ಗಿರಿರಾಜ ಕೋಳಿ ಮರಿಗಳ ವಿತರಣೆಗೆ ಸಿದ್ಧತೆ

ಪಶುಪಾಲನೆ ಇಲಾಖೆಯಿಂದ ಸುಧಾರಿತ ಮರಿ ಲಭ್ಯ

Team Udayavani, Aug 25, 2020, 12:44 PM IST

br-tdy-1

ಸಾಂದರ್ಭಿಕ ಚಿತ್ರ

ದೇವನಹಳ್ಳಿ: ಜಿಲ್ಲೆಯ ಪಶುಪಾಲನೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಸರ್ಕಾರದ ಯೋಜನೆ ಇಲ್ಲವಾದರೂ, ಇಲಾಖೆಯಿಂದ ಉಚಿತವಾಗಿ ಗಿರಿರಾಜ ತಳಿ ಕೋಳಿ ಮರಿಗಳ ವಿತರಣೆಗೆ ಪೂರ್ವ ಸಿದ್ಧತೆ ನಡೆದಿದೆ.

ಗಿರಿರಾಜ ಕೋಳಿ ಮರಿ 5 ತಿಂಗಳ ನಂತರ ಮೊಟ್ಟೆ ಇಡಲು ಪ್ರಾರಂಭಿಸುತ್ತದೆ. ಈ ಕೋಳಿ ಗಳು, ಹುಳು ಉಪ್ಪಟೆ ತಿನ್ನುವುದರಿಂದ ಸುತ್ತ ಮುತ್ತಲಿನ ಪರಿಸರವೂ ಶುಚಿಯಾಗಿರುತ್ತದೆ. ಹಕ್ಕಿಜ್ವರ ಸೇರಿ ಯಾವ ರೋಗಗಳಿಗೂ ಸುಲಭವಾಗಿ ತುತ್ತಾಗುವುದಿಲ್ಲ. ಪ್ರಥಮ ಹಂತದಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 400 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಓರ್ವ ಫಲಾನುಭವಿಗೆ 10ರಂತೆ ಕೋಳಿ ಮರಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಕುಕ್ಕುಟೋದ್ಯಮ ಅಭಿವೃದ್ಧಿ ನಿಗಮದಿಂದ ಕೋಳಿ ಮರಿ ಖರೀದಿಸಲಾಗುತ್ತಿದೆ. ಸುಮಾರು 100 ರಿಂದ 150 ಮೊಟ್ಟೆ ಇಡುವ ಗಿರಿರಾಜ ಕೋಳಿ 6ರಿಂದ 8 ಕೆ.ಜಿ. ತೂಕವಿರುತ್ತದೆ. ನಾಟಿ ಕೋಳಿಗಳು ಸಾಮಾನ್ಯವಾಗಿ 2 ಕೆ.ಜಿ. ತೂಗಿದರೆ ಹೆಚ್ಚು. ಹೀಗಾಗಿ ಗಿರಿರಾಜ ಕೋಳಿ ಸಾಕುವುದರಿಂದ ಲಾಭ ಹೆಚ್ಚು, ನಾಟಿ ಕೋಳಿ ಮತ್ತು ಗಿರಿರಾಜ ತಳಿ ನಡುವಿನ ವ್ಯತ್ಯಾಸವೆಂದರೆ, ಗಿರಿರಾಜ ಬೇಗ ಮಾಂಸ ಕಟ್ಟುತ್ತದೆ. ಆದ್ದರಿಂದ ಇದರ ಸಾಕಾಣಿಕೆಗೆ ಹೆಚ್ಚು ಒಲವು ವ್ಯಕ್ತವಾಗುತ್ತದೆ. 40 ವಾರಗಳಲ್ಲಿ ಹೆಣ್ಣುಕೋಳಿ 3 ರಿಂದ 3.5ಕೆ.ಜಿ ಹಾಗೂ ಗಂಡು ಕೋಳಿ (ಹುಂಜ) 4 ರಿಂದ 5 ಕೆ.ಜಿ. ತೂಕವಿರುತ್ತದೆ. ಈ ಕೋಳಿ ಮೊಟ್ಟೆ ಸರಾಸರಿ 55ಗ್ರಾಂ ತೂಕವಿರುತ್ತದೆ. ಒಂದು ಮೊಟ್ಟೆ ದರ ಸಾಮಾನ್ಯವಾಗಿ 10 ರೂ.ವಾಗಲಿದೆ. ಮೊಟ್ಟೆ ಮಾಂಸ ಎರಡಕ್ಕೂ ಗಿರಿರಾಜ ಕೋಳಿಗೆ ಹೆಚ್ಚು ಬೇಡಿಕೆ ಇದೆ. ಈ ಕೋಳಿಗಳು ನಾಟಿಕೋಳಿಗಳ ಹಾಗೆ ಬೆಳೆಯುತ್ತದೆ. ಮನೆಯೊಳಗೆ ಆಹಾರ ತಿನ್ನಲು ಬಿಡಬಹುದಾಗಿದೆ.

ಈ ಹಿಂದೆ ಎಸ್‌ಸಿ, ಎಸ್‌ಟಿ, ಬಡವರಿಗೆ ಗಿರಿರಾಜ ಕೋಳಿ ವಿತರಣೆಯಾಗುತ್ತಿತ್ತು. ಇತರೆ ವರ್ಗದ ಬಡ ರೈತರಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಎಲ್ಲಾ ವರ್ಗದ ಬಡ ಜನರಿಗೆ ಉಚಿತವಾಗಿ ಗಿರಿರಾಜ ಕೋಳಿ ಮರಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಹೊರಗೆ ಆಹಾರ ತಿನ್ನಲು ಬಿಟ್ಟರೆ ಇವುಗಳಿಗೆ ಕಾವಲು ಅಗತ್ಯ ಇಲ್ಲವಾದರೆ ನಾಯಿ, ಮುಂಗುಸಿ, ಬೆಕ್ಕುಗಳಿಗೆ ಬಲಿಯಾಗುವ ಸಾಧ್ಯತೆ ಇರುತ್ತದೆ. ನಾಟಿ ಕೋಳಿಗಳಿಗೆ ಹೋಲಿ ಸಿದರೆ ಇವುಗಳ ಗಾತ್ರ ಹೆಚ್ಚಾಗಿರುವುದರಿಂದ ನಾಟಿ ಕೋಳಿಗಳಂತೆ ಶತ್ರುಗಳಿಂದ ತಪ್ಪಿಸಿ ಕೊಳ್ಳಲು ಕಷ್ಟ ಪಡುತ್ತವೆ. ಇವುಗಳ ಸಾಕಾಣಿಕೆ ವೇಳೆ ಎಚ್ಚರಿಕೆ ಅತ್ಯವಶ್ಯಕ.

ದಾಖಲಾತಿ ಏನೇನು?: ಆಯಾ ಜಿಪಂ ವ್ಯಾಪ್ತಿಯ ಆಸಕ್ತರಿಂದ ಆಧಾರ್‌ ಕಾರ್ಡ್‌, ಮೊಬೈಲ್‌ ನಂಬರ್‌, ಜಿಪಂ ಸದಸ್ಯರಿಂದ ಶಿಫಾರಸ್ಸು ಪತ್ರ ಬೇಕಾಗಿದೆ. ನಂತರ ಇಲಾಖೆಯಿಂದ ಹೆಸರುಗಳನ್ನು ಅಂತಿಮ ಮಾಡಲಾಗುತ್ತದೆ.

ಜಿಲ್ಲೆಯ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಗಿರಿರಾಜ ಕೋಳಿ ಸಾಕಣೆಗೆ ಪಶುಪಾಲನಾ ಇಲಾಖೆ ಉತ್ತೇಜನ ನೀಡುತ್ತಿದೆ. ಫಲಾನುಭವಿಗಳು ಇದರ ಅನುಕೂಲ ಸದ್ಭಳಕೆ ಮಾಡಿಕೊಳ್ಳಬೇಕು. ಕುಕ್ಕುಟೋದ್ಯಮ ಅಭಿವೃದ್ಧಿಗೆ ಇಲಾಖೆ ಸಾಕಷ್ಟು ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸುತ್ತಿದೆ.   ಬಾಲಚಂದ್ರ, ಜಿಲ್ಲಾ ಪಶುಪಾಲನಾ ಇಲಾಖೆ, ಉಪನಿರ್ದೇಶಕರು

 

 ಎಸ್‌ ಮಹೇಶ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.