ಮನೆ ಕೀಲಿ ಮುರಿದು ಚಿನ್ನ ಮತ್ತು ನಗದು ಕಳ್ಳತನ
Team Udayavani, Aug 19, 2020, 10:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗದಗ: ಮನೆಯ ಬೀಗ ಮುರಿದು 55 ಗ್ರಾಂ. ಚಿನ್ನಾಭರಣ ಹಾಗೂ 20 ಸಾವಿರ ರೂ. ನಗದು ಕಳ್ಳತನ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವಸತಿ ಬಡಾವಣೆಯ ಮಮತಾಜ್ ಬಸವರಾಜ್ ಚಿಂತಗುಂಡಿ ಎಂಬುವರ ಮನೆಯಲ್ಲಿ ಈ ಕಳವು ಘಟನೆ ನಡೆದಿರುವುದು ವರದಿಯಾಗಿದೆ.
ಆ. 17ರಂದು ಸಂಜೆ ಮನೆಗೆ ಕೀಲಿ ಹಾಕಲಾಗಿತ್ತು, ಮರುದಿನ ಬೆಳಗ್ಗೆ 11 ಗಂಟೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಕಳ್ಳರು ಕೀಲಿ ಮುರಿದು, ಒಳ ಪ್ರವೇಶಿಸಿದ್ದು, ಕಪಾಟಿನಲ್ಲಿದ್ದ 1.37 ಲಕ್ಷ ರೂ. ಮೌಲ್ಯದ 55 ಗ್ರಾಂ. ಚಿನ್ನಾಭರಣ ಹಾಗೂ 20 ಸಾವಿರ ರೂ. ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಮಮತಾಜ್ ಚಿಂತಗುಂಡಿ ನೀಡಿರುವ ದೂರಿನ ಅನ್ವಯ ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ