ಜಮ್ಮು-ಕಾಶ್ಮೀರ: ಸೇತುವೆ ಸ್ಫೋಟಗೊಳಿಸುವ ಉಗ್ರರ ಸಂಚು ವಿಫಲ, ತಪ್ಪಿದ ಭಾರೀ ಅನಾಹುತ
Team Udayavani, Aug 17, 2020, 8:29 AM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆ ಸಮೀಪದ ಟುಜಾನ್ ಗ್ರಾಮದಲ್ಲಿ ಭದ್ರತಾ ಪಡೆ ಐಇಡಿಯನ್ನು(ಸುಧಾರಿತ ಸ್ಫೋಟಕ ಸಾಧನ) ಪತ್ತೆ ಹಚ್ಚುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದಂತಾಗಿದೆ ಎಂದು ವರದಿ ತಿಳಿಸಿದೆ.
ಐಜಿಪಿ ಕಾಶ್ಮೀರ್ ವಿಜಯ್ ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಟುಜಾನ್ ಗ್ರಾಮದ ಸೇತುವೆಯನ್ನು ಸ್ಫೋಟಿಸಲು ಸಂಚು ಹೂಡಿ ಉಗ್ರರು ಐಇಡಿಯನ್ನು ಅಡಗಿಸಿಟ್ಟಿದ್ದರು. ಈ ಸೇತುವೆ ಟುಜಾನ್ ಮತ್ತು ದಾಲ್ವಾನ್ ಅನ್ನು ಸಂಪರ್ಕಿಸುತ್ತದೆ ಎಂದು ತಿಳಿಸಿದ್ದಾರೆ.
ಭದ್ರತಾಪಡೆಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ಜಿಲ್ಲೆಯ ಬಡ್ಗಾಮ್ ಅನ್ನು ಸಂಪರ್ಕಿಸುವ ಈ ರಸ್ತೆಯನ್ನು ಭದ್ರತಾ ಪಡೆಗಳು ಒಂದು ಪ್ರದೇಶದಿಂದ ಮತ್ತೊಂದು ಸ್ಥಳಕ್ಕೆ ತೆರಳಲು ಉಪಯೋಗಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಉಗ್ರರು ಸೇತುವೆ ಕೆಳಭಾಗದಲ್ಲಿ ಐಇಡಿಯನ್ನು ಅಡಗಿಸಿಟ್ಟು ಸ್ಫೋಟಿಸುವ ಸಂಚು ರೂಪಿಸಿದ್ದು, ಇದನ್ನು ಭದ್ರತಾಪಡೆ ವಿಫಲಗೊಳಿಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ