139 ಮಂದಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ: 25 ವರ್ಷದ ಮಹಿಳೆ ದೂರು, 40 ಪುಟಗಳ FIR
ಈಕೆ ಮದುವೆಯಾದ ಒಂದು ವರ್ಷದೊಳಗೆ 2010ರಲ್ಲಿ ವಿವಾಹ ವಿಚ್ಛೇದನ ನಡೆದಿತ್ತು.
Team Udayavani, Aug 22, 2020, 1:20 PM IST
Representative Image
ಹೈದರಾಬಾದ್/ತೆಲಂಗಾಣ:ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ತನ್ನ ಮೇಲೆ ಸುಮಾರು 139ಕ್ಕೂ ಅಧಿಕ ಮಂದಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ 25 ವರ್ಷದ ಮಹಿಳೆಯೊಬ್ಬಳು ದೂರು ನೀಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಈಕೆ ಮದುವೆಯಾದ ಒಂದು ವರ್ಷದೊಳಗೆ 2010ರಲ್ಲಿ ವಿವಾಹ ವಿಚ್ಛೇದನ ನಡೆದಿತ್ತು. ಆ ನಂತರ ಆಕೆಯ ಮಾಜಿ ಗಂಡನ ಕುಟುಂಬದ ಸದಸ್ಯರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಪೊಲೀಸರು ಪಿಟಿಐಗೆ ತಿಳಿಸಿರುವುದಾಗಿ ವರದಿ ಮಾಡಿದೆ.
ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ ಹಾಗೂ ಎಸ್ ಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಸುಮಾರು 42 ಪುಟಗಳಷ್ಟು ಎಫ್ ಐಆರ್ ಬರೆಯಲಾಗಿದೆ. ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸತ್ಯಾಸತ್ಯತೆ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತೆಲಂಗಾಣದ ಪಂಜಾಗುಟ್ಟಾ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವ ಪ್ರಕಾರ, 2009ರ ಜೂನ್ ನಲ್ಲಿ (14 ಅಪ್ರಾಪ್ತ ವಯಸ್ಸು )ಮದುವೆಯಾದ ಮೂರು ತಿಂಗಳ ನಂತರ ಆಕೆಯ ಸಂಬಂಧಿಗಳು ದೈಹಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ನಡೆಸತೊಡಗಿದ್ದರು. ಇದು ಸುಮಾರು ಒಂಬತ್ತು ತಿಂಗಳವರೆಗೆ ನಡೆದಿತ್ತು. ಬಳಿಕ 2010ರ ಡಿಸೆಂಬರ್ ನಲ್ಲಿ ವಿವಾಹ ವಿಚ್ಛೇದನ ಪಡೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.
ವಿವಾಹ ವಿಚ್ಛೇದನ ಪಡೆದ ನಂತರ ಮಹಿಳೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಮುಂದಾಗಿದ್ದಳು. ಆದರೆ ಅಲ್ಲಿಯೂ ಆಕೆಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಹೀಗೆ ಕೆಲವು ವರ್ಷಗಳ ಕಾಲ ಹಲವಾರು ಮಂದಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿದ್ದಾಳೆ.
ಮಹಿಳೆಯ ದೂರಿನಲ್ಲಿ, ಕಳೆದ ಕೆಲವು ವರ್ಷಗಳಲ್ಲಿ ವಿವಿಧ ಸ್ಥಳಗಳಲ್ಲಿ ಸುಮಾರು 139ಕ್ಕೂ ಅಧಿಕ ಮಂದಿ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ತಿಳಿಸಿದ್ದಾಳೆ. ದೂರು ನೀಡಿದರೆ ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಒಡ್ಡಿದ್ದರಿಂದ ಹೆದರಿ ಈವರೆಗೆ ದೂರು ನೀಡಲು ವಿಳಂಬವಾಗಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ