ಬೀದರ್: ಕೋವಿಡ್ 19 ಸೋಂಕಿಗೆ ಮತ್ತೆ 3 ಬಲಿ ; ಒಂದೇ ದಿನ 43 ಪಾಸಿಟಿವ್ ಪ್ರಕರಣ
Team Udayavani, Aug 19, 2020, 11:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಜಿಲ್ಲೆಯಲ್ಲಿ ಬುಧವಾರವೂ ಕೋವಿಡ್ 19 ಸೋಂಕಿನ ಹಾವಳಿ ಮುಂದುವರೆದಿದೆ.
ಈ ಮಹಾಮಾರಿಗೆ ಜಿಲ್ಲೆಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಮತ್ತು 43 ಜನರಲ್ಲಿ ಹೊಸದಾಗಿ ಈ ಸೋಂಕು ಕಾಣಿಸಿಕೊಂಡಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 119ಕ್ಕೆ ಏರಿಕೆಯಾದರೆ, ಪಾಸಿಟಿವ್ ಪ್ರಕರಣಗಳ ಸಂಖ್ಯೆ 3791ಕ್ಕೆ ಏರಿದೆ.
ಬುಧವಾರ ಕೋವಿಡ್ 19 ಸೋಂಕಿನಿಂದ ಇಲ್ಲಿನ ಪ್ರತಾಪ ನಗರದ 66 ವರ್ಷದ ಮಹಿಳೆ, ಬಸವ ಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ 65 ವರ್ಷದ ವ್ಯಕ್ತಿ ಹಾಗೂ ತಾಲೂಕಿನ ಬೆಟಬಾಲಕುಂದಾ ಗ್ರಾಮದ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಅಧಿಕ ರಕ್ತದೊತ್ತಡ ಸೇರಿ ಅನ್ಯ ಕಾಯಿಲೆಗಳಿಂದ ಬಳಲುತ್ತಿದ್ದ ಈ ಮೂವರರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿತ್ತು ಮತ್ತು ಇವರೆಲ್ಲಾ ಚಿಕಿತ್ಸೆ ಫಲಿಸದೇ ಬ್ರಿಮ್ಸ್ನಲ್ಲಿ ಇಂದು ಮೃತಪಟ್ಟಿದ್ದಾರೆ. ಇವರಲ್ಲಿ ಯಾರಿಗೂ ಟ್ರಾವೆಲ್ ಹಿಸ್ಟರಿ ಇದ್ದಿರಲಿಲ್ಲ.
ಬೀದರ್ ನಗರ ತಾಲೂಕಿನ 20 ಜನರಿಗೆ, ಭಾಲ್ಕಿ ತಾಲೂಕಿನ 7 ಜನರಿಗೆ, ಬಸವಕಲ್ಯಾಣ- ಹುಲಸೂರು ತಾಲೂಕಿನ 6 ಜನರಿಗೆ, ಹುಮನಾಬಾದ- ಚಿಟಗುಪ್ಪ ತಾಲೂಕಿನ 6 ಜನರಿಗೆ, ಔರಾದ- ಕಮಲನಗರ ತಾಲೂಕಿನ 4 ಜನರು ಸೇರಿ ಜಿಲ್ಲೆಯಲ್ಲಿ ಒಟ್ಟು 43 ಜನರಲ್ಲಿ ಹೊಸದಾಗಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿರುವುದು ಇಂದು ವರದಿಯಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 3791ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ 131 ಜನ ಸೋಂಕಿತರು ಸೇರಿ ಇದುವರಗೆ 2723 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 945 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯ 58,501 ಜನರ ಗಂಟಲ ಮಾದರಿಯ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 54,158 ಮಂದಿಯ ತಪಾಸಣಾ ವರದಿ ನೆಗೆಟಿವ್ ಬಂದಿದ್ದು, ಇನ್ನೂ 552 ಜನರ ವರದಿ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು