ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ; ಕನ್ನಡದಲ್ಲಿ ಸಂದೇಶ – ಕರೆ; ಆರೋಪಿಯ ಬಂಧನ


Team Udayavani, Aug 20, 2020, 5:50 AM IST

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ; ಕನ್ನಡದಲ್ಲಿ ಸಂದೇಶ – ಕರೆ; ಆರೋಪಿಯ ಬಂಧನ

ಮಂಗಳೂರು ವಿಮಾನ ನಿಲ್ದಾಣ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಕಿಡಿಗೇಡಿಯೊಬ್ಬ ಬುಧವಾರ ಅಪರಾಹ್ನ ಎಸ್‌ಎಂಎಸ್‌ ಕಳುಹಿಸಿದ ಬಳಿಕ ಕರೆ ಮಾಡಿದ್ದು, ಸಂಪೂರ್ಣ ತಪಾಸಣೆಯ ಬಳಿಕ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದೆ ಹಾಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್‌. ವಾಸುದೇವ ಅವರಿಗೆ ಈ ಕರೆ ಬಂದಿದ್ದು, ಅವರು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಕಾರ್ಯಾಚರಣೆಗಿಳಿದ ನಿಲ್ದಾಣದ ಸಿಐಎಸ್‌ಎಫ್‌ ಸಿಬಂದಿ ಮತ್ತು ಪೊಲೀಸರು ಇಡೀ ನಿಲ್ದಾಣ ಪೂರ್ತಿ ತಪಾಸಣೆ ನಡೆಸಿದ್ದಾರೆ. ಎಲ್ಲೂ ಬಾಂಬ್‌ ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಕರೆ ಎನ್ನುವ ನಿರ್ಧಾರಕ್ಕೆ ಅಧಿಕಾರಿಗಳು ಬಂದಿದ್ದು, ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಕನ್ನಡದಲ್ಲಿ ಸಂದೇಶ ಕಳಿಸಿದ್ದ !
ಎಂ.ಆರ್‌. ವಾಸುದೇವ ಅವರ ಮೊಬೈಲ್‌ಗೆ ಅಪರಾಹ್ನ 12.44ಕ್ಕೆ ಎಸ್‌ಎಂಎಸ್‌ ಬಂದಿತ್ತು. ‘ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ’ ಎಂದು ಆಂಗ್ಲ ಲಿಪಿಯಲ್ಲಿ ಕನ್ನಡದಲ್ಲೇ ಸಂದೇಶ ಕಳಿಸಿದ್ದ ಕಿಡಿಗೇಡಿ, ಮತ್ತೆ ಅದೇ ಸಂದೇಶವನ್ನು 12.51ಕ್ಕೆ ಕಳುಹಿಸಿದ್ದ. ಸಂದೇಶ ನೋಡಿದ ವಾಸುದೇವ ಅವರು ವಾಪಸ್‌ ಆ ಸಂಖ್ಯೆಗೆ ಕರೆ ಮಾಡಬೇಕೆನ್ನುವಷ್ಟರಲ್ಲಿ ಸುಮಾರು 1 ಗಂಟೆ ವೇಳೆಗೆ ಅದೇ ಸಂಖ್ಯೆಯಿಂದ ಕರೆ ಬಂದಿತ್ತು.

‘ನನಗೆ ಕರೆ ಮಾಡಿದ ವ್ಯಕ್ತಿ ಕನ್ನಡದಲ್ಲೇ ಮಾತನಾಡಿದ್ದು, ಇದು ಏರ್‌ಪೋರ್ಟಾ ಎಂದು ಪ್ರಶ್ನಿಸಿದ್ದ. ಅಲ್ಲ ಎಂದೆ. ಹಾಗಾದರೆ ಫೋನ್‌ ಇಡು ಎಂದು ಏಕವಚನದಲ್ಲಿ ಸಿಡುಕಿನ ಉತ್ತರ ನೀಡಿ ಕರೆ ಕಡಿತ ಮಾಡಿದ್ದ. ತತ್‌ಕ್ಷಣ ನಿಲ್ದಾಣದ ನಿರ್ದೇಶಕರಿಗೆ ಮಾಹಿತಿ ನೀಡಿದೆ. ಪೊಲೀಸ್‌ ಅಧಿಕಾರಿಗಳು ನನ್ನಿಂದ ಸಂಪೂರ್ಣ ಮಾಹಿತಿ ಪಡೆದರು. ಆ ಸಂಖ್ಯೆಯನ್ನೂ ಅವರಿಗೆ ನೀಡಿದ್ದೇನೆ’ ಎಂದು ಎಂ.ಆರ್‌. ವಾಸುದೇವ ಅವರು ಉದಯವಾಣಿಗೆ ತಿಳಿಸಿದರು.
ಇದೇ ವರ್ಷ ಜನವರಿ 20ರಂದು ಆದಿತ್ಯ ರಾವ್‌ ಎಂಬಾತ ಮಂಗಳೂರು ವಿಮಾನ ನಿಲ್ದಾಣದ ಹೊರಗಡೆ ಬಾಂಬ್‌ ಇರಿಸಿದ್ದು ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಸಕಲ ಭದ್ರತಾ ಕ್ರಮಗಳನ್ನು ಕೈಗೊಂಡು ಅದನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸಲಾಗಿತ್ತು.

ಕರೆ ಬಂದದ್ದು ನಿಜ
ಈ ಕುರಿತು ಪ್ರತಿಕ್ರಿಯಿಸಿದ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್‌, “ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಿಗೆ ಕರೆ ಬಂದಿದ್ದು ನಿಜ. ಕೂಡಲೇ ಎಲ್ಲ ಬಗೆಯ ತಪಾಸಣೆ ಕೈಗೊಂಡಿದ್ದೇವೆ. ಎಲ್ಲೂ ಬಾಂಬ್‌ ಇರುವುದು ಪತ್ತೆಯಾಗಿಲ್ಲ. ಇದೊಂದು ಹುಸಿ ಕರೆಯಾಗಿತ್ತು. ಈ ಬಗ್ಗೆ ಪೊಲೀಸರು ಮುಂದಿನ ಕ್ರಮ ಜರಗಿಸಲಿದ್ದಾರೆೆ’ ಎಂದು ತಿಳಿಸಿದ್ದಾರೆ.

ಓರ್ವನ ಬಂಧನ
ಪ್ರಕರಣದ ಕುರಿತಂತೆ ಈಗಾಗಲೇ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನ ಬಳಿ ಇರುವ ಮೊಬೈಲ್‌ ಫೋನ್‌, ಎಸ್‌ಎಂಎಸ್‌ ಕಳುಹಿಸಿದ ಮತ್ತು ಕರೆ ಬಂದ ಮೊಬೈಲ್‌ ಫೋನ್‌ನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅದರ ವಿಳಾಸ, ಸತ್ಯಾಸತ್ಯತೆ ಮತ್ತಿತರ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸ್‌ ಆಯುಕ್ತ ವಿಕಾಶ್‌ ಕುಮಾರ್‌ ಅವರು ಉದಯವಾಣಿಗೆ ತಿಳಿಸಿದ್ದಾರೆ.
ತನಿಖೆ ನಡೆಯುತ್ತಿರುವುದರಿಂದ ಆತನ ಬಗ್ಗೆ ಹೆಚ್ಚಿನ ವಿವರಗಳನ್ನು ಈಗ ಬಹಿರಂಗಪಡಿಸಲಾಗುತ್ತಿಲ್ಲ. ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.