ಕೋವಿಡ್ ಪತ್ತೆಗೆ ತಪಾಸಣೆ ಹೆಚ್ಚಿಸಿ: ಡಿಸಿ ಕೆ.ಬಿ.ಶಿವಕುಮಾರ್‌ ಸೂಚನೆ 


Team Udayavani, Aug 20, 2020, 12:20 PM IST

ಕೋವಿಡ್ ಪತ್ತೆಗೆ ತಪಾಸಣೆ ಹೆಚ್ಚಿಸಿ: ಡಿಸಿ ಕೆ.ಬಿ.ಶಿವಕುಮಾರ್‌ ಸೂಚನೆ 

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚಲು ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ
ಕೆ.ಬಿ.ಶಿವಕುಮಾರ್‌ ಸೂಚನೆ ನೀಡಿದರು.

ಜಿಲ್ಲಾಭವನ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಗಂಟಲು ದ್ರವ
ಸಂಗ್ರಹಿಸುವ ಕಾರ್ಯಕ್ಕೆ 19 ಸಂಚಾರಿ ತಂಡಗಳಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ 63 ತಪಾಸಣಾ ತಂಡಗಳಿವೆ.
ಶಿವಮೊಗ್ಗ ನಗರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಗಂಟಲು ದ್ರವ ಸಂಗ್ರಹಿಸುವ ಕಾರ್ಯ ಆರಂಭಿಸಬೇಕು. ಇದಕ್ಕಾಗಿ ಐದು ಸಂಚಾರಿ ತಂಡಗಳನ್ನು ಸಜ್ಜುಗೊಳಿಸುವಂತೆ ಅವರು ತಿಳಿಸಿದರು. ಪ್ರಸ್ತುತ ನಿತ್ಯ 1200 ಸ್ಯಾಂಪಲ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1500ಕ್ಕೆ ಹೆಚ್ಚಿಸಬೇಕು. ಇದೇ ರೀತಿ ಆರೆಟಿ ಮೂಲಕ 600 ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1200ಕ್ಕೆ ಹೆಚ್ಚಿಸಬೇಕು.

ಪ್ರತಿದಿನ ಮೆಗ್ಗಾನ್‌ ಆಸ್ಪತ್ರೆಯಲ್ಲಿ 500, ವಿಡಿಆರ್‌ಎಲ್‌ನಲ್ಲಿ 500 ಪರೀಕ್ಷೆ ಗುರಿ ಸಾಧಿಸಬೇಕು. ಒಂದೆರಡು ದಿನಗಳಲ್ಲಿ
ಸುಬ್ಬಯ್ಯ ಮೆಡಿಕಲ್‌ ಕಾಲೇಜಿನಲ್ಲಿ ಗಂಟಲು ದ್ರವ ಪರೀಕ್ಷೆ ಆರಂಭವಾಗಲಿದ್ದು, ಅಲ್ಲಿಯೂ ಪ್ರತಿ ದಿನ 500 ಪರೀಕ್ಷೆ
ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಹೋಂ ಕ್ವಾರಂಟೈನ್‌ ಪ್ರಮಾಣ ಹೆಚ್ಚಳ: ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರಂಟೈನ್‌ ಪ್ರಮಾಣ ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಹೋಂ ಕ್ವಾರಂಟೈನ್‌ ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ, ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು. ಕೊರೊನಾ ಪಾಸಿಟಿವ್‌ ವ್ಯಕ್ತಿಗಳ ಆರೋಗ್ಯ ತಪಾಸಣೆಗಾಗಿ ಆರಂಭಿಸಲಾಗಿರುವ ಟ್ರಯಾಜ್‌ ಕೇಂದ್ರಗಳಲ್ಲಿ ಸಂಬಂಧಪಟ್ಟ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಕನಿಷ್ಟ 6 ಮಂದಿ ಹಾಗೂ ನಗರ ಪ್ರದೇಶದಲ್ಲಿ ಕನಿಷ್ಟ 10 ಮಂದಿ ಪ್ರಾಥಮಿಕ ಸೋಂಕಿತರನ್ನು ಗುರುತಿಸಿ ಅವರ ಮೇಲೆ ನಿಗಾ ಇರಿಸಬೇಕು. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ನಿಯೋಜಿಸಲಾಗಿರುವ ಆಯುರ್ವೇದಿಕ್‌ ವೈದ್ಯರು ಕರ್ತವ್ಯಕ್ಕೆ ತೆರಳಲು ಹಿಂದೇಟು
ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಪಂ ಸಿಇಒ ಎಂ.ಎಲ್‌.ವೈಶಾಲಿ, ಶಿಮ್ಸ್‌ ನಿರ್ದೇಶಕ ಡಾ.ಸಿದ್ದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.