ಬಾರೋ ಸಾಧಕರ ಕೇರಿಗೆ : ಕೋಟು, ಚಪ್ಪಲಿಯನ್ನು ಹುಡುಕಿಕೊಂಡು ಹೋಗಿದೆ…


Team Udayavani, Aug 18, 2020, 8:47 PM IST

ಬಾರೋ ಸಾಧಕರ ಕೇರಿಗೆ : ಕೋಟು, ಚಪ್ಪಲಿಯನ್ನು ಹುಡುಕಿಕೊಂಡು ಹೋಗಿದೆ…

ಇಪ್ಪತ್ತನೇ ಶತಮಾನದ ಮಹತ್ವದ ಭಾರತೀಯರಲ್ಲಿ ಖ್ಯಾತ ಶಿಕ್ಷಣತಜ್ಞ ಅಶುತೋಷ್‌ ಮುಖ್ಯೋಪಾಧ್ಯಾ ಯರೂ ಒಬ್ಬರು. ಗಣಿತಜ್ಞರಾಗಿದ್ದ ಅವರು ಮುಂದೆ ಸುಪ್ರೀಮ್‌ ಕೋರ್ಟಿನ ನ್ಯಾಯಮೂರ್ತಿಯೂ ಆದರು. ಅಶುತೋಷರು, ಕೋಲ್ಕತ್ತಾ ವಿಶ್ವವಿದ್ಯಾಲಯಕ್ಕೆ ಐದು ಸಲ ವೈಸ್‌ ಛಾನ್ಸಲರ್‌ ಆಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದವರು.

ಮಾತ್ರವಲ್ಲ, ಭಾರತದಲ್ಲಿ ಮೊದಲ ಬಾರಿಗೆ ಗಣಿತ ಮತ್ತು ಭೌತಶಾಸ್ತ್ರ ಎರಡರಲ್ಲೂ ಒಟ್ಟಿಗೇ ಸ್ನಾತಕೋತ್ತರ ಪದವಿ ಸಂಪಾದಿಸಿದ ಕೀರ್ತಿಯೂ ಅವರದ್ದೇ! ಅವರು ಕೋಲ್ಕತ್ತಾ ಗಣಿತ ಸಂಘದ ಸ್ಥಾಪಕಾಧ್ಯಕ್ಷರು ಕೂಡ. ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಹತ್ತಾರು ಶಿಕ್ಷಣಸಂಸ್ಥೆಗಳನ್ನು ಕಟ್ಟಿಬೆಳೆಸಿದ ಕೀರ್ತಿ ಅಶುತೋಷರದ್ದು. ಅಷ್ಟೊಂದು ಎತ್ತರದ ಸ್ಥಾನದಲ್ಲಿದ್ದರೂ ಅವರದ್ದು ಸಾದಾ ಸೀದಾ ಉಡುಪು. ಉದ್ದ ಚುಂಗಿನ ಕಚ್ಚೆ, ಖಾದಿ ಅಂಗಿ, ಕೋಟು, ಮೇಲೊಂದು ಹತ್ತಿಯಉತ್ತರೀಯ, ಕಾಲಿಗೆ ಹವಾಯಿ ಸ್ಲಿಪ್ಪರಿನಂಥ ಸಾಧಾರಣ ಚಪ್ಪಲಿ. ಅವರನ್ನು ಮೊದಲ ಬಾರಿಗೆ ಕಂಡವರ್ಯಾರೂ, ಆ ಬಟ್ಟೆಬರೆಯನ್ನೂ ಅದರ ಸರಳತೆಯನ್ನೂ ನೋಡಿ, ಅವರ ವ್ಯಕ್ತಿತ್ವದ ಔನ್ನತ್ಯವನ್ನು ಹೇಳಲು ಸಾಧ್ಯವೇ ಇರಲಿಲ್ಲ. ಆದರೆ ಮುಖದ ತೇಜಸ್ಸನ್ನು ಕಂಡವರು ಮಾತ್ರ ಅಶುತೋಷರ ಕುರಿತು ಅಪರಿಮಿತ ಗೌರವ ಭಾವನೆ ತಾಳುತ್ತಿದ್ದರು.

ಭಾರತೀಯರನ್ನು ಪರಂಗಿಗಳು ಕಾಲ ಕಸದಂತೆ ಕಾಣುತ್ತಿದ್ದ ಕಾಲ ಅದು. ರೈಲುಗಳಲ್ಲಿ ಮೊದಲ ದರ್ಜೆಯ ಬೋಗಿಗಳಲ್ಲಿ ಭಾರತೀಯರಿಗೆ ಪ್ರವೇಶವಿರಲಿಲ್ಲ. ಆದರೆ ಅಶುತೋಷರು ಹಲವು ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ಮಹತ್ವದ ವ್ಯಕ್ತಿಯಾದ್ದರಿಂದ, ಅವರಿಗೆ ಮೊದಲ ದರ್ಜೆಯ ಬೋಗಿಯಲ್ಲಿ ಪ್ರಯಾಣಿಸುವ ಅವಕಾಶವಿತ್ತು. ಅಲ್ಲದೆ ಅಶುತೋಷರು ಕೂಡ, ತನ್ನ ಹಕ್ಕನ್ನು ಅಧಿಕಾರಯುತವಾಗಿಯೇ ಚಲಾಯಿಸಬೇಕೆಂಬ ಧಿಮಾಕಿನವರು.

ಅದೊಂದು ಸಲ, ಅವರು ಕೂತಿದ್ದ ಬೋಗಿಯಲ್ಲಿ ಪರಂಗಿ ಅಧಿಕಾರಿಯೊಬ್ಬನಿದ್ದ. ಅವನಿಗೆ ಇವರನ್ನು ಕಂಡರೆ ಮೈಯೆಲ್ಲ ಉರಿ. ಅಸಡ್ಡೆ. ಈ ಬೂದುಬಣ್ಣದ ಕಂಟ್ರಿಮ್ಯಾನ್‌ ಯಾತಕ್ಕೆ ಈ ಬೋಗಿ ಹತ್ತಿದ್ದಾನೋ ಎಂಬ ತಾತ್ಸಾರ. ತನ್ನ ಅಸಮಾಧಾನವನ್ನು ಅವನು ಕಣ್ಣಿಗೆ ಕಾಣಿಸುವಂತೆಯೇ ಆಗೀಗ ಪ್ರದರ್ಶಿಸುತ್ತಿದ್ದ. ಇದ್ಯಾವುದಕ್ಕೂ ಕ್ಯಾರೇ ಎನ್ನದೆ ಅಶುತೋಷರು ತನ್ನ ಸೀಟಿನಲ್ಲಿ ಆರಾಮಾಗಿ ಮೈಚಾಚಿ ನಿದ್ದೆ ಹೊಡೆದರು! ಎದ್ದು ನೋಡಿದಾಗ, ಅವರಿಗೆ ತನ್ನ ಚಪ್ಪಲಿ ಕಾಣೆಯಾದದ್ದು ಗಮನಕ್ಕೆ ಬಂತು. ಏನಾಗಿರಬಹುದು ಎಂಬುದನ್ನು ಊಹಿಸಲಾರ ದಷ್ಟು ಪೆದ್ದರೇನಲ್ಲ ಅವರು. ಸರಿ, ಸಂದರ್ಭ ಬರಲಿ ಎಂದು ಕಾದರು. ತುಸು ಹೊತ್ತಿನ ನಂತರ, ಆ ಬ್ರಿಟಿಷ್‌ ಅಧಿಕಾರಿ ನಿದ್ದೆಗೆ ಜಾರಿದ. ಆಗ ಅಶುತೋಷರು ಎದ್ದು, ಆತ ಮೊಳೆಗೆ ನೇತುಹಾಕಿದ್ದ ಕೋಟನ್ನು ತೆಗೆದು, ಕಿಟಕಿಯ ಹೊರಗೆ ಎಸೆದುಬಿಟ್ಟರು.

ನಿದ್ದೆಯಿಂದೆದ್ದ ಬಳಿಕ ಅಧಿಕಾರಿ ತನ್ನ ಕೋಟಿಗಾಗಿ ಎಲ್ಲೆಲ್ಲೂ ಹುಡುಕಾಡಿದ. ಕೊನೆಗೆ ಅಶುತೋ ಷರಲ್ಲಿ ಕೋಟು ಎಲ್ಲಿದೆ? ಎಂದು ಕೇಳಿದ. ಅಶುತೋಷರು ಯಾವ ಅಳುಕೂ ಇಲ್ಲದೆ ತಣ್ಣಗೆ ಹೇಳಿದರು: ಅದು ಬಹುಶಃ ನನ್ನ ಚಪ್ಪಲಿಯನ್ನು ಹುಡುಕಿಕೊಂಡು ಹೋಗಿರಬೇಕು!­

 

-ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.