೆಂದಿಗೂ ನೆನಪಿರಲಿ. ಈ ಭುವಿಗೆ ನಾವೆಲ್ಲ ಒಡೆಯರು. ನಮ್ಮಷ್ಟೇ ಹಕ್ಕು ಹೊಂದಿರುವ ಸಕಲ ಜೀವಿಗಳ ಬಗ್ಗೆಯೂ ಕರುಣೆಯಿರಲಿ. ಬಡವ, ಶ್ರೀಮಂತ ಎಂಬ ಬಿಮ್ಮು ಬಿಟ್ಟು, ಜಾತಿ- ಧರ್ಮಗಳ ಹಂಗನ್ನು ತೊರೆದು ನಿಜವಾದ ಅರ್ಥದಲ್ಲಿ ಮನುಷ್ಯರಾಗೋಣ. ಎಲ್ಲ ಲೌಕಿಕ ಬಂಧನಗಳಿಂದ ಪ್ರೇರಿತ ಯೋಚನೆಗಳಾದ ಅಹಂಕಾರ, ಬಿಗುಮಾನ, ಸಿಟ್ಟು ಸೆಡರುಗಳನ್ನು ಬದಿಗಿಟ್ಟು ನಿಜಾರ್ಥದಲ್ಲಿ ಸ್ವತಂತ್ರರಾಗಿ.

ಸಿರಿತನ, ಆಡಂಬರಗಳಿಂದ ಮುಕ್ತವಾಗಿ ದೀನರಾಗಿ ಸಾಗೋಣ ಕಾಣದ ಗುರಿಯೆಡೆಗೆ. ನೆನಪಿರಲಿ, ನಮ್ಮ ದೇಹವೆಂಬ ಗುಡಿಯೊಳಗೆ ಭರವಸೆಯೇ ನಂದಾದೀಪವಾಗಿರಲಿ.

ಗುರುಪ್ರಸಾದ್‌ ಟಿ. ಎನ್‌., ಉಪನ್ಯಾಸಕ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.