ಮುಂಬಯಿ ಗಣೇಶೋತ್ಸವಕ್ಕೆ ಸುಪ್ರೀಂ ಒಲವಿಲ್ಲ
Team Udayavani, Aug 22, 2020, 1:33 AM IST
ಹೊಸದಿಲ್ಲಿ: ಮುಂಬಯಿ ಗಣೇಶೋತ್ಸವಕ್ಕೆ ಸೇರುವ ಜನರನ್ನು ನಿಯಂತ್ರಿಸುವುದೇ ಕಷ್ಟ. ಗಣೇಶೋತ್ಸವಕ್ಕೆ ಅನುಮತಿ ನೀಡಲು ನಮಗೆ ಒಲವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮುಂಬಯಿಯ ಜೈನಮಂದಿರಗಳಲ್ಲಿ ಪರ್ಯುಷಣ ಆಚರಣೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಂಡಿತ್ತು. ಈ ವೇಳೆ ಮುಖ್ಯ ನ್ಯಾ| ಎಸ್.ಎ. ಬೋಬ್ದೆ, ಮುಂಬಯಿ ಗಣೇಶೋತ್ಸವ ಬಗ್ಗೆ ನ್ಯಾಯಪೀಠದ ಅಭಿಪ್ರಾಯ ತಿಳಿಸಿದ್ದಾರೆ.
ಮುಂಬಯಿನ ದಾದರ್, ಬೈಕುಲಾ ಮತ್ತು ಚೆಂಬೂರ್ನ 3 ಜೈನ ಮಂದಿರಗಳಲ್ಲಿ ಪರ್ಯುಷಣ ಆಚರಿಸಲು ಸುಪ್ರೀಂ ಕೋರ್ಟ್ ಅನುಮತಿ ಕಲ್ಪಿಸಿದೆ. ಆಚರಣೆ ವೇಳೆ ಗರಿಷ್ಠ 5ಕ್ಕಿಂತ ಹೆಚ್ಚಿನ ಜನರು ಮಂದಿರದೊಳಗೆ ಇರಬಾರದು ಎಂದೂ ಷರತ್ತು ವಿಧಿಸಿದೆ.
ಮಹಾರಾಷ್ಟ್ರ ಆಕ್ಷೇಪ: ಒಂದು ಸಮುದಾಯದ ಹಬ್ಬದ ಆಚರಣೆಗೆ ಅನುಮತಿ ನೀಡಿದರೆ, ಬೇರೊಂದು ಸಮುದಾಯದವರೂ ಇದೇ ಬೇಡಿಕೆಯನ್ನೇ ಮುಂದಿಡಬಹುದು. ಆಗ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗ ಬಹುದು ಎಂದು ಮಹಾರಾಷ್ಟ್ರ ಸರಕಾರ ಪರ ಪಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ