ಕ್ಯಾಲಿಸ್‌, ಲೀಸಾ ಸ್ತಾಲೇಕರ್‌, ಅಬ್ಟಾಸ್‌ಗೆ: ‘ಐಸಿಸಿ ಹಾಲ್‌ ಆಫ್‌ ಫೇಮ್‌’ ಗೌರವ


Team Udayavani, Aug 24, 2020, 8:03 AM IST

ICC-Hall-of-Fame

Jaques Kallis, ICC Hall of Fame, Zaheer Abbas,

ದುಬಾೖ: 2020ನೇ ಸಾಲಿನ ಪ್ರತಿಷ್ಠಿತ ಐಸಿಸಿ ಹಾಲ್‌ ಆಫ್‌ ಫೇಮ್‌ ಪ್ರಶಸ್ತಿಗೆ ದಕ್ಷಿಣ ಆಫ್ರಿಕಾದ ಜಾಕ್‌ ಕ್ಯಾಲಿಸ್‌, ಪಾಕಿಸ್ಥಾನದ ಜಹೀರ್‌ ಅಬ್ಟಾಸ್‌ ಮತ್ತು ಭಾರತ ಮೂಲದ ಆಸ್ಟ್ರೇಲಿಯದ ಕ್ರಿಕೆಟ್‌ ಆಟಗಾರ್ತಿ ಲೀಸಾ ಸ್ತಾಲೇಕರ್‌ ಹೆಸರನ್ನು ಸೇರ್ಪಡೆಗೊಳಿಸಲಾಗಿದೆ.

ಅಲನ್‌ ವಿಲ್ಕಿನ್ಸನ್‌, ಗಾವಸ್ಕರ್‌, ಮೆಲ್‌ ಜೋನ್ಸ್‌ ಮತ್ತು ಶಾನ್‌ ಪೋಲಾಕ್‌ ಅವರನ್ನೊಳಗೊಂಡ ಆಯ್ಕೆ ಸಮಿತಿ ರವಿವಾರ ಈ ಮೂರು ಹೆಸರನ್ನು ಅಂತಿಮಗೊಳಿಸಿತು.

ಆಫ್ರಿಕಾದ ಸವ್ಯಸಾಚಿ
ಜಾಕ್‌ ಕ್ಯಾಲಿಸ್‌ ಜಾಗತಿಕ ಕ್ರಿಕೆಟ್‌ ಕಂಡ ಶ್ರೇಷ್ಠ ಆಲ್‌ರೌಂಡರ್‌ ಆಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 13,289 ರನ್‌, ಏಕದಿನದಲ್ಲಿ 11,379 ರನ್‌ ಸಂಪಾದಿಸಿದ್ದಾರೆ.

ಎರಡೂ ಮಾದರಿಗಳಲ್ಲಿ ಕ್ರಮವಾಗಿ 292 ಹಾಗೂ 273 ವಿಕೆಟ್‌ ಹಾರಿಸಿದ್ದಾರೆ. ಟೆಸ್ಟ್‌ಗಳಲ್ಲಿ 23 ಸಲ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದು, 45 ಶತಕ ಬಾರಿಸಿದ್ದಾರೆ.

ವಿಶ್ವಕಪ್‌ ಸಾಧಕಿ
41 ವರ್ಷದ ಲೀಸಾ ಸ್ತಾಲೇಕರ್‌ ಪುಣೆ ಮೂಲದವರಾಗಿದ್ದು, ಆಸ್ಟ್ರೇಲಿಯದ ಮಾಜಿ ಆಟಗಾರ್ತಿಯಾಗಿದ್ದಾರೆ. 2005 ಮತ್ತು 2013ರ ಏಕದಿನ ವಿಶ್ವಕಪ್‌ ಹಾಗೂ 2010 ಮತ್ತು 2012ರ ಟಿ20 ವಿಶ್ವಕಪ್‌ ವಿಜೇತ ತಂಡದ ಸದಸ್ಯೆಯೆಂಬುದು ಇವರ ಪಾಲಿನ ಹೆಗ್ಗಳಿಕೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಮತ್ತು ಸಾವಿರ ರನ್‌ ಡಬಲ್ಸ್‌ ಸಾಧಿಸಿದ ಮೊದಲ ಆಟಗಾರ್ತಿ ಎಂಬುದು ಲೀಸಾ ಪಾಲಿನ ಮತ್ತೊಂದು ಸಾಧನೆ.

ಮಾಜಿ ಪಾಕ್‌ ನಾಯಕ
1969-1985ರ ಅವಧಿಯಲ್ಲಿ ಪಾಕಿಸ್ಥಾನದ ಟೆಸ್ಟ್‌ ತಂಡ ಕಂಡ ಶ್ರೇಷ್ಠ ಆಟಗಾರರಲ್ಲಿ ಜಹೀರ್‌ ಅಬ್ಟಾಸ್‌ ಅವರಿಗೆ ವಿಶಿಷ್ಟ ಸ್ಥಾನವಿದೆ. 78 ಟೆಸ್ಟ್‌ ಆಡಿದ್ದ ಅಬ್ಟಾಸ್‌ 12 ಶತಕಗಳ ನೆರವಿನೊಂದಿಗೆ 5,062 ರನ್‌ ಒಟ್ಟುಗೂಡಿಸಿದ್ದಾರೆ. 62 ಏಕ ದಿನ ಪಂದ್ಯಗಳಿಂದ 2,572 ರನ್‌ ಬಾರಿಸಿದ್ದಾರೆ. ಕ್ರಮವಾಗಿ 12 ಮತ್ತು 7 ಶತಕ ಬಾರಿಸಿದ ಜಹೀರ್‌ ಅಬ್ಟಾಸ್‌ ಮಾಜಿ ನಾಯಕರೂ ಹೌದು.

ಐಸಿಸಿ ಹಾಲ್‌ ಆಫ್‌ ಫೇಮ್‌ ಪ್ರಶಸ್ತಿಯನ್ನು 2009ರಿಂದ ನೀಡಲು ಆರಂಭಿಸಲಾಗಿತ್ತು. ಸುನೀಲ್‌ ಗಾವಸ್ಕರ್‌, ಬಿಷನ್‌ ಸಿಂಗ್‌ ಬೇಡಿ, ಕಪಿಲ್‌ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌ ದ್ರಾವಿಡ್‌ ಮತ್ತು ಸಚಿನ್‌ ತೆಂಡುಲ್ಕರ್‌ ಈ ಗೌರವಕ್ಕೆ ಪಾತ್ರರಾದ ಭಾರತದ ಕ್ರಿಕೆಟಿಗರಾಗಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.