ಕೋವಿಡ್‌ಗೆ ಬಲಿಯಾದ ಮಾಜಿ ಆರಂಭಕಾರ ಚೇತನ್ ಚೌಹಾಣ್‌

ಸುನೀಲ್‌ ಗಾವಸ್ಕರ್‌ ಅವರ ಜತೆಗಾರ ; ಯುಪಿ ಸರಕಾರದ ಸಚಿವ ; ಮಾಜಿ ಲೋಕಸಭಾ ಸದಸ್ಯ

Team Udayavani, Aug 16, 2020, 6:15 PM IST

Chetan-Chauhan

ಗುರ್ಗಾಂವ್: ಮಾಜಿ ಕ್ರಿಕೆಟ್ ಆಟಗಾರ ಚೇತನ್ ಚೌಹಾಣ್ ಅವರು ಇಂದು ನಿಧನ ಹೊಂದಿದ್ದಾರೆ.

ಕಿಡ್ನಿ ಹಾಗೂ ರಕ್ತದೊತ್ತಡ ಸಮಸ್ಯೆಗಳ ಕಾರಣದಿಂದ ಚೌಹಾಣ್ ಅವರನ್ನು ಗುರುಗ್ರಾಮದಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರು ಇಂದು ಸಂಜೆ ಹೃದಯಾಘಾತದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ. ಪತ್ನಿ, ಮೆಲ್ಬರ್ನ್ ನಲ್ಲಿರುವ ಪುತ್ರ ವಿನಾಯಕ್‌ ಚೌಹಾಣ್‌ ಹಾಗೂ ಅಪಾರ ಕ್ರಿಕೆಟ್‌ ಅಭಿಮಾನಿಗಳನ್ನು ಚೌಹಾಣ್‌ ಅಗಲಿದ್ದಾರೆ.

ಎರಡು ಬಾರಿಯ ಲೋಕಸಭಾ ಸದಸ್ಯರಾಗಿದ್ದ ಚೇತನ್‌ ಚೌಹಾಣ್‌, ಪ್ರಸ್ತುತ ಉತ್ತರಪ್ರದೇಶ ಸರಕಾರದ ಸೈನಿಕ ಕಲ್ಯಾಣ, ಗೃಹರಕ್ಷಕ ದಳ, ಸಾರ್ವಜನಿಕ ಸಂಪರ್ಕ ಖಾತೆ ಮತ್ತು ನಾಗರಿಕ ರಕ್ಷಣಾ ಸಚಿವರಾಗಿದ್ದರು. ಕಳೆದ ವರ್ಷದ ತನಕ ರಾಜ್ಯದ ಕ್ರೀಡಾ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದರು.

ಚೌಹಾಣ್ ಅವರಲ್ಲಿ ಜುಲೈ ತಿಂಗಳಿನಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿತ್ತು ಮತ್ತು ಅವರು ಅದರಿಂದ ಸಂಪೂರ್ಣವಾಗಿ ಗುಣಮುಖರಾಗಿರಲಿಲ್ಲ. ಬಳಿಕ ಈ ಸೋಂಕು ಚೌಹಾಣ್ ಅವರ ಕಿಡ್ನಿಗೆ ಘಾಸಿಯುಂಟುಮಾಡಿತ್ತು ಮಾತ್ರವಲ್ಲದೇ ಅಧಿಕ ರಕ್ತದೊತ್ತಡ ಸಮಸ್ಯೆಯನ್ನೂ ಉಲ್ಭಣಿಸುವಂತೆ ಮಾಡಿತ್ತು.

ಕೋವಿಡ್ 19 ಸೋಂಕು ಕಾಣಿಸಿಕೊಂಡ ತಕ್ಷಣ ಚೇತನ್ ಚೌಹಾಣ್ ಅವರು ಲಕ್ನೋದಲ್ಲಿರುವ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರನ್ನು ಶುಕ್ರವಾರ ರಾತ್ರಿ ಗುರುಗ್ರಾಮದಲ್ಲಿರುವ ಮೆದಾಂತ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು.

ಇಲ್ಲಿ ಅವರ ದೇಹ ಸ್ಥಿತಿ ಇನ್ನಷ್ಟು ಹದಗೆಟ್ಟ ಕಾರಣದಿಂದ ವೈದ್ಯರು ಚೌಹಾಣ್ ಅವರನ್ನು ಜೀವರಕ್ಷಕ ಸಾಧನಗಳ ನಿಗಾದಲ್ಲಿ ಇರಿಸಿದ್ದರು. ಆದರೆ ಚೌಹಾಣ್ ಅವರು ಇಂದು ಸಂಜೆ ತೀವ್ರ ಸ್ವರೂಪದ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎಂದು ಅವರ ಸಹೋದರ ಪುಷ್ಪೇಂದ್ರ ಚೌಹಾಣ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚೌಹಾಣ್-ಗವಾಸ್ಕರ್ ಯಶಸ್ವಿ ಆರಂಭಿಕ ಜೋಡಿ
1969-1978ರ ಅವಧಿಯಲ್ಲಿ 40 ಟೆಸ್ಟ್‌ ಪಂದ್ಯಗಳನ್ನಾಡಿದ್ದ ಚೇತನ್‌ ಚೌಹಾಣ್‌ ದಾಖಲೆಗಳ ವೀರ ಸುನೀಲ್‌ ಗಾವಸ್ಕರ್‌ ಅವರ ಸುದೀರ್ಘಾವಧಿಯ ಜತೆಗಾರನಾಗಿದ್ದರು. 31.57ರ ಸರಾಸರಿಯಲ್ಲಿ 2,084 ರನ್‌ ಗಳಿಸಿದ್ದಾರೆ. ಒಂದೆಡೆ ಗಾವಸ್ಕರ್‌ ಶತಕದ ಮೇಲೆ ಶತಕವನ್ನು ಪೇರಿಸುತ್ತ ಹೋದರೂ ಚೌಹಾಣ್‌ ಅವರ ಟೆಸ್ಟ್‌ ಶತಕದ ಕನಸು ಮಾತ್ರ ಈಡೇರಲಿಲ್ಲ. 97 ರನ್‌ ಸರ್ವಾಧಿಕ ಗಳಿಕೆಯಾಗಿದೆ.

70ರ ದಶಕದಲ್ಲಿ ಸುನೀಲ್‌ ಗಾವಸ್ಕರ್‌-ಚೇತನ್‌ ಚೌಹಾಣ್‌ ಭಾರತದ ಯಶಸ್ವಿ ಆರಂಭಿಕ ಜೋಡಿಯಾಗಿತ್ತು. ಗಾವಸ್ಕರ್‌ ಯಶಸ್ಸಿನಲ್ಲಿ ಚೌಹಾಣ್‌ ಅವರ ಪಾತ್ರವನ್ನು ಮರೆಯುವಂತಿರಲಿಲ್ಲ. ಮೊದಲ ವಿಕೆಟಿಗೆ ಮೂರು ಸಾವಿರಕ್ಕೂ ಅಧಿಕ ರನ್‌ ಪೇರಿಸಿದ ಹೆಗ್ಗಳಿಕೆ ಈ ಜೋಡಿಯದ್ದಾಗಿತ್ತು. ಇದರಲ್ಲಿ 10 ಶತಕದ ಜತೆಯಾಟಗಳು ಸೇರಿವೆ. 7 ಏಕದಿನ ಪಂದ್ಯಗಳನ್ನೂ ಆಡಿರುವ ಚೌಹಾಣ್‌, 153 ರನ್‌ ಗಳಿಸಿದ್ದಾರೆ.

ಅಂದಿನ ಕಾಲದ ಘಾತಕ ವೇಗಿಗಳಾಗಿದ್ದ ಡೆನ್ನಿಸ್‌ ಲಿಲ್ಲಿ, ಜೆಫ್ ಥಾಮ್ಸನ್‌, ರಾಡ್ನಿ ಹಾಗ್‌, ಲೆನ್‌ ಪಾಸ್ಕೊ, ಬಾಬ್‌ ವಿಲ್ಲೀಸ್‌ ಅವರ ಎಸೆತಗಳನ್ನು ಲೀಲಾಜಾಲವಾಗಿ ಎದುರಿಸುತ್ತಿದ್ದ ಚೌಹಾಣ್‌, ಭಾರತ ತಂಡದ ಗಟ್ಟಿಮುಟ್ಟಾದ ಅಡಿಪಾಯಕ್ಕೆ ಮಹತ್ವದ ಕಾಣಿಕೆ ಸಲ್ಲಿಸಿದ್ದನ್ನು ಮರೆಯುವಂತಿಲ್ಲ.

ಮಹಾರಾಷ್ಟ್ರ ಮತ್ತು ದಿಲ್ಲಿ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ ಚೇತನ್‌ ಚೌಹಾಣ್‌ ಡಿಡಿಸಿಎ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದರು. ಆಸ್ಟ್ರೇಲಿಯ ಪ್ರವಾಸದ ವೇಳೆ ಭಾರತ ತಂಡದ ಮ್ಯಾನೇಜರ್‌ ಕೂಡ ಆಗಿದ್ದರು. 1981ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು.

ಕ್ರಿಕೆಟಿಗರ ಶೋಕ

ಚೇತನ್‌ ಚೌಹಾಣ್‌ ನಿಧನಕ್ಕೆ ಭಾರತದ ಕ್ರಿಕೆಟ್‌ ವಲಯ ಗಾಢ ಶೋಕ ವ್ಯಕ್ತಪಡಿಸಿದೆ. ಅವರ ಕುಟುಂಬಕ್ಕೆ ಅಗಲಿಕೆಯ ಶಕ್ತಿ ನೀಡಲಿ ಎಂದು ಅನಿಲ್‌ ಕುಂಬ್ಳೆ, ವೀರೇಂದ್ರ ಸೆಹವಾಗ್‌, ಗೌತಮ್‌ ಗಂಭೀರ್‌ ಪ್ರಾರ್ಥಿಸಿದ್ದಾರೆ.
ಚೇತನ್ ಚೌಹಾಣ್ ಅವರು ತಮ್ಮ 12 ವರ್ಷಗಳ ಕ್ರಿಕೆಟ್ ಜೀವನದಲ್ಲಿ 40 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 2084 ರನ್ ಗಳನ್ನು ಕಲೆ ಹಾಕಿದ್ದಾರೆ ಇದರಲ್ಲಿ 16 ಅರ್ಧ ಶತಕಗಳು ಸೇರಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.