ಕುರುಬ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
Team Udayavani, Aug 25, 2020, 2:47 PM IST
ಕನಕಪುರ: ಕುರುಬ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಸಂಘದ ನೂತನ ಅಧ್ಯಕ್ಷ ಎಂ.ಎಸ್.ಚಂದ್ರಪ್ಪ ತಿಳಿಸಿದರು. ತಾಲೂಕಿನ ಸಾತನೂರು ಹೋಬಳಿ ದೊಡ್ಡಾಆಲಹಳ್ಳಿ ಗ್ರಾಮದ ಗೆಜ್ಜೆ ಕಲ್ಲು ಬೀರೇಶ್ವರ ದೇವಾಲಯದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಸಂಘದ ಹಿರಿಯ ಮುಖಂಡರು ತನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕುರುಬ ಸಮುದಾಯವನ್ನು ಸಮಾಜದಲ್ಲಿ ಮೇಲೆತ್ತಲು ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು ಸಹಕರಿಸಬೇಕೆಂದರು. ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಗೌರವ ಅಧ್ಯಕ್ಷ ಸಂದರೇಶ್ ಪೂಜಾರಿ, ಕುರುಬರ ಸಂಘದ ಅಭಿವೃದ್ಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಹಿರಿಯ ಮುಖಂಡರು, ಸದಸ್ಯರ ಸಲಹೆ ಪಡೆದು ಸಮುದಾಯದ ಕ್ಷೇಮಾಭಿವೃದ್ಧಿಗೆ ಶ್ರಮಿ ಸುತ್ತೇನೆಂದರು. ಸಂಘದ ಹಿರಿಯ ಮುಖಂಡರಾದ ಮಹದೇವಯ್ಯ, ಮುನಿಹುಚ್ಚೇಗೌಡ, ರವಿ, ನಟರಾಜ್, ಬೋಜೇಗೌಡ, ಚಿಕ್ಕಣ್ಣ, ಪ್ರದೆಶ ಕುರುಬರ ಸಂಘದ ನಿರ್ದೇಶಕರಾದ ಚಿಕ್ಕಮ್ಮ, ಕೃಷ್ಣಕಾಂತ್, ಸತೀಶ್ ಮತ್ತಿತರರಿದ್ದರು.
ಪದಾಧಿಕಾರಿಗಳು: ಅನೇಕ ಸಂಘದ ಮುಖಂಡರ ಸಮ್ಮುಖದಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಸ್. ಚಂದ್ರಪ್ಪ, ಗೌರವ ಅಧ್ಯಕ್ಷ ಸುಂದರೇಶ್ಪೂಜಾರಿ, ಕಾರ್ಯಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಮಹೇಶ್, ಖಜಾಂಚಿಯಾಗಿ ಡಿ.ರುದ್ರೇಶ್ ಅವರನ್ನು ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು