ವಾಯುವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಿಗೆ ಕೋವಿಡ್ 19 ಸೊಂಕು
Team Udayavani, Aug 18, 2020, 11:58 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಡಗೋಡ: ವಾಯುವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್ ಗೆ ಕೋವಿಡ್ 19 ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.
ಇತ್ತೀಚೆಗೆ ಪಾಟೀಲರ ಪುತ್ರ ಬಾಪುಗೌಡನಿಗೆ ಕೋವಿಡ್ 19 ಸೋಂಕು ತಗುಲಿತ್ತು.
ಈ ವೇಳೆ ರಾಪಿಡ್ ತಪಾಸಣೆ ನಡೆಸಿದಾಗ ಕೋವಿಡ್ ನೆಗೆಟಿವ್ ಬಂದಿತ್ತು.
ಅಂದು ಗಂಟಲಿನ ದ್ರವ ಮಾದರಿ ತೆಗೆದು ಕೋವಿಡ್ ತಪಾಸಣೆಗೆ ಕಾರವಾರಕ್ಕೆ ಕಳುಹಿಸಲಾಗಿತ್ತು ಇಂದು ಬಂದ ವರದಿಯಲ್ಲಿ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಎಚ್.ಎಫ್.ಇಂಗಳೆ ತಿಳಿಸಿದ್ದಾರೆ.
ನನಗೆ ಕೋವಿಡ್ 19 ಸೋಂಕು ದೃಢ ಪಟ್ಟಿದೆ ಎಂದು ವೈದ್ಯರು ತಿಳಿಸಿದ್ದು ನನ್ನ ಸಂಪರ್ಕದಲ್ಲಿ ಬಂದವರೆಲ್ಲರು ಕೋವಿಡ್ 19 ತಪಾಸಣೆ ಮಾಡಿಸಿಕೊಂಡು ಹೋಂ ಕ್ವಾರಂಟೈನ್ ಆಗುವಂತೆ ವಿ. ಎಸ್. ಪಾಟೀಲರು ತಿಳಿಸಿದ್ದಾರೆ.
ಸಚಿವ ಶಿವರಾಮ ಹೆಬ್ಬಾರ ಅವರು ಇಂದು ಮುಂಡಗೋಡನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಈ ವೇಳೆ ವಿ.ಎಸ್. ಪಾಟೀಲರು ಸೇರಿದಂತೆ ತಾಲೂಕಿನ ಬಹುತೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’