ಸೆ. 3ರಿಂದ ಸಾರ್ವಜನಿಕ ಬಸ್‌ ಸೇವೆ ಆರಂಭ


Team Udayavani, Aug 23, 2020, 12:13 PM IST

ಸೆ. 3ರಿಂದ ಸಾರ್ವಜನಿಕ ಬಸ್‌ ಸೇವೆ ಆರಂಭ

ಪುಣೆ, ಆ. 21: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳುಗಳಿಂದ ಮುಚ್ಚಲ್ಪಟ್ಟಿರುವ ಪುಣೆ ಮಹಾನಗರ ಸಾರಿಗೆ ಮಹಾಮಂಡಲದ (ಪಿಎಂಪಿಎಂಎಲ್) ಸಾರ್ವಜನಿಕ ಬಸ್‌ ಸೇವೆಗಳನ್ನು ಸೆಪ್ಟಂಬರ್‌ 3ರಿಂದ ಪ್ರಾರಂಭಿಸಲಾಗುವುದು ಎಂದು ಮೇಯರ್‌ ಮುರಳೀಧರ್‌ ಮೊಹೋಲ್‌ ಮಾಹಿತಿ ನೀಡಿದ್ದಾರೆ.

ಪುಣೆ ಮತ್ತು ಪಿಂಪ್ರಿಯಲ್ಲಿ ಸಾರ್ವಜನಿಕ ಸಾರಿಗೆ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಪುಣೆ ಮಹಾನಗರ ಪಾಲಿಕೆಯಲ್ಲಿ ಸಭೆ ನಡೆಸಲಾಯಿತು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್‌ ಮೇಯರ್‌ ಮುರಳೀಧರ್‌ ಮೊಹೋಲ್‌ ಅವರು, ಪುಣೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕೊರೊನಾ ರೋಗಿಗಳ ಸಂಖ್ಯೆಯನ್ನು ಪರಿಗಣಿಸಿ ಮಾರ್ಚ್‌ನಿಂದ ಲಾಕ್‌ಡೌನ್‌ ಜಾರಿಗೊಳಿಸಲಾಯಿತು. ಈ ವೇಳೆ ಪಿಎಂಪಿಎಂಎಲ್‌ ಸಾರ್ವಜನಿಕರ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಅನಂತರ ರಾಜ್ಯ ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‌ ಡೌನ್‌ ಸಡಿಲಗೊಳಿಸಿದ್ದರಿಂದ ನಗರದ ಎಲ್ಲಾ ಸೇವೆಗಳನ್ನು ಪುನಃಸ್ಥಾಪಿಸಲು ಸಹಾಯವಾಗಿದೆ. ಈಗ ನಗರದ ಎಲ್ಲಾ ನಾಗರಿಕರ ಬೇಡಿಕೆಯನ್ನು ಪರಿಗಣಿಸಿ ಸೆಪ್ಟೆಂಬರ್‌ 3 ರಿಂದ ಪಿಎಂಪಿಎಂಎಲ್‌ ಬಸ್‌ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದರು.

ನಿರ್ಬಂಧಿತ ಪ್ರದೇಶಗಳು ಮತ್ತು ಪೇಟ್‌ ಭಾಗಗಳನ್ನು ಹೊರತು ಪಡಿಸಿ ಉಳಿದ ಪ್ರದೇಶಗಳಲ್ಲಿ ಪಿಎಂಪಿಎಂಎಲ್‌ ಸಾರ್ವಜನಿಕ ಬಸ್‌ ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಅಲ್ಲದೆ, ನಿಗಮದ 13 ಡಿಪೋಗಳ 421 ಬಸ್‌ಗಳು, 190 ಮಾರ್ಗಗಳಲ್ಲಿ ಕಾರ್ಯನಿರ್ವಹಿಸಲು ಯೋಜಿಸಲಾಗಿದೆ. ನಗರದ ಮುಖ್ಯ ರಸ್ತೆಗಳು ಹಾಗೂ ಉಪನಗರಗಳಲ್ಲಿ ಬೆಳಗ್ಗೆ ಮತ್ತು ಸಂಜೆಯ ವೇಳೆ ಜನ ಸಂದಣೆ ಉಂಟಾಗುವುದರಿಂದ ಹೆಚ್ಚಿನ ಸೇವೆಗಳನ್ನು ಒದಗಿಸಲಾಗುವುದು. ಪ್ರತಿ ಬಸ್‌ನಲ್ಲಿ ಶೇ. 50ರಷ್ಟು ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿದ್ದು, ಎಲ್ಲ ನಿಯಮಗಳನ್ನು ಪ್ರಯಾಣಿಕರು ಪಾಲಿಸಬೇಕೆಂದು ಮೇಯರ್‌ ಮುರಳೀಧರ್‌ ಮೊಹೋಲ್‌ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಮಸ್ಕತ್‌: ಬಂಟ್ಸ್‌ ಸಮುದಾಯ-ವಿಷು ಆಚರಣೆ

Desi Swara: ಮಸ್ಕತ್‌: ಬಂಟ್ಸ್‌ ಸಮುದಾಯ-ವಿಷು ಆಚರಣೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Desi Swara: ಬಹ್ರೈನ್‌ ಬಿಲ್ಲವಾಸ್‌-ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.