ತುಂಬಿ ಹರಿಯುತ್ತಿರುವ ನದಿಗೆ ಮೂವರು ಪುತ್ರರನ್ನು ಎಸೆದ ಅಪ್ಪ, ಬಳಿಕ ತಾನೂ ಹಾರಿದ !
Team Udayavani, Aug 16, 2020, 7:37 PM IST
ಸಾಂಧರ್ಭಿಕ ಚಿತ್ರ ಬಳಸಲಾಗಿದೆ
ರಾಯಗಢ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಮೂವರು ಗಂಡು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ ಘಟನೆ ಚತ್ತಿಸ್ ಗಢದ ರಾಯಗಢದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಮಾಂಡ್ ನದಿಯ ಸೇತುವೆಯಿಂದ ತನ್ನ ಮೂವರು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಅದಾಗ್ಯೂ ಭಾರೀ ಮಳೆ ಇರುವ ಕಾರಣದಿಂದ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ.
ನದಿಗೆ ಹಾರಿದಾತನನ್ನು ಕಾರ್ತಿಕೇಶ್ವರ ರತಿಯಾ ಎಂದು ಗುರುತಿಸಲಾಗಿದ್ದು ಎಡು ಗ್ರಾಮದವನಾಗಿದ್ದಾನೆ. ಈತ ತನ್ನ ಪುತ್ರರಾದ ಖೀರ್ಸಾಗರ್ (5), ನರ್ಮದಾ (3) ಮತ್ತು ಎಂಟು ತಿಂಗಳ ತೇಜ್ ಪ್ರಕಾಶ್ ಅವರೊಂದಿಗೆ ಬೈಕ್ ನಲ್ಲಿ ಬರ್ರಾ ಗ್ರಾಮಕ್ಕೆ ತೆರಳಿದ್ದಾನೆ. ಆದರೇ ಮಾಂಡ್ ನದಿ ಸಮೀಪಿಸುತ್ತಿದ್ದಂತೆ ಬೈಕ್ ನಿಲ್ಲಿಸಿ ಮೂವರು ಮಕ್ಕಳನ್ನು ನದಿಗೆಸೆದು ಬಳಿಕ ತಾನೂ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಮುಳುಗು ತಜ್ಞರು ಕಾರ್ಯಚರಣೆ ನಡೆಸುತ್ತಿದ್ದು ಇಲ್ಲಿಯವರೆಗೂ ಯಾರು ಕೂಡ ಪತ್ತೆಯಾಗಿಲ್ಲ ಎಂದು ಎನ್ ಡಿ ಟಿವಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!