ವಿಶ್ವಕಪ್‌ ಗೆದ್ದ ಬಳಿಕ ಧೋನಿಯನ್ನು ನಾಯಕತ್ವದಿಂದ ಇಳಿಸಲು ನಿರ್ಧರಿಸಿದ್ದ ಬಿಸಿಸಿಐ


Team Udayavani, Aug 17, 2020, 5:24 PM IST

Dhoni-Srinivasan

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ವಿಶ್ವಕಪ್‌ ಗೆದ್ದ ಬಳಿಕ ಎಂ.ಎಸ್‌. ಧೋನಿ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಲು ಬಿಸಿಸಿಐ ಮುಂದಾಗಿತ್ತು ಎಂಬ ಮಾಹಿತಿ ಬಿಸಿಸಿಐನ ಮಾಜಿ ಅಧ್ಯಕ್ಷರಿಂದಲೇ ಬಹಿರಂಗೊಂಡಿದೆ.

2011ರ ವಿಶ್ವಕಪ್‌ ಬಳಿಕ ಮಹೇಂದ್ರ ಸಿಂಗ್‌ ಧೋನಿ ಟೀಮ್‌ ಇಂಡಿಯಾದ ನಾಯಕನಾಗಲು ಆಯ್ಕೆ ಸಮಿತಿ ಬಯಸುತ್ತಿರಲಿಲ್ಲ.

ಆದರೆ ನಾನು ಅವರ ನಾಯಕತ್ವವನ್ನು ಉಳಿಸಲು ಮಂಡಳಿಯ ಅಧ್ಯಕ್ಷನಾಗಿ ನನ್ನ ಅಧಿಕಾರವನ್ನು ಬಳಸಿಕೊಂಡೆ ಎಂದು ಭಾರತದ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನ ಮಾಜಿ ಅಧ್ಯಕ್ಷ ಎನ್‌. ಶ್ರೀನಿವಾಸನ್‌ ಬಹಿರಂಗಪಡಿಸಿದ್ದಾರೆ.

2011ರಲ್ಲಿ ಧೋನಿ ನಾಯಕತ್ವದಲ್ಲಿ 28 ವರ್ಷಗಳ ಅನಂತರ ಟೀಮ್‌ ಇಂಡಿಯಾ ಎರಡನೆ ಬಾರಿ ಏಕದಿನ ವಿಶ್ವಕಪ್‌ ಗೆದ್ದಿತ್ತು. ಆದರೆ ವಿಶ್ವ ಚಾಂಪಿಯನ್‌ ಆಗಿದ್ದ ಭಾರತ ತಂಡವು 2011-12ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿತ್ತು. ಅಲ್ಲಿ ಟೆಸ್ಟ್‌ ಸರಣಿಯನ್ನು 0-4ರಿಂದ ಕಳೆದುಕೊಂಡಿತು. ಇದರಿಂದ ಅಸಮಧಾನಗೊಂಡ ಬಿಸಿಸಿಐ ಸ್ವಲ್ಪ ಸಮಯದ ಬಳಿಕ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿತ್ತು ಎಂದಿದ್ದಾರೆ.

ಆಗಿನ ಬಿಸಿಸಿಐ ಕಾರ್ಯದರ್ಶಿ ಸಂಜಯ್‌ ಜಗ್ಡೇಲ್‌ ಅವರು “ಸರ್‌ ಧೋನಿ ಅವರನ್ನು ಭಾರತೀಯ ಕ್ರಿಕೆಟ್‌ ತಂಡಕ್ಕೆ ನಾಯಕನನ್ನಾಗಿ ಮಾಡಲು ಆಯ್ಕೆ ಸಮಿತಿ ಸದಸ್ಯರು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದರು. ಬಳಿಕ ನಾನು ನೇರವಾಗಿ ಸಭೆಗೆ ಹೋಗಿ ಮಂಡಳಿಯ ಅಧ್ಯಕ್ಷನಾಗಿ ನನ್ನ ಹಕ್ಕುಗಳನ್ನು ಚಲಾಯಿಸಿ, ಧೋನಿ ತಂಡದ ನಾಯಕನಾಗಿರುತ್ತೇನೆ ಎಂದು ಹೇಳಿ ಸಭೆಯಿಂದ ನಿರ್ಗಮಿಸಿದ್ದೆ ಎಂದು ಶ್ರೀನಿವಾಸನ್‌ ನೆನಪಿಸಿಕೊಂಡಿದ್ದಾರೆ.

ಧೋನಿ ಅವರನ್ನು ತೆಗೆದುಹಾಕಲು ಕಾರಣ?
28 ವರ್ಷಗಳ ಬಳಿಕ ಭಾರತ ವಿಶ್ವಕಪ್‌ ಗೆದ್ದಿತ್ತು. ಆದರೆ ಬಳಿಕ ನಾವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್‌ ಸರಣಿಯನ್ನು ಕಳೆದುಕೊಂಡೆವು. ಆದ್ದರಿಂದ ಆಯ್ಕೆ ಸಮಿತಿ ಸಭೆಯಲ್ಲಿ ಧೋನಿ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಲು ಒತ್ತಾಯಗಳು ಕೇಳಿಬಂದಿದ್ದವು. ಆದರೆ ನಾನು ಅದಕ್ಕೆ ಸೊಪ್ಪು ಹಾಕಿಲ್ಲ. ನೀವು ಅವರನ್ನು ಏಕದಿನ ತಂಡದ ನಾಯಕತ್ವದಿಂದ ಹೇಗೆ ತೆಗೆದು ಹಾಕುತ್ತೀರಿ? ಎಂದು ಪ್ರಶ್ನಿಸಿದ್ದೆ ಎಂದರು. ಧೋನಿಯನ್ನು ನಾಯಕತ್ವ ಸ್ಥಾನದಿಂದ ತೆಗೆದುಹಾಕಲು ಅವರಲ್ಲಿ ಬಲವಾದ ಕಾರಣಗಳು ಇರಲಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ಧೋನಿ ಅವರ ಬದಲಿ ಯಾರು ಎಂಬುದಕ್ಕೆ ಆಯ್ಕೆದಾರರು ಯೋಚಿಸಿರಲಿಲ್ಲ ಎಂದರು.

ಬಿಸಿಸಿಐನ ಹಳೆಯ ಸಂವಿಧಾನದ ಪ್ರಕಾರ, ತಂಡವನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯು ಮಂಡಳಿಯ ಅಧ್ಯಕ್ಷರ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಲೋಧಿ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಬಳಿಕ ಆಯ್ಕೆ ಪ್ರಕರಣದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ಮುಖ್ಯ ಆಯ್ಕೆಗಾರನಿಗೆ ನೀಡಲಾಗಿತ್ತು.

ಇದೀಗ ಶ್ರೀನಿವಾಸನ್‌ ಅವರ ಈ ಹೇಳಿಕೆಯು ಧೋನಿ ಅವರನ್ನು 2011ರಲ್ಲಿ ಏಕದಿನ ತಂಡದ ನಾಯಕತ್ವದಿಂದ ತೆಗೆದುಹಾಕುವ ಯೋಚನೆಯಲ್ಲಿ ಬಿಸಿಸಿಐ ಹೊಂದಿತ್ತು ಎಂಬ ಊಹಾಪೋಹಗಳನ್ನು ಖಚಿತಪಡಿಸುತ್ತದೆ. ಬಿಸಿಸಿಐ ಅಧ್ಯಕ್ಷರಾಗಿ ಮತ್ತು ಐಪಿಎಲ್‌ ಚೆನ್ನೆç ಸೂಪರ್‌ ಕಿಂಗ್ಸ್‌ ಮಾಲಕರಾಗಿದ್ದ ಶ್ರೀನಿವಾಸನ್‌ ಅವರು ಮಧ್ಯಪ್ರವೇಶಿಸಿ ಧೋನಿ ನಾಯಕತ್ವವನ್ನು ಉಳಿಸಿದ್ದನ್ನು ಇದು ಖಚಿತಪಡಿಸುತ್ತದೆ.

ಬಳಿಕದ ಬೆಳವಣಿಗೆಯಲ್ಲಿ ಮೊಹಿಂದರ್‌ ಅಮರನಾಥ್‌ ಅವರನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕಲಾಗಿತ್ತು. ಯಾಕೆಂದರೆ ಅವರು ಶ್ರೀಕಾಂತ್‌ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ತೆರೆಮರೆಯಲ್ಲಿ ಕೆಲಸಮಾಡುತ್ತಿದ್ದರು. ಆ ಸಮಯದಲ್ಲಿ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಬೇಕೆಂದು ಪ್ರತಿಪಾದಿಸುವವರ ಸಾಲಿನಲ್ಲಿ ಅಮರನಾಥ್‌ ಮುಂಚೂಣಿಯಲ್ಲಿದ್ದರು.

 

 

 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.