ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಸಚಿವ ಸುರೇಶ್ಕುಮಾರ್ ನಿವಾಸದ ಮುಂದೆ ಬಿಸಿಯೂಟ ನೌಕರರ ಧರಣಿ
Team Udayavani, Aug 18, 2020, 11:45 AM IST
ಬೆಂಗಳೂರು: ಬಿಸಿಯೂಟದ ನೌಕರರ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯಸಮಿತಿಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಸಚಿವ ಸುರೇಶ್ಕುಮಾರ್ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷೆ ಎಸ್. ವರಲಕ್ಷ್ಮೀ, ರಾಜ್ಯದಲ್ಲಿ ಸುಮಾರು 1.17 ಲಕ್ಷ ಬಿಸಿಯೂಟದ ನೌಕರರಿದ್ದಾರೆ. ಅವರಿಗೆಲ್ಲ ಏಪ್ರಿಲ್ ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ ಬಿಸಿ ಯೂಟ ನೌಕರರು ಕಷ್ಟದಲ್ಲಿ ಬದುಕು ಕಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಮಾರು 1.20 ಕೋಟಿ ರೂ.ಅನ್ನು ಸರ್ಕಾರ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಇದುವರೆಗೂ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಸ್ಪಂದಿಸುತ್ತಿಲ್ಲ ಎಂದು ದೂರಿದರು. ವೇತನ ಪಾವತಿ ಮಾಡದೇ ಇದ್ದರೆ ಸಂಘದ ವತಿಯಿಂದ ರಾಜ್ಯದ ಎಲ್ಲ ತಾಪಂ ಹಾಗೂ ಜಿಪಂ ಎದುರು ಸರಣಿ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗದು ಎಂದು ಎಚ್ಚರಿಸಿದರು.
ಸಂಘದ ಅಧ್ಯಕ್ಷೆ ಲಕ್ಷ್ಮಿದೇವಿ ಮಾತನಾಡಿ, ಬಿಸಿಯೂಟದ ನೌಕರರಿಗೆ ಕನಿಷ್ಠ ಆರು ತಿಂಗಳ ವರೆಗೆ ಪಡಿತರ ಒದಗಿಸಬೇಕು. ಲಾಕ್ ಡೌನ್ ಅವಧಿಯಲ್ಲಿ 7,500 ರೂ.ನಂತೆ ಮುಂದಿನ 6 ತಿಂಗಳು ಗೌರವಧನ ಪಾವತಿಸ ಬೇಕು. ಕೋವಿಡ್ ಭಾಗವಾಗಿ ಕ್ವಾರಂಟೈನ್ನಲ್ಲಿ ಇದ್ದವರಿಗೆ ಅಡುಗೆ ಮಾಡುತ್ತಿದ್ದ ನೌಕರರ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು. ಬಿಸಿಯೂಟದ ನೌಕರರಿಗೆ ಯಾವುದೇ ರೀತಿಯ ಸವಲತ್ತುಗಳು ಇಲ್ಲ. ಸರ್ಕಾರ ಎಲ್ಐಸಿ ಆಧಾರಿತ ಪೆನ್ಷನ್ ಜಾರಿಗೆ ತರಬೇಕು. ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ